ರಾಜ್ಯಪಾಲರ ಸವಾಲು ಸ್ವೀಕರಿಸಿದ ಯಡಿಯೂರಪ್ಪ

ಸಂಜೆ ಬಿಜೆಪಿಯ ಹಿರಿಯ ನಾಯಕ ಲಾಲ್ ಕೃಷ್ಣ ಆಡ್ವಾಣಿ ಅವರ ಮನೆಯಲ್ಲಿ ಯಡಿಯೂರಪ್ಪ ಸೇರಿದಂತೆ ಬಿಜೆಪಿಯ ಹಿರಿಯ ಧುರೀಣರು ಚರ್ಚೆ ನಡೆಸಿದ ನಂತರ ಈ ನಿರ್ಣಯಕ್ಕೆ ಬರಲಾಗಿದೆ. ರಾಷ್ಟ್ರಪತಿ ಆಳ್ವಿಕೆಗೆ ಅವಕಾಶ ನೀಡದೆ ಬಹುಮತ ಸಾಬೀತುಪಡಿಸುವುದೇ ಜಾಣ ನಡೆ ಎಂಬ ತೀರ್ಮಾನಕ್ಕೆ ಬಿಜೆಪಿ ಹೈಕಮಾಂಡ್ ಬಂದಿದೆ. ಈ ಕುರಿತಾಗಿ ಮುಖ್ಯಮಂತ್ರಿ ಕಚೇರಿಯಿಂದಲೂ ಆದೇಶ ಹೊರಬಿದ್ದಿದೆ.
ರಾಜ್ಯಪಾಲ ಹಂಸರಾಜ್ ಭಾರದ್ವಾಜ್ ಅವರು ರಾಷ್ಟ್ರಪತಿ ಆಳ್ವಿಕೆಗೆ ಶಿಫಾರಸು ಮಾಡಿದ ಮರುದಿನ ಮತ್ತೆ ಬಹುಮತ ಸಾಬೀತುಪಡಿಸಲು ಅವಕಾಶ ನೀಡಿದ್ದಕ್ಕೆ ನವದೆಹಲಿಗೆ ತೆರಳಿದ್ದ ಯಡಿಯೂರಪ್ಪ ದಿಗ್ಭ್ರಮೆ ವ್ಯಕ್ತಪಡಿಸಿದ್ದರು. ಬಹುಮತ ಈಗಾಗಲೆ ಸಾಬೀತುಪಡಿಸಲಾಗಿದೆ, ಮತ್ತೇಕೆ ಎರಡನೇ ಅವಕಾಶ ಎಂದು ಆಶ್ಚರ್ಯ ವ್ಯಕ್ತಪಡಿಸಿದ್ದರು. ಆದರೆ, ಭಿನ್ನಮತೀಯರ ಅನರ್ಹತೆ ಕುರಿತ ತೀರ್ಪನ್ನು ಕರ್ನಾಟಕ ಹೈಕೋರ್ಟ್ ಕಾಯ್ದಿರಿಸಿರುವುದು ಮತ್ತು ಪಕ್ಷೇತರರ ವಿಚಾರಣೆ ಮುಂದೂಡಿದ್ದು ಯಡಿಯೂರಪ್ಪನವರಲ್ಲಿ ಸ್ಫೂರ್ತಿಯನ್ನು ಮರಳಿ ತರಿಸಿದೆ.
ಅ. 14ರಂದು ವಿಶ್ವಾಸಮತ ಯಾಚಿಸುವುದು ಖಚಿತವಾಗಿರುವುದರಿಂದ ಎಲ್ಲ ಬಿಜೆಪಿ ಶಾಸಕರು ನವದೆಹಲಿಯಿಂದ ಇಂದು ಸಂಜೆ 8 ಗಂಟೆಗೆ ಬೆಂಗಳೂರಿಗೆ ಮರಳಿ ಬರಲಿದ್ದಾರೆ.
ರಾಜ್ಯಪಾಲರ ಬಳಿ ಜೆಡಿಎಸ್, ಕಾಂಗ್ರೆಸ್ : ಶಾಸಕರ ಅನರ್ಹತೆ ಕುರಿತ ತೀರ್ಪನ್ನು ಕರ್ನಾಟಕ ಹೈಕೋರ್ಟ್ ಕಾಯ್ದಿರಿಸುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ರಾಜಕೀಯ ಚಟುವಟಿಕೆಗಳು ಮತ್ತೆ ಗರಿಗೆದರಿವೆ. ಯಡಿಯೂರಪ್ಪನವರು ಸವಾಲನ್ನು ಸ್ವೀಕರಿಸಿದ್ದು ಒಂದು ಕಾರಣವಾದರೆ, ವಿಶ್ವಾಸಮತ ವಿರೋಧಿಸಲು ಬಲವರ್ಧನೆಗೆ ಕಾರ್ಯತಂತ್ರ ರೂಪಿಸಲು ಎರಡು ಪಕ್ಷಗಳು ನಿರತವಾಗಿವೆ.
ಈಗಾಗಲೆ ಕಾಂಗ್ರೆಸ್ ನಾಯಕರಾದ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಆರ್ ವಿ ದೇಶಪಾಂಡೆ, ಕಾರ್ಯಾದ್ಯಕ್ಷ ಡಿಕೆ ಶಿವಕುಮಾರ್ ಮೊದಲಾದವರು ರಾಜ್ಯಪಾಲರ ಬಳಿ ಹೋಗಿದ್ದಾರೆ. ಅವರನ್ನು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ಡಿ ಕುಮಾರಸ್ವಾಮಿ, ಎಂಸಿ ನಾಣಯ್ಯ ಮುಂತಾದವರು ಸೇರಿಕೊಂಡಿರುವುದು ಭಾರೀ ಕುತೂಹಲಕ್ಕೆ ಕಾರಣವಾಗಿದೆ.
ಎರಡೂ ಪಕ್ಷಗಳ ಬಲಾಬಲ : ಅನರ್ಹಗೊಂಡ 11 ಬಿಜೆಪಿ ಶಾಸಕರನ್ನು ಹೊರತುಪಡಿಸಿದರೆ ಬಿಜೆಪಿ 106 ಸಂಖ್ಯಾಬಲ ಹೊಂದಿದೆ. ಕಾಂಗ್ರೆಸ್ 73 ಮತ್ತು ಜೆಡಿಎಸ್ 28 ಶಾಸಕರ ಬಲ ಪಡೆದಿದೆ. ಇವೆರಡು ಪಕ್ಷಗಳ ಒಟ್ಟು ಸಂಖ್ಯೆ 101. ಬಹುಮತ ಸಾಬೀತಿಗೆ ಬೇಕಿರುವ ಕನಿಷ್ಠ ಸಂಖ್ಯೆ 103. ಇದರಲ್ಲಿ ಕುಮಾರಸ್ವಾಮಿಯಿಂದ 'ಕಳಪೆ ವಜ್ರ' ಎಂದು ಹೊಗಳಿಸಿಕೊಂಡಿದ್ದ ಜೆಡಿಎಸ್ ನ ಚನ್ನಪಟ್ಟಣದ ಶಾಸಕ ಎಂಸಿ ಅಶ್ವತ್ಥ್ ಅವರು ಜನಾರ್ದನ ರೆಡ್ಡಿ ಮನೆಯಲ್ಲಿ ಕಾಣಿಸಿಕೊಂಡಿದ್ದು ಕುದುರೆ ವ್ಯಾಪಾರ ಕುದುರಿಕೊಂಡಿದ್ದಕ್ಕೆ ಸಾಕ್ಷಿ ಒದಗಿಸಿದೆ. ಜೊತೆಗೆ ಕಾಂಗ್ರೆಸ್ 8ರಿಂದ 10 ಶಾಸಕರು ಕೂಡ ವಿಶ್ವಾಸಮತದಂದು ಗೈರಾಗಬಹುದೆಂಬ ಸಂಗತಿ ರಾಜಕೀಯ ಅಂಗಳದಲ್ಲಿ ಸುಳಿದಾಡುತ್ತಿರುವುದ ಮತ್ತಷ್ಟು ಕುತೂಹಲಕ್ಕೆ ಕಾರಣವಾಗಿದೆ.
ಪತ್ರಕರ್ತರಿಂದ ಪ್ರತಿಭಟನೆ : ಅ.11ರಂದು ವಿಧಾನಸಭೆಯಲ್ಲಿ ಪೊಲೀಸರಿಂದ ಮಾಧ್ಯಮ ಪ್ರತಿನಿಧಿಗಳ ಮೇಲೆ ನಡೆದ ದೌರ್ಜನ್ಯವನ್ನು ಖಂಡಿಸಿ ಮತ್ತು ತಪ್ಪಿತಸ್ಥರ ಮೇಲೆ ಕ್ರಮ ಜರುಗಿಸಬೇಕೆಂದು ಆಗ್ರಹಿಸಿ ಬೆಂಗಳೂರು ವರದಿಗಾರರ ಕೂಟ ಪ್ರತಿಭಟನೆ ಹಮ್ಮಿಕೊಂಡಿದೆ. ಕಬ್ಬನ್ ಪಾರ್ಕ್ ನಲ್ಲಿರುವ ಗಾಂಧಿ ಪ್ರತಿಮೆ ಬಳಿ ಅ.13, ಬುಧವಾರದಂದು ಪ್ರತಿಭಟನೆ ನಡೆಯಲಿದೆ ಕೂಟ ಪ್ರಕಟಣೆಯಲ್ಲಿ ಹೇಳಿದೆ.
ದಟ್ಸ್ ಕನ್ನಡ ಫ್ಯಾನ್ ಕ್ಲಬ್ ಸೇರಿರಿ | ಮೊಬೈಲಲ್ಲಿ ಕನ್ನಡ ಸುದ್ದಿ ಓದಿರಿ | ಹೂವಿನಂಗಡಿ 24/7 | ಇಂಗ್ಲಿಷ್ ಲಿಪಿಯಲ್ಲಿ ಕನ್ನಡ ಎಸ್ಎಮ್ಎಸ್
-
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ












Click it and Unblock the Notifications