ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ರಾಷ್ಟ್ರಪತಿ ಆಳ್ವಿಕೆ ಬಂದರೆ ಉಗ್ರ ಹೋರಾಟ

By Mahesh
|
Google Oneindia Kannada News

R Ashoka
ಬೆಂಗಳೂರು, ಅ.12: ಬಿಜೆಪಿ ಸರ್ಕಾರವನ್ನು ಕೆಳಗಿಳಿಸುವ ಸಲುವಾಗಿ ನಿಯುಕ್ತಿಗೊಂಡಿರುವ ರಾಜ್ಯಪಾಲ ಹಂಸರಾಜ್ ಭಾರಧ್ವಾಜ್ ಅಕ್ಷರಶಃ ವಿರೋಧ ಪಕ್ಷ ನಾಯಕರಂತೆ ವರ್ತಿಸುತ್ತಿದ್ದಾರೆ. ಸರ್ಕಾರವನ್ನು ಅತಂತ್ರಗೊಳಿಸುವ ಜೆಡಿಎಸ್ , ಕಾಂಗ್ರೆಸ್ ನಾಟಕಕ್ಕೆ ಅವರೇ ಡೈರೈಕ್ಟರ್ , ಕುಮಾರಸ್ವಾಮಿ ಹಾಗೂ ಸಿದ್ದರಾಮಯ್ಯ ಮೇನ್ ಆಕ್ಟರ್ಸ್, ಅಕ್ರಮ ಗಣಿ ದುಡ್ಡಿನಿಂದ ಈ ನಾಟಕ ರೂಪಿಸಲಾಗಿದ್ದು, ಕೇಂದ್ರ ಸರ್ಕಾರದ ಸಹ ನಿರ್ದೇಶನ ಕೂಡಾ ಇದಕ್ಕಿದೆ ಎಂದು ಬಿಜೆಪಿ ನಾಯಕ ಸಿ.ಟಿ ರವಿ. ಲೇವಡಿ ಮಾಡಿದರು.

ರಾಜ್ಯಪಾಲರ ವಿರುದ್ಧ ಕತ್ತಿಮಸೆಯುತ್ತಿರುವ ಬಿಜೆಪಿ ಯುವ ಕಾರ್ಯಕರ್ತರನ್ನು ಸಮಾಧಾನಗೊಳಿಸಿರುವ ರಾಜ್ಯ ಗೃಹಸಚಿವ ಆರ್ ಅಶೋಕ್, ದೆಹಲಿಯಲ್ಲಿ ರಾಷ್ಟ್ರಪತಿಗಳನ್ನು ಭೇಟಿ ಮಾಡಿ ಬರುವ ತನಕ ಸುಮ್ಮನಿರುವಂತೆ ಸೂಚಿಸಿದ್ದಾರೆ. ಕೇಂದ್ರ ಸರ್ಕಾರ ತಪ್ಪು ನಿರ್ಧಾರ ತೆಗೆದುಕೊಂಡರೆ, ರಾಜ್ಯವ್ಯಾಪಿ ಹೋರಟವನ್ನು ಎದುರಿಸಬೇಕಾಗುತ್ತದೆ ಎಂದಿದ್ದಾರೆ.

ಭಾರಧ್ವಾಜ್ ವಿರುದ್ಧ ಕರ್ನಾಟಕದ ಎಲ್ಲಾ ಬಿಜೆಪಿ ಘಟಕದವರು ರಾಜ್ಯವ್ಯಾಪಿ ಪ್ರತಿಭಟನೆ ಹಮ್ಮಿಕೊಂಡಿದ್ದಾರೆ. ರಾಜ್ಯದಲ್ಲಿ ರಾಷ್ಟ್ರಪತಿ ಆಡಳಿತಕ್ಕೆ ಶಿಫಾರಸ್ಸು ಮಾಡಿರುವ ಕ್ರಮವನ್ನು ಖಂಡಿಸಿ, ಕಪ್ಪುಬಾವುಟ ಪ್ರದರ್ಶಿಸಲು ಸಿದ್ಧತೆ ನಡೆದಿದೆ. ಕೇಂದ್ರ ಸರ್ಕಾರ ರಾಜ್ಯಪಾಲರನ್ನು ವಾಪಾಸ್ ಕರೆಸಿಕೊಳ್ಳುವ ತನಕ ಹೋರಾಟ ನಿಲ್ಲುವುದಿಲ್ಲ ಎಂದು ಬಿಜೆಪಿ ಕಾರ್ಯಕರ್ತರು ಹೇಳಿದ್ದಾರೆ.

ಟ್ವಿಟ್ಟರಲ್ಲಿ ನಮ್ಮನ್ನು ಹಿಂಬಾಲಿಸಿ | ದಟ್ಸ್ ಕನ್ನಡ ಫ್ಯಾನ್ ಕ್ಲಬ್ ಸೇರಿರಿ | ಮೊಬೈಲಲ್ಲಿ ಕನ್ನಡ ಸುದ್ದಿ ಓದಿರಿ | ಹೂವಿನಂಗಡಿ 24/7 | ಕನ್ನಡ ಸುದ್ದಿಗಳ SMS

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X