ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ವಿಧಾನಸಭೆಯಲ್ಲಿ ನಾಳೆ ಹಲವು ಕಟ್ಟುಪಾಡು

By Shami
|
Google Oneindia Kannada News

Speaker KG Bopaiah
ಬೆಂಗಳೂರು, ಅ. 13: ಬಿಎಸ್ ಯಡಿಯೂರಪ್ಪ ಅವರಿಗೆ ರಾಜ್ಯಪಾಲರು ನೀಡಿದ ಕರೆಯೋಲೆ ಮೇರೆಗೆ 14 ಅಕ್ಟೋಬರ್ ಗುರುವಾರ ಬೆಳಗ್ಗೆ ಮತ್ತೆ ವಿಶ್ವಾಸ ಮತ ಯಾಚನೆ ವಿಧಾನಸಭೆಯಲ್ಲಿ ನಡೆಯಲಿದೆ. ಸಭೆ ಬೆಳಗ್ಗೆ 11 ಗಂಟೆಗೆ ಸೇರಲಿದೆ.

ಮೂರು ದಿನಗಳ ಹಿಂದೆ ಜರುಗಿದ ವಿಶ್ವಾಸಮತ ಯಾಚನೆ ಸಂದರ್ಭದಲ್ಲಿ ಉಂಟಾದ ಲೋಪದೋಷಗಳು ಪುನರಾವರ್ತನೆ ಆಗಬಾರದೆಂಬ ಉದ್ದೇಶದಿಂದ ಸಭಾಧ್ಯಕ್ಷ ಕೆಜಿ ಬೋಪಯ್ಯ ಹಲಕೆಲವು ಕ್ರಮಗಳನ್ನು ಪ್ರಕಟಿಸಿದ್ದಾರೆ. ಅವುಗಳು ಇಂತಿವೆ :

* ಮಾಧ್ಯಮ ಪ್ರತಿನಿಧಿಗಳಿಗೆ ಪ್ರವೇಶ. ಆದರೆ, ಒಬ್ಬ ವರದಿಗಾರ ಒಬ್ಬ ಕ್ಯಾಮರಾ ಮನ್ ಗೆ ಸೀಮಿತ.
* ಕಾನೂನು ಮತ್ತು ಶಿಸ್ತು ಪಾಲನೆಗೆ ವಿಧಾನಸಭಾಂಗಣದಲ್ಲಿ 149 ಮಾರ್ಷಲ್ಲುಗಳ ನೇಮಕ
* ಗನ್ ಮ್ಯಾನ್, ಸಚಿವರ ಆಪ್ತ ಕಾರ್ಯದರ್ಶಿಗಳಿಗೆ ಪ್ರವೇಶವಿಲ್ಲ.
* ವಿಧಾನಸೌಧ, ವಿಕಾಸಸೌಧ ಹಾಗೂ ಬಹುಮಹಡಿ ಕಟ್ಟಡದ ಸರ್ಕಾರಿ ಕಚೇರಿಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಎಲ್ಲಾ ಅಧಿಕಾರಿಗಳು, ನೌಕರರು ಹಾಗೂ ಇತರೆ ಸಿಬ್ಬಂದಿ ವರ್ಗದವರಿಗೆ ಅರ್ಧ ದಿನ ರಜೆ

ಟ್ವಿಟ್ಟರಲ್ಲಿ ನಮ್ಮನ್ನು ಹಿಂಬಾಲಿಸಿ | ದಟ್ಸ್ ಕನ್ನಡ ಫ್ಯಾನ್ ಕ್ಲಬ್ ಸೇರಿರಿ | ಮೊಬೈಲಲ್ಲಿ ಕನ್ನಡ ಸುದ್ದಿ ಓದಿರಿ | ಹೂವಿನಂಗಡಿ 24/7 | ಕನ್ನಡ ಸುದ್ದಿಗಳ SMS

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X