ಅಯೋಧ್ಯೆ ತೀರ್ಪು ತಿರಸ್ಕರಿಸಿದ ಮುಸ್ಲಿಂ ಸಂಘಟನೆ

ಬುಖಾರಿ ನೇತೃತ್ವದಲ್ಲಿ ನಡೆದ ಧರ್ಮಗುರುಗಳ ಸಭೆಯಲ್ಲಿ ಈ ನಿರ್ಣಯ ಅಂಗೀಕರಿಸಲಾಗಿದೆ. ದೆಹಲಿ ಮತ್ತು ಉತ್ತರಪ್ರದೇಶದ ಧಾರ್ಮಿಕ ಮುಖಂಡರು ಮತ್ತು ವಿದ್ವಾಂಸರು ಈ ಸಭೆಯಲ್ಲಿ ಭಾಗವಹಿಸಿದ್ದರು. ಕೇಂದ್ರ ಈ ವಿಚಾರದಲ್ಲಿ ಮಧ್ಯಪ್ರವೇಶಿಸಿ ತನ್ನ ನಿಲುವನ್ನು ಸ್ಪಷ್ಟ ಪಡಿಸಲಿ. ಪ್ರಧಾನಮಂತ್ರಿ ಭೇಟಿಯ ಅವಕಾಶಕ್ಕಾಗಿ ಪತ್ರ ಬರೆದಿದ್ದೇವೆ. ಕಾಂಗ್ರೆಸ್ ಪಕ್ಷ ಅಲ್ಪ ಸಂಖ್ಯಾತರಿಗೆ ಮೋಸ ಮಾಡುತ್ತಿದೆ ಎಂದು ಬುಖಾರಿ ಕೇಂದ್ರ ಸರಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಮುಸ್ಲಿಂ ಸಂಘಟನೆಗಳನ್ನು ಬೆಂಬಲಿಸುವ ಎಲ್ಲಾ ಪಕ್ಷಗಳನ್ನು ನಾವು ಸ್ವಾಗತಿಸುತ್ತೇವೆ ಎಂದು ಮುಲಾಯಂ ಸಿಂಗ್ ಯಾದವ್ ತಮ್ಮನ್ನು ಭೇಟಿಯಾಗಿದ್ದನ್ನು ಸಮರ್ಥಿಸಿಕೊಂಡ ಬುಖಾರಿ, ವಿವಾದಿತ ಸ್ಥಳದಲ್ಲಿ ಮಸೀದಿಯನ್ನು ಹೊರತು ಪಡಿಸಿದ ಯಾವುದೇ ಪರಿಹಾರ ಸಾಧ್ಯವಿಲ್ಲ ಎನ್ನುವುದಾದರೆ ರಾಜೀ ಸಂಧಾನ ಯಾಕೆ ನಡೆಸಬೇಕೆಂದು ಸಭೆಯ ನಂತರ ಹೇಳಿಕೆ ನೀಡಿದ್ದಾರೆ.












Click it and Unblock the Notifications