ಶಾಸಕರ ಅನರ್ಹತೆ ಬಗ್ಗೆ ಹೈಕೋರ್ಟ್ ಏನು ಹೇಳ್ತು?

ಮುಖ್ಯ ನಾಯಮೂರ್ತಿ ಜೆಎಸ್ ಖೇಹರ್ ಮತ್ತು ನ್ಯಾ. ಎನ್ ಕುಮಾರ್ ಅವರನ್ನೊಳಗೊಂಡ 1ನೇ ನಂಬರ್ ಹಾಲ್ ನಲ್ಲಿನ ವಿಭಾಗೀಯ ಪೀಠ ತೆಗೆದುಕೊಂಡ ಈ ನಿರ್ಣಯ ಗುರುವಾರ ನಡೆಯಬಹುದಾದ ಎರಡನೇ ಬಾರಿಯ ವಿಶ್ವಾಸಮತ ಕೋರಿಕೆಯ ಮೇಲೆ ಪರಿಣಾಮ ಬೀರಲಿದೆ.
ಭಿನ್ನಮತೀಯ ಶಾಸಕರು ಮತ್ತು ಪಕ್ಷೇತರರು ಪ್ರತ್ಯೇಕವಾಗಿ ಎರಡು ರಿಟ್ ಅರ್ಜಿಗಳನ್ನು ಹೂಡಿದ್ದರು. ಭಿನ್ನಮತೀಯ ಬಿಜೆಪಿ ಶಾಸಕರ ಪರ ಮತ್ತು ವಿರುದ್ಧವಾದ ವಿಚಾರಣೆಯನ್ನು ಸಂಪೂರ್ಣವಾಗಿ ಆಲಿಸಿದ್ದು ಕೋರ್ಟು ಯಾವುದೇ ದಿನ ತೀರ್ಪು ನೀಡಬಹುದು. ಆದರೆ, ಪಕ್ಷೇತರರು ಹೂಡಿದ್ದ ಅರ್ಜಿಯಲ್ಲಿ ನೀಡಿದ್ದ ತಪ್ಪು ಮಾಹಿತಿಯ ತಿದ್ದುಪಡಿಗಾಗಿ ವಕೀಲರೇ ಅವಕಾಶ ಕೋರಿದ್ದರಿಂದ ವಿಚಾರಣೆಯನ್ನು ಮುಂದೂಡಲಾಗಿದೆ.
ಈ ಎರಡೂ ಅರ್ಜಿಗಳಲ್ಲಿ ಕೇಳಲಾಗಿದ್ದ ಮಧ್ಯಂತರ ಆಜ್ಞೆಯನ್ನು ನ್ಯಾಯಾಲಯ ತಿರಸ್ಕರಿಸಿದೆ. ಇದರಿಂದಾಗಿ ಸಭಾಧ್ಯಕ್ಷ ಕೆಜಿ ಬೋಪಯ್ಯ ಅವರು 16 ಶಾಸಕರನ್ನು ಅನರ್ಹಗೊಳಿಸಿ ನೀಡಿದ್ದ ಆದೇಶ ಸಿಂಧುವಾದಂತಾಗುತ್ತದೆ. 11 ಬಿಜೆಪಿ ಶಾಸಕರ ಅನರ್ಹತೆ ಕುರಿತಂತೆ ಏನು ತೀರ್ಪು ಹೈಕೋರ್ಟ್ ನೀಡುತ್ತದೆ ಎಂಬ ಬಗ್ಗೆ ಎಲ್ಲರ ಕುತೂಹಲ. ತೀರ್ಪನ್ನು ಇಂಥದೇ ದಿನ ಪ್ರಕಟಿಸಲಾಗುತ್ತದೆ ಎಂದು ನ್ಯಾಯಾಲಯ ಹೇಳಿಲ್ಲ.
ಸದ್ಯಕ್ಕೆ, ಎಲ್ಲ 11 ಶಾಸಕರ ಅನರ್ಹತೆಯನ್ನು ಹೈಕೋರ್ಟ್ ಎತ್ತಿಹಿಡಿದರೆ ಬಿಜೆಪಿ ಶಾಸಕರ ಸಂಖ್ಯೆ 106 ಆಗುತ್ತದೆ. ಅಂದರೆ, ಭಿನ್ನಮತೀಯರನ್ನೂ ಸೇರಿಸಿದ್ದರೆ ಬಿಜೆಪಿಗಿದ್ದ ಸಂಖ್ಯೆ 116, ಮತ್ತು ಸಭಾಧ್ಯಕ್ಷ ಸೇರಿ 117. ಈಗ ಭಿನ್ನಮತೀಯರನ್ನು ಹೊರತುಪಡಿಸಿದರೆ ಬಿಜೆಪಿಯ ಸಂಖ್ಯೆ 106. ವಿರೋಧ ಪಕ್ಷಗಳ ಬಲಾಬಲ ಹೀಗಿದೆ : ಕಾಂಗ್ರೆಸ್ 73 ಮತ್ತು ಜೆಡಿಎಸ್ 27 (ಒಟ್ಟು 28, ಆದರೆ ಪಕ್ಷ ತೊರೆದಿದ್ದ ಎಂಸಿ ಅಶ್ವತ್ಥ್ ಹಿಂದಿರುಗಿ ಬಂದಿಲ್ಲ) ಸೇರಿದರೆ ಒಟ್ಟು ಸಂಖ್ಯೆ 100.
ಒಂದು ವೇಳೆ ಬಿಜೆಪಿ ಮತ್ತೆ ಬಹುಮತ ಸಾಬೀತುಪಡಿಸಲು ಧೈರ್ಯ ಮಾಡಿ ಒಪ್ಪಿಗೆ ನೀಡಿದರೆ ಮತ್ತು ಪಕ್ಷದ ಯಾವುದೇ ಶಾಸಕರು ಕುದುರೆ ವ್ಯಾಪಾರಕ್ಕೆ ಬಲಿಯಾಗದಿದ್ದರೆ ಬಹುಮತ ಸಾಬೀತುಪಡಿಸುವುದು ಅಂತಹ ಕಷ್ಟವೇನಲ್ಲ. ಮುಂದೆ ಏನಾಗುವುದೋ ಆ ದೇವರೂ ಕೂಡ ಊಹಿಸಲಾರ. ಜನಾರ್ದನ ರೆಡ್ಡಿಯ ಹಿಡಿತದಿಂದಲೇ ಭಿನ್ನಮತೀಯರನ್ನು ಹೈಜಾಕ್ ಮಾಡಿದ್ದನ್ನು ಗಮನಿಸಿದರೆ, ಹಲ ಕಮಲದ ಪಕಳೆಗಳನ್ನು ಉದುರಿಸುವುದು ವಿರೋಧ ಪಕ್ಷಕ್ಕೆ ಕಷ್ಟವೂ ಅಲ್ಲ.
ದಟ್ಸ್ ಕನ್ನಡ ಫ್ಯಾನ್ ಕ್ಲಬ್ ಸೇರಿರಿ | ಮೊಬೈಲಲ್ಲಿ ಕನ್ನಡ ಸುದ್ದಿ ಓದಿರಿ | ಹೂವಿನಂಗಡಿ 24/7 | ಇಂಗ್ಲಿಷ್ ಲಿಪಿಯಲ್ಲಿ ಕನ್ನಡ ಎಸ್ಎಮ್ಎಸ್
-
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ












Click it and Unblock the Notifications