Get Updates
Get notified of breaking news, exclusive insights, and must-see stories!

ರಾಷ್ಟ್ರಪತಿ ಆಳ್ವಿಕೆ ಬಂದರೆ ಉಗ್ರ ಹೋರಾಟ

R Ashoka
ಬೆಂಗಳೂರು, ಅ.12: ಬಿಜೆಪಿ ಸರ್ಕಾರವನ್ನು ಕೆಳಗಿಳಿಸುವ ಸಲುವಾಗಿ ನಿಯುಕ್ತಿಗೊಂಡಿರುವ ರಾಜ್ಯಪಾಲ ಹಂಸರಾಜ್ ಭಾರಧ್ವಾಜ್ ಅಕ್ಷರಶಃ ವಿರೋಧ ಪಕ್ಷ ನಾಯಕರಂತೆ ವರ್ತಿಸುತ್ತಿದ್ದಾರೆ. ಸರ್ಕಾರವನ್ನು ಅತಂತ್ರಗೊಳಿಸುವ ಜೆಡಿಎಸ್ , ಕಾಂಗ್ರೆಸ್ ನಾಟಕಕ್ಕೆ ಅವರೇ ಡೈರೈಕ್ಟರ್ , ಕುಮಾರಸ್ವಾಮಿ ಹಾಗೂ ಸಿದ್ದರಾಮಯ್ಯ ಮೇನ್ ಆಕ್ಟರ್ಸ್, ಅಕ್ರಮ ಗಣಿ ದುಡ್ಡಿನಿಂದ ಈ ನಾಟಕ ರೂಪಿಸಲಾಗಿದ್ದು, ಕೇಂದ್ರ ಸರ್ಕಾರದ ಸಹ ನಿರ್ದೇಶನ ಕೂಡಾ ಇದಕ್ಕಿದೆ ಎಂದು ಬಿಜೆಪಿ ನಾಯಕ ಸಿ.ಟಿ ರವಿ. ಲೇವಡಿ ಮಾಡಿದರು.

ರಾಜ್ಯಪಾಲರ ವಿರುದ್ಧ ಕತ್ತಿಮಸೆಯುತ್ತಿರುವ ಬಿಜೆಪಿ ಯುವ ಕಾರ್ಯಕರ್ತರನ್ನು ಸಮಾಧಾನಗೊಳಿಸಿರುವ ರಾಜ್ಯ ಗೃಹಸಚಿವ ಆರ್ ಅಶೋಕ್, ದೆಹಲಿಯಲ್ಲಿ ರಾಷ್ಟ್ರಪತಿಗಳನ್ನು ಭೇಟಿ ಮಾಡಿ ಬರುವ ತನಕ ಸುಮ್ಮನಿರುವಂತೆ ಸೂಚಿಸಿದ್ದಾರೆ. ಕೇಂದ್ರ ಸರ್ಕಾರ ತಪ್ಪು ನಿರ್ಧಾರ ತೆಗೆದುಕೊಂಡರೆ, ರಾಜ್ಯವ್ಯಾಪಿ ಹೋರಟವನ್ನು ಎದುರಿಸಬೇಕಾಗುತ್ತದೆ ಎಂದಿದ್ದಾರೆ.

ಭಾರಧ್ವಾಜ್ ವಿರುದ್ಧ ಕರ್ನಾಟಕದ ಎಲ್ಲಾ ಬಿಜೆಪಿ ಘಟಕದವರು ರಾಜ್ಯವ್ಯಾಪಿ ಪ್ರತಿಭಟನೆ ಹಮ್ಮಿಕೊಂಡಿದ್ದಾರೆ. ರಾಜ್ಯದಲ್ಲಿ ರಾಷ್ಟ್ರಪತಿ ಆಡಳಿತಕ್ಕೆ ಶಿಫಾರಸ್ಸು ಮಾಡಿರುವ ಕ್ರಮವನ್ನು ಖಂಡಿಸಿ, ಕಪ್ಪುಬಾವುಟ ಪ್ರದರ್ಶಿಸಲು ಸಿದ್ಧತೆ ನಡೆದಿದೆ. ಕೇಂದ್ರ ಸರ್ಕಾರ ರಾಜ್ಯಪಾಲರನ್ನು ವಾಪಾಸ್ ಕರೆಸಿಕೊಳ್ಳುವ ತನಕ ಹೋರಾಟ ನಿಲ್ಲುವುದಿಲ್ಲ ಎಂದು ಬಿಜೆಪಿ ಕಾರ್ಯಕರ್ತರು ಹೇಳಿದ್ದಾರೆ.

ಟ್ವಿಟ್ಟರಲ್ಲಿ ನಮ್ಮನ್ನು ಹಿಂಬಾಲಿಸಿ | ದಟ್ಸ್ ಕನ್ನಡ ಫ್ಯಾನ್ ಕ್ಲಬ್ ಸೇರಿರಿ | ಮೊಬೈಲಲ್ಲಿ ಕನ್ನಡ ಸುದ್ದಿ ಓದಿರಿ | ಹೂವಿನಂಗಡಿ 24/7 | ಕನ್ನಡ ಸುದ್ದಿಗಳ SMS

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+