ಮಾನ್ಯ ರಾಜ್ಯಪಾಲರ ಮುಂದಿನ ನಡೆ ಏನು?

ಮೊದಲ ನಡೆ: ಬಿಜೆಪಿ ವಿಶ್ವಾಸಮತ ಸಾಬೀತಿನ ಬಗ್ಗೆ ರಾಜ್ಯಪಾಲರು ಕೇಂದ್ರ ಸರ್ಕಾರಕ್ಕ್ಕೆ ಪತ್ರ ರವಾನಿಸಿದ್ದಾರೆ. ಇಂದು ಸಂಜೆ 4 ಗಂಟೆ ಸುಮಾರಿಗೆ ಕೇಂದ್ರ ಸರ್ಕಾರ ಸಭೆ ಸೇರಲಿದೆ.ಕೇಂದ್ರದಿಂದ ನಿರ್ದೇಶನ ಬಂದ ನಂತರ ರಾಜ್ಯಪಾಲರು ತಮ್ಮ ಮುಂದಿನ ನಡೆಯ ಬಗ್ಗೆ ವಿಷದಪಡಿಸಲಿದ್ದಾರೆ.
ಎರಡನೆ ನಡೆ: ಕಾಂಗ್ರೆಸ್ ,ಜೆಡಿಎಸ್ ಶಾಸಕರು ರಾಜ್ಯಭವನಕ್ಕೆ ತೆರಳಿ ಆಡಳಿತ ಪಕ್ಷ ಬಹುಮತ ಪಡೆದ ವಿಧಾನದ ಬಗ್ಗೆ ಪ್ರಶ್ನಿಸಿ ದೂರು ಸಲ್ಲಿಸಿದ್ದಾರೆ. ಈಗ ಮತ್ತೆ ಅಖಾಡಕ್ಕಿಳಿದಿರುವ ಹಂಸರಾಜ್ ಭಾರಧ್ವಾಜ್ ಅವರು ದೂರಿನ ಆಧಾರದ ಮೇಲೆ ಇಡೀ ಸದನದ ಪ್ರಕ್ರಿಯೆಯನ್ನು ಅನೂರ್ಜಿತ ಎಂದು ಘೋಷಿಸಬಹುದು.
ಮೂರನೇ ನಡೆ: ವಿಧಾನಸಭೆಯನ್ನು ತಾತ್ಕಾಲಿಕವಾಗಿ ಅಮಾನತಿನಲ್ಲಿಡಬಹುದು. ಕೆಲ ದಿನಗಳ ನಂತರ ಮತ್ತೆ ಬಹುಮತ ಸಾಬೀತುಪಡಿಸುವಂತೆ ಬಿಎಸ್ ಯಡಿಯೂರಪ್ಪ ಅವರಿಗೆ ಸೂಚಿಸಬಹುದು. ಅಥವಾ ಪ್ರತಿಪಕ್ಷಗಳು ಸರ್ಕಾರ ರಚನೆಗೆ ಮುಂದಾದರೆ ಅವರಿಗೂ ಬಹುಮತ ಸಾಬೀತಿಗೆ ಅವಕಾಶ ಕಲ್ಪಿಸಬಹುದು.
ನಾಲ್ಕನೇ ನಡೆ: ಬಹುಮತ ಸಾಬೀತು ಗೊಂದಲಮಯವಾದರೆ, ರಾಷ್ಟ್ರಪತಿ ಆಡಳಿತ ಜಾರಿಗೆ ತರಬಹುದು. ಪರಿಸ್ಥಿತಿ ಸುಧಾರಿಸುವವರೆಗೂ ಸುಮಾರು ಆರು ತಿಂಗಳು ಅಥವಾ ವರ್ಷದವರೆಗೂ ರಾಷ್ಟ್ರಪತಿ ಆಡಳಿತ ವಿಸ್ತರಿಸಬಹುದು.
ಇದಲ್ಲದೆ, ಈ ಮುಂಚೆ ಕೆಸಿ ಕೊಂಡಯ್ಯ ನೇತೃತ್ವದ ಕಾಂಗ್ರೆಸ್ ನಾಯಕರು ರೆಡ್ಡಿ ಸೋದರರ ಲಾಭದಾಯಕ ಹುದ್ದೆಗೆ ಸಂಬಂಧಿಸಿದಂತೆ ಸಲ್ಲಿಸಿದ್ದ ಅರ್ಜಿಯನ್ನು ಮನ್ನಿಸಿ, ಜನಾರ್ದನ ರೆಡ್ಡಿ ಅವರ ಮೇಲೆ ಕ್ರಮ ಕೈಗೊಳ್ಳಬಹುದು.
ಅತಂತ್ರರಾದ ಅತೃಪ್ತರು: ಜೆಡಿಎಸ್ ಕಾಂಗ್ರೆಸ್ ನಡುವೆ ಸಿಕ್ಕ ಬಿಜೆಪಿಯ ಬಂಡಾಯ ನಾಯಕರು ಈಗ ಅನರ್ಹಗೊಂಡಿರುವುದರಿಂದ ದಿಕ್ಕು ತೋಚದೆ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಒಂದು ವೇಳೆ ಶಾಸಕತ್ವ ಅನರ್ಹತೆ ಜಾರಿಯಾದರೆ, ಇನ್ನೂ 6 ವರ್ಷಗಳ ಕಾಲ 11 ಬಿಜೆಪಿ ಹಾಗೂ 5 ಜನ ಪಕ್ಷೇತರರು ರಾಜಕೀಯ ಸಂನ್ಯಾಸ ತೆಗೆದುಕೊಳ್ಳಬೇಕಾಗುತ್ತದೆ.
-
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
March 19 Horoscope: ಈ ರಾಶಿಯವರಿಗೆ ಶುಭಸುದ್ದಿ, ಇತರರಿಗೆ ಎಚ್ಚರಿಕೆ -
13,00,000 ಕೋಟಿ ರೂಪಾಯಿ ಹೂಡಿಕೆದಾರರ ಹಣ ಉಡೀಸ್, ಭಾರತೀಯ ಷೇರುಪೇಟೆಯಲ್ಲಿ ಬಿರುಗಾಳಿ... Stock Market -
Traffic Advisory: ಮಾ.21 ರಂಜಾನ್ ಪ್ರಯುಕ್ತ ಬೆಂಗಳೂರಿನ ಈ ರಸ್ತೆಗಳಲ್ಲಿ ಸಂಚಾರ ನಿಷೇಧ, ಪರ್ಯಾಯ ಮಾರ್ಗ -
ಬೆಂಗಳೂರಿನಿಂದ ಬೀದರ್-ಕಲಬುರಗಿಗೆ ವಿಮಾನಸೇವೆ: 23ರೊಳಗೆ ಪ್ರಸ್ತಾವನೆ ಸಲ್ಲಿಸಲು ಸೂಚನೆ -
ಕರ್ನಾಟಕ ಉಪಚುನಾವಣೆ: ದಾವಣಗೆರೆ ದಕ್ಷಿಣ, ಬಾಗಲಕೋಟೆ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ -
ರೈಲ್ವೆ ಇಲಾಖೆಗೆ ಕರ್ನಾಟಕ ರಕ್ಷಣಾ ವೇದಿಕೆಯಿಂದ ಏ.15ರ ಗಡುವು: ಟಿ.ಎ.ನಾರಾಯಣಗೌಡ ಹೇಳಿದ್ದೇನು -
ವೆಜ್ ಬಿರಿಯಾನಿ 50, ಮಟನ್ ಬಿರಿಯಾನಿಗೆ 180 ರೂಪಾಯಿ ರೇಟ್ ಫಿಕ್ಸ್... Tamil Nadu Election -
Gold Price: ಯುಗಾದಿಗೆ ಚಿನ್ನಪ್ರಿಯರಿಗೆ ಶುಭ ಸುದ್ದಿ: ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ, ಬೆಳ್ಳಿ ದರ 15,000 ರೂ.ಕುಸಿತ -
ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಸಹೋದರಿ ಜವರಮ್ಮ ನಿಧನ -
ಆಕ್ಸಿಜನ್ ಸಿಲಿಂಡರ್ ನೆರವಿನಿಂದ ಎಸ್ಎಸ್ಎಲ್ಸಿ ಪರೀಕ್ಷೆ ಬರೆದ ವಿದ್ಯಾರ್ಥಿ: ಸಲಾಂ ಎಂದ ದೇಶದ ಜನತೆ












Click it and Unblock the Notifications