ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಅ.14: ಬಹುಮತ ಸಾಬೀತಿಗೆ ಹೊಸ ಡೆಡ್ ಲೈನ್

By Mahesh
|
Google Oneindia Kannada News

H Bharadwaj
ಬೆಂಗಳೂರು, ಅ.12: ಅ.11ರಂದು ವಿಧಾನಸಭೆಯಲ್ಲಿ ನಡೆದ ವಿಶ್ವಾಸಮತ ಯಾಚನೆ ಸರಿಯಾಗಿ ನಡೆದಿಲ್ಲ, ಬಿಜೆಪಿ ಸರ್ಕಾರಕ್ಕೆ ವಿಶ್ವಾಸಮತ ಯಾಚನೆಗೆ ಇನ್ನೊಂದು ಅವಕಾಶ ನೀಡಲಾಗುವುದು, ಅಕ್ಟೋಬರ್ 14ರ ಬೆಳಗ್ಗೆ 11ಕ್ಕೆ ಸ್ಪಷ್ಟವಾಗಿ ಬಹುಮತ ಸಾಬೀತುಪಡಿಸುವಂತೆ ರಾಜ್ಯಪಾಲರು ಸಿಎಂ ಯಡಿಯೂರಪ್ಪ ಅವರಿಗೆ ಬರೆದಿರುವ ಪತ್ರದಲ್ಲಿ ಸೂಚಿಸಿದ್ದಾರೆ.

ಅ.11ರಂದು ಕಾನೂನು ಹಾಗೂ ಸಾಂವಿಧಾನಿಕ ಕ್ರಮಗಳನ್ನು ಸರಿಯಾಗಿ ಪಾಲಿಸಿಲ್ಲ ಎಂದಿರುವ ರಾಜ್ಯಪಾಲರು ಇಂದು ಸುದ್ದಿಗೋಷ್ಠಿಯಲ್ಲಿ ವಿವರಣೆ ನೀಡುವ ಸಾಧ್ಯತೆಯಿದೆ.

ಈ ಮಧ್ಯೆ ದೆಹಲಿ ತಲುಪಿರುವ ಸಿಎಂ ಯಡಿಯೂರಪ್ಪ ಅವರು ಸುದ್ದಿಗಾರರೊಂದಿಗೆ ಮಾತನಾಡುತ್ತಾ, ರಾಜ್ಯಪಾಲರ ಪತ್ರ ತಲುಪಿದೆ. ಅ.14 , 11 ಗಂಟೆಗೆ ಮತ್ತೊಮ್ಮೆ ಬಹುಮತ ಸಾಬೀತು ಮಾಡಲು ಸೂಚಿಸಿದ್ದಾರೆ. ಅ.11 ರಂದು ವಿಶ್ವಾಸಮತ ಗಳಿಸಿದ ಮೇಲೆ ರಾಷ್ಟ್ರಪತಿ ಆಳ್ವಿಕೆಗೆ ಶಿಫಾರಸ್ಸು ಮಾಡಿದ್ದ ರಾಜ್ಯಪಾಲರ ಈ ಕ್ರಮ ಆಶ್ಚರ್ಯವನ್ನು ಉಂಟು ಮಾಡಿದೆ. ಮುಂದಿನ ಕ್ರಮದ ಬಗ್ಗೆ ರಾಷ್ಟ್ರೀಯ ನಾಯಕರೊಡನೆ ಚರ್ಚಿಸುತ್ತೇನೆ ಎಂದು ಪ್ರತಿಕ್ರಿಯಿಸಿದ್ದಾರೆ.


ಟ್ವಿಟ್ಟರಲ್ಲಿ ನಮ್ಮನ್ನು ಹಿಂಬಾಲಿಸಿ | ದಟ್ಸ್ ಕನ್ನಡ ಫ್ಯಾನ್ ಕ್ಲಬ್ ಸೇರಿರಿ | ಮೊಬೈಲಲ್ಲಿ ಕನ್ನಡ ಸುದ್ದಿ ಓದಿರಿ | ಹೂವಿನಂಗಡಿ 24/7 | ಕನ್ನಡ ಸುದ್ದಿಗಳ SMS

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X