ಹೈಕೋರ್ಟ್ ತೀರ್ಪಿನ ನಂತರ ಏನಾಗಬಹುದು

Karnataka HC to decide Rebel MLAs fate
ಬೆಂಗಳೂರು, ಅ.12: ಜೆಡಿಎಸ್ ಕಾಂಗ್ರೆಸ್ ದೋಸ್ತಿ ಮಾಡಿಕೊಂಡು ಬಿಜೆಪಿ ಸರ್ಕಾರದ ವಿರುದ್ಧ ಬಂಡಾಯವೆದ್ದ್ದಿರುವ 16 ಜನ ಶಾಸಕರ ಭವಿಷ್ಯವನ್ನು ಇಂದು ರಾಜ್ಯ ಹೈಕೋರ್ಟ್ ನಲ್ಲಿ ಮುಖ್ಯ ನ್ಯಾಯಮೂರ್ತಿ ಜೆಎಸ್ ಖೆಹರ್ ಹಾಗೂ ನ್ಯಾಯಮೂರ್ತಿ ಎನ್ ಕುಮಾರ್ ಅವರಿರುವ ನ್ಯಾಯಪೀಠ ನಿರ್ಧರಿಸಲಿದೆ. ಮುಖ್ಯಮಂತ್ರಿಗಳ ಪರ ವಕೀಲ ಮಾಜಿ ಅಟಾರ್ನಿ ಜನರಲ್ ಸೋಲಿ ಸೋರಾಬ್ಜಿ ಹಾಗೂ ಅನರ್ಹಗೊಂಡ ಶಾಸಕರ ಪರ ಸುಪ್ರೀಂಕೋರ್ಟ್ ನ ಹಿರಿಯ ವಕೀಲ ಪಿ.ಪಿ.ರಾವ್ ಹಾಗೂ ಕೆ.ಜಿ ರಾಘವನ್ ವಾದ ಮಂಡಿಸಲಿದ್ದಾರೆ.

ನಿಯಾಮಾವಳಿ ಪ್ರಕಾರ ತಮಗೆ ಷೋಕಾಸ್ ನೋಟಿಸ್ ಜಾರಿಯಾದ ನಂತರ ಉತ್ತರಿಸಲು 7 ದಿನ ಕಾಲಾವಕಾಶ ನೀಡಬೇಕು. ಆದರೆ, ಸ್ಪೀಕರ್ ಮೂರು ದಿನ ಮಾತ್ರ ಕಾಲಾವಕಾಶ ನೀಡಿದ್ದರು. ಹೆಚ್ಚಿನ ಕಾಲಾವಕಾಶ ನೀಡುವಂತೆ ಮನವಿ ಮಾಡಿಕೊಂಡರೂ ಕೇಳದೆ, ಅ.10 ರಂದು ಸಂಜೆ ಐದು ಗಂಟೆಯೊಳಗೆ ಉತ್ತರ ನೀಡುವಂತೆ ಹೇಳಿ, ಮೂರುಗಂಟೆ ಸುಮಾರಿಗೆ ವಿಚಾರಣೆ ಆರಂಭಿಸಿ ಮುಗಿಸಿದ್ದಾರೆ. ಸ್ಪೀಕರ್ ಕ್ರಮ ದುರುದ್ದೇಶದಿಂದ ಕೂಡಿದೆ ಎಂದು ವಕೀಲ ಪಿಪಿ ರಾವ್ ವಾದಿಸಿದರು.

ಶಾಸಕರ ಅಹವಾಲು ಆಲಿಸಿದ ನಂತರವೇ ಸ್ಪೀಕರ್ ನಿರ್ಧಾರ ತೆಗೆದುಕೊಂಡಿದ್ದಾರೆ ಎಂದು ಮುಖ್ಯಮಂತ್ರಿಗಳ ಪರ ವಕೀಲ ಸೋಲಿ ಸೊರಾಬ್ಜಿ ಹೇಳಿದ್ದಾರೆ. ಇಂದು ಹೈಕೋರ್ಟ್ ನೀಡುವ ತೀರ್ಪನ್ನು ಅನುಸರಿಸಿ ಕೇಂದ್ರ ಸರ್ಕಾರ ಕೂಡಾ ತನ್ನ ಮುಂದಿನ ನಡೆಯನ್ನು ಇಡುವ ಸಂಭವವಿದೆ. ಇಂದು ಸಂಜೆ ಕಾಂಗ್ರೆಸ್ ಕೋರ್ ಕಮಿಟಿ ಸಭೆ ನಿಗದಿಯಾಗಿದೆ.

ಕೋರ್ಟ್ ತೀರ್ಪಿನ ನಂತರ ಏನಾಗಬಹುದು?:
ಸ್ಪೀಕರ್ ತೀರ್ಪುಗೆ ತಡೆಯಾಜ್ಞೆ ನೀಡಿದರೆ, ಮತ್ತೆ ಬಹುಮತ ಸಾಬೀತಿಗೆ ರಾಜ್ಯಪಾಲರು ಸೂಚಿಸಬಹುದು.ವಿಧಾನಸಭೆಯನ್ನು ತಾತ್ಕಾಲಿಕವಾಗಿ ಅಮಾನತಿನಲ್ಲಿಡಬಹುದು. ರಾಷ್ಟ್ರಪತಿ ಆಳ್ವಿಕೆ ಜಾರಿಯಲ್ಲಿದ್ದರೂ ಈ ಪ್ರಕ್ರಿಯೆಗೆ ಅವಕಾಶ ನೀಡಬಹುದು.

ಸ್ಪೀಕರ್ ಕ್ರಮವನ್ನು ಪುರಸ್ಕರಿಸಿದರೆ, ಅನರ್ಹಗೊಂಡ ಶಾಸಕರು 6 ವರ್ಷಗಳ ಕಾಲ ಯಾವುದೆ ಚುನಾವಣೆ ಸ್ಪರ್ಧಿಸುವಂತಿಲ್ಲ. ರಾಷ್ಟ್ರಪತಿ ಆಳ್ವಿಕೆ ಹೇರದಿದ್ದಲ್ಲಿ ಈ ಕ್ಷೇತ್ರಗಳಲ್ಲಿ 6 ತಿಂಗಳಲ್ಲಿ ಮರು ಚುನಾವಣೆ ನಡೆಸಬೇಕಾಗುತ್ತದೆ. ಚುನಾವಣೆ ಫಲಿತಾಂಶದ ನಂತರ ಮತ್ತೆ ಬಹುಮತ ಸಾಬೀತುಪಡಿಸಬೇಕು.

ಟ್ವಿಟ್ಟರಲ್ಲಿ ನಮ್ಮನ್ನು ಹಿಂಬಾಲಿಸಿ | ದಟ್ಸ್ ಕನ್ನಡ ಫ್ಯಾನ್ ಕ್ಲಬ್ ಸೇರಿರಿ | ಮೊಬೈಲಲ್ಲಿ ಕನ್ನಡ ಸುದ್ದಿ ಓದಿರಿ | ಹೂವಿನಂಗಡಿ 24/7 | ಕನ್ನಡ ಸುದ್ದಿಗಳ SMS

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+