ಜೆಡಿಎಸ್‌ನವರು ಗೂಂಡಾಗಳು: ಶೋಭಾ ಕರಂದ್ಲಾಜೆ

Shobha Karandlaje
ತುಮಕೂರು, ಅ.9: ಜೆಡಿಎಸ್ ವಿರುದ್ಧ ಇಂಧನ ಖಾತೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವೆ ಶೋಭ ಕರಂದ್ಲಾಜೆ ಆಕ್ರೋಶ ವ್ಯಕ್ತಪಡಿಸಿದ್ದು, ಅವರು ಗೂಂಡಾಗಳು. ಸುಳ್ಳು ಸುದ್ದಿ ಹಬ್ಬಿಸಿ ಜನರನ್ನು ದಿಕ್ಕುತಪ್ಪಿಸುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.

ಜೆಡಿಎಸ್ ಅವರ ಹಸ್ತಕ್ಷೇಪದಿಂದ ರಾಜ್ಯ ರಾಜಕೀಯ ವಲಯದಲ್ಲಿ ಅಲ್ಲೋಲ ಕಲ್ಲೋಲ ಉಂಟಾಗಿದೆ. ನಿರಾಧಾರ ಸುದ್ದಿಗಳನ್ನು ಸೃಷ್ಟಿ ಮಾಡಿ ಜನತೆಯನ್ನು ದಿಕ್ಕು ತಪ್ಪಿಸುತ್ತಿದ್ದಾರೆ. ಶಂಕರಲಿಂಗೇಗೌಡರನ್ನು ಜೆಡಿಎಸ್‌ನವರು ಭೇಟಿ ಮಾಡುವ ಉದ್ದೇಶವಾದರೂ ಏನು ಎಂದು ಶೋಭಾ ಪ್ರಶ್ನಿಸಿದ್ದಾರೆ.

ರೇವಣ್ಣ ಮತ್ತು ದತ್ತ ಅವರು ಶಾಸಕರ ಭವನಕ್ಕೆ ಬಂದು ಶಂಕರಲಿಂಗೇಗೌಡರನ್ನು ಭೇಟಿ ಮಾಡಲು ಪ್ರಯತ್ನಿಸಿದ್ದು ಎಷ್ಟು ಸರಿ ಎಂದರು. ಗೋವಾದಲ್ಲಿ ಬಿಜೆಪಿ ಶಾಸಕರನ್ನು ಗೃಹಬಂಧನದಲ್ಲಿ ಇಡಲಾಗಿದೆ. ಹೋಟೆಲ್ ನ ಸುತ್ತ ಪೊಲೀಸ್ ಕಾವಲು ಹಾಕಲಾಗಿದೆ. ಶಾಸಕರನ್ನು ಭೇಟಿ ನೀಡಲು ಪ್ರಯತ್ನಿಸುತ್ತಿಲ್ಲ ಎಂದು ಆರೋಪಿಸಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+