ಗಣಿಧಣಿಗಳ ಮನೆಯಲ್ಲಿ ಚನ್ನಪಟ್ಟಣ ಶಾಸಕ ?

ಆದರೆ, ಇನ್ನೊಂದು ಮೂಲಗಳ ಪ್ರಕಾರ, ಅಶ್ವಥ್ ತಮಿಳುನಾಡಿನಲ್ಲಿದ್ದು ದೂರವಾಣಿಯಲ್ಲಿ ನನ್ನ ಜೊತೆ ನಿರಂತರವಾಗಿ ಸಂಪರ್ಕದಲ್ಲಿದ್ದಾರೆ. ಮತ್ತು ಮಂಗಳವಾರದ (ಅ .12) ಹೊತ್ತಿಗೆ ಬೆಂಗಳೂರು ಬರಲಿದ್ದಾರೆಂದು ಅವರ ಆಪ್ತ ಸಹಾಯಕರು ಹೇಳಿಕೆ ನೀಡಿದ್ದರು. ಚೆಲುವರಾಯ ಸ್ವಾಮಿ ಅವರು ಮಾತ್ರ ಒಮ್ಮೆ ಅಶ್ವಥ್ ಅವರನ್ನು ಸಂಪರ್ಕಿಸಿದ್ದರೂ, ಅವರ ಇರುವಿಕೆ ಬಗ್ಗೆ ಯಾವುದೆ ಸ್ಪಷ್ಟ ಚಿತ್ರಣಸಿಕ್ಕಿಲ್ಲ.
ಕಳೆದ ಗುರುವಾರ ಮಹಾಲಯ ಅಮಾವಾಸ್ಯೆ ಪೂಜೆಯ ನಂತರ ತಮ್ಮ ಕ್ಷೇತ್ರದಿಂದ ನಾಪತ್ತೆಯಾಗಿರುವ ಅಶ್ವಥ್ ಇದುವರೆಗೂ ಪತ್ತೆಯಾಗಿಲ್ಲ. ಅಶ್ವಥ್ ಆಪರೇಶನ್ ಕಮಲಕ್ಕೆ ಬಲಿಯಾಗಿದ್ದಾರೆಂದು ಹೇಳಲಾಗುತ್ತಿತ್ತು. ಅ.11ರಂದು ಬಿಜೆಪಿ ಶಾಸಕರ ಜೊತೆ ಅಶ್ವಥ್ ಅಸೆಂಬ್ಲಿಯಲ್ಲಿ ಪ್ರತ್ಯಕ್ಷ ವಾಗಬಹುದೆಂದು ನಿರೀಕ್ಷಿಸಲಾಗುತ್ತಿತ್ತು. ಈ ನಡುವೆ ಕಸ್ತೂರಿ ಕರ್ನಾಟಕ ಜನಪರ ವೇದಿಕೆ ಶಾಸಕ ಅಶ್ವಥ್ ಅವರನ್ನು ಹುಡುಕಿ ಕೊಡುವಂತೆ ಸ್ಥಳೀಯ ಪೊಲೀಸರಿಗೆ ದೂರು ನೀಡಿದ್ದಾರೆ.
ಬಿಜೆಪಿ, ಕಾಂಗ್ರೆಸ್ ಪಕ್ಷಗಳಂತೆ ಜೆಡಿಎಸ್ ಕೂಡಾ ತನ್ನ ವಜ್ರದಂತಿರುವ 28 ಶಾಸಕರಿಗೆ ವಿಪ್ ನೀಡಿತ್ತು. ಆದರೆ, ಸಂಪರ್ಕ ಕಡಿದುಕೊಂಡಿರುವ ಅಶ್ವಥ್ , ಅ.14 ರಂದು ಸದನಕ್ಕೆ ಹಾಜರಾಗಿ ವಿಶ್ವಾಸಮತ ಯಾಚನೆ ಸಂದರ್ಭದಲ್ಲಿ ಹಾಜರಾಗುವ ನಿರೀಕ್ಷೆ ಹೊಂದಲಾಗಿದೆ. ಆದರೆ, ಮತ ಯಾರ ಪರ ಹಾಕುತ್ತಾರೆ ಎಂಬುದು ಯಕ್ಷ ಪ್ರಶ್ನೆಯಾಗಿದೆ.
ಇದೇ ರೀತಿ ಬಿಜೆಪಿಯ ಲಿಂಗಸುಗೂರು ಶಾಸಕ ಮಾನಪ್ಪ ವಜ್ಜಲ ಅವರ ಮನದ ಇಂಗಿತ ಇನ್ನೂ ಹೊರಬಿದ್ದಿಲ್ಲ. ಬಹುಮತ ಸಾಬೀತುಪಡಿಸುವ ಸಂದರ್ಭದಲ್ಲಿ ಇದು ನಿರ್ಣಾಯಕವಾಗುವ ಎಲ್ಲಾ ಸಾಧ್ಯತೆಗಳಿವೆ.ಈ ಮಧ್ಯೆ ಅನರ್ಹಗೊಂಡ ಶಾಸಕರ ಸದಸ್ಯತ್ವ ಕುರಿತ ವಿಚಾರಣೆಯ ತೀರ್ಪನ್ನು ಕಾಯ್ದಿರಿಸಿರುವ ಹೈಕೋರ್ಟ್, ಅ.18 ರ ಬೆಳಗ್ಗೆ 10.30 ತೀರ್ಪು ನೀಡುವುದಾಗಿ ಪ್ರಕಟಿಸಿದೆ.
ಟ್ವಿಟ್ಟರಲ್ಲಿ ನಮ್ಮನ್ನು ಹಿಂಬಾಲಿಸಿ | ದಟ್ಸ್ ಕನ್ನಡ ಫ್ಯಾನ್ ಕ್ಲಬ್ ಸೇರಿರಿ | ಮೊಬೈಲಲ್ಲಿ ಕನ್ನಡ ಸುದ್ದಿ ಓದಿರಿ | ಹೂವಿನಂಗಡಿ 24/7 | ಕನ್ನಡ ಸುದ್ದಿಗಳ SMS
-
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
Horoscope March 9; ಈ ರಾಶಿಯವರ ಅದೃಷ್ಟವೇ ಬದಲಾಗುತ್ತೆ: 12 ರಾಶಿ ಭವಿಷ್ಯ ತಿಳಿಯಿರಿ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
Sensex crash: ಷೇರು ಮಾರುಕಟ್ಟೆಯಲ್ಲಿ ಭಾರಿ ಸಂಚಲನ; ಸೆನ್ಸೆಕ್ಸ್ 2100 ಅಂಕ ಕುಸಿತ -
E-Bus: ಕರ್ನಾಟಕದ ಹೊಸ ಯೋಜನೆಯಡಿ ಗ್ರಾಮೀಣ ಭಾಗಗಳಲ್ಲೂ ಓಡಾಡಲಿವೆ 1950 ಎಲೆಕ್ಟ್ರಿಕ್ ಬಸ್ಗಳು -
Prediction on Donald Trump: ಟ್ರಂಪ್ ಗೆಲುವು, ಇರಾನ್ ಯುದ್ಧ ಭವಿಷ್ಯ: 3 ಭವಿಷ್ಯವಾಣಿಯಲ್ಲಿ 2 ನಿಜ, ಮತ್ತೊಂದೇನು -
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
Sanju Samson: ಟಿ20 ವಿಶ್ವಕಪ್ ಗೆಲುವಿನ ಬಳಿಕ ಕ್ರಿಕೆಟ್ ದೇವರ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಸಂಜು ಸ್ಯಾಮ್ಸನ್












Click it and Unblock the Notifications