ಭಾರತ, ಕರ್ನಾಟಕದ ಪಾಲಿಗೆ ಚಿನ್ನದ ದಿನ

ಭಾರತ ತಂಡದಲ್ಲಿದ್ದ ಮಂಜೀತ್ ಕೌರ್, ಸಿನಿ ಜೋಸ್, ಸಿದ್ಧಾಪುರದ ಹುಡುಗಿ ಅಶ್ವಿನಿ ಚಿದಾನಂದ ಅಕ್ಕುಂಜಿ ಮತ್ತು ಮಂದೀಪ್ ಕೌರ್ ನಿಗದಿತ ಗುರಿಯನ್ನು 3:27.37 ನಿಮಿಷದಲ್ಲಿ ತಲುಪಿದರು. ಈ ನಿರ್ವಹಣೆಗಾಗಿ ಭಾರತ ಸ್ವರ್ಣ ಪದಕ ಪಡೆಯುವಂತಾಯಿತು. ಅಥ್ಲೆಟಿಕ್ಸ್ ನಲ್ಲಿ ಭಾರತ ಒಟ್ಟು 1 ಚಿನ್ನ , 4 ಕಂಚು ಗಳಿಸಿದ ಗೌರವ ಪಡೆಯಿತು.
ಎರಡು ಕಂಚು ಭಾರೀ ಕುತೂಹಲ ಕೆರಳಿಸಿದ್ದ 4*100 ಮೀ. ರಿಲೇ ಸ್ಪರ್ಧೆಯಲ್ಲಿ ಭಾರತ ಪುರುಷ ಮತ್ತು ಮಹಿಳಾ ಈ ಎರಡೂ ವಿಭಾಗಗಳಲ್ಲಿಯೂ ಕಂಚಿನ ಪದಕ ಗೆದ್ದುಕೊಂಡಿದೆ. ಕಳೆದ ಬಾರಿ ಮೆಲ್ಬೋರ್ನ್ ಗೇಮನಲ್ಲಿ ಬೆಳ್ಳಿ ಪದಕ ಗೆದ್ದಿದ್ದ ಭಾರತೀಯ ಮಹಿಳಾ ರಿಲೇ ತಂಡ ಈ ಬಾರಿ ಕಂಚಿಗೆ ತೃಪ್ತಿ ಪಡಬೇಕಾಯಿತು. ಪ್ರಾಥಮಿಕ ಸುತ್ತಿನಲ್ಲಿ ಅಗ್ರಸ್ಥಾನ ಪಡೆದರೂ ನಂತರ ನಡೆದ ಅಂತಿಮ ಸುತ್ತಿನಲ್ಲಿ ಭಾರತೀಯ ಮಹಿಳೆಯರು ಮೂರನೇ ಸ್ಥಾನಕ್ಕೆ ಕುಸಿದರು.
ಭಾರತ ತಂಡದಲ್ಲಿದ್ದ ಸತ್ತಿ ಗೀತಾ, ಸ್ರಬಾನಿ ನಂದಾ, ಪಿ.ಕೆ.ಪ್ರಿಯಾ ಮತ್ತು ಕನ್ನಡತಿ ಜ್ಯೋತಿ ಹಿರಿಯೂರ್ 45.25 ಸೆಕೆಂಡ್ನಲ್ಲಿ ಗುರಿ ಮುಟ್ಟಿದರು. ಪುರುಷರ ತಂಡವು 38.89 ಸೆಕೆಂಡ್ನಲ್ಲಿ ಗುರಿ ತಲುಪಿ ನೂತನ ರಾಷ್ಟ್ರೀಯ ದಾಖಲೆಯೊಂದಿಗೆ ಕಂಚು ಪಡೆಯಿತು.ಈ ಎರಡೂ ವಿಭಾಗದಲ್ಲಿ ಇಂಗ್ಲೆಂಡ್ ಚಿನ್ನದ ಪದಕ ಪಡೆಯಿತು.
ಜಾವೆಲಿನ್ ಥ್ರೋ ನಲ್ಲಿ ಕನ್ನಡಿಗ ಕಾಶಿನಾಥ್ ನಾಯ್ಕ 74.29ಮೀ. ದೂರ ಭರ್ಜಿ ಎಸೆದು ಕಂಚಿನ ಪದಕಕ್ಕೆ ಕೊರಳೊಡ್ಡಿದರು. ಈ ಸ್ಪರ್ಧೆಯಲ್ಲಿ ಚಿನ್ನ ಆಸ್ಟ್ರೇಲಿಯಾದ ಜಾರೋಡ್ ಬ್ಯಾನಿಸ್ಟರ್ (81.71ಮೀ.) ಪಾಲಾದರೆ, ರಜತ ನ್ಯೂಜಿಲೆಂಡ್ನ ಸ್ಟುವರ್ಟ್ ಫರ್ಖಾಹರ್ಗೆ (78.15) ಒಲಿಯಿತು. ಟ್ರಿಪಲ್ ಜಂಪ್ನಲ್ಲಿ ಭಾರತದ ರೆಂಜಿತ್ ಮಹೇಶ್ವರಿ ಕಂಚಿನ ಪಡೆದ ಸಾಧನೆ ಮೆರೆದರು.
-
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ -
Kannada: ಕರ್ನಾಟಕದಲ್ಲಿರುವ ಬ್ಯಾಂಕ್ಗಳಲ್ಲಿ ಸ್ಪಷ್ಟ ಕನ್ನಡ; ತುಳು, ಕೊಂಕಣಿ ಭಾಷೆಯ ಕಲರವ ಈಗ ಉಳಿದಿಲ್ಲ: ಕವಿರಾಜ್












Click it and Unblock the Notifications