ಬಿಜೆಪಿಗೆ ವರ್ತೂರು ಪ್ರಕಾಶ್ ಬೆಂಬಲ ಘೋಷಣೆ

ಒಂದಾನೊಂದು ಕಾಲದಲ್ಲಿ ಸಿದ್ದರಾಮಯ್ಯನವರ ಆತ್ಮೀಯ ಶಿಷ್ಯನಾಗಿದ್ದ ವರ್ತೂರು ಪ್ರಕಾಶ್ ಇಂದು ಬಿಜೆಪಿಯ ನಾಯಕ ಜನಾರ್ದನ ರೆಡ್ಡಿಯ ಆತ್ಮೀಯರಾಗಿದ್ದಾರೆ. ಸಿದ್ದರಾಮಯ್ಯನವರೇ ಮುಂದಿನ ಮುಖ್ಯಮಂತ್ರಿ ಎಂದು ಘೋಷಣೆ ಕೂಗುತ್ತಿದ್ದ ಪ್ರಕಾಶ್ ಈಗ ಸಿದ್ದು ಅವಕಾಶವಾದಿ ಎಂದು ಜರಿಯುತಿದ್ದಾರೆ. ಲೈಫು ಇಷ್ಟೇನೆ ಎಂದು ನಿರಾಶಾವಾದಿಯಾಗಿ ಹಾಡುವವನಿಗೆ ಇಲ್ಲಿ ಅವಕಾಶವಿಲ್ಲ.
ಇಂದು, ಹಠಾತ್ತನೆ ಬಿಜೆಪಿ ಪಾಳಯದಲ್ಲಿ ಕಾಣಿಸಿಕೊಂಡಿರುವ ವರ್ತೂರು ಪ್ರಕಾಶ್ ಅ.14ರ ವಿಶ್ವಾಸಮತ ಕೋರಿಕೆಯಲ್ಲಿ ಬಿಜೆಪಿಗೆ ಬೆಂಬಲ ನೀಡುವುದಾಗಿ ಹೇಳಿ ವಿರೋಧಪಕ್ಷದಲ್ಲಿ ಚಳಿ ಹುಟ್ಟಿಸಿದ್ದಾರೆ. ಗೋಲ್ಡನ್ ಪಾಮ್ ರೆಸಾರ್ಟಿಗೆ ಜನಾರ್ದನ ರೆಡ್ಡಿ ಜೊತೆ ತಲುಪಿರುವ ವರ್ತೂರು ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ ತಾವು ನೀಡಿರುವ ಬೆಂಬಲವನ್ನು ಪ್ರಕಟಿಸಲಿದ್ದಾರೆ.
ಒಂದು ಕಡೆ ನಾಳೆ ನಡೆಯಲಿರುವ ಅಧಿವೇಶನದಲ್ಲಿ ಅನರ್ಹರಾಗಿದ್ದ ಪಕ್ಷೇತರರಿಗೆ ಮತದಾನ ಮಾಡುವ ಹಕ್ಕು ಇಲ್ಲ ಎಂದು ಹೈಕೋರ್ಟ್ ಹೇಳಿದ್ದರೆ, ಇನ್ನೊಂದೆಡೆ ಉಳಿದಿದ್ದ ಏಕೈಕ ಪಕ್ಷೇತರ ಶಾಸಕ ಬಿಜೆಪಿ ಬಣ ಸೇರಿಕೊಂಡಿದ್ದಾರೆ. ಜನಾರ್ದನ ರೆಡ್ಡಿ ನಡೆಸಿರುವ 'ಕುದುರೆ ವ್ಯಾಪಾರ' ಇಲ್ಲಿ ಫಲ ನೀಡಿದೆ. ಜೊತೆಗೆ ಕಾಂಗ್ರೆಸ್ ಹೈಕಮಾಂಡ್ ವಿರುದ್ಧ ಸಿಡಿದೆದ್ದಿರುವ ಕಾಂಗ್ರೆಸ್ ಶಾಸಕರು ಸಾಮೂಹಿಕ ರಾಜೀನಾಮೆ ನೀಡುವುದಾಗಿ ಬೆದರಿಸುತ್ತಿರುವುದು ರಾಜ್ಯದ ನಾಯಕರಿಗೆ ತಲೆನೋವಾಗಿ ಪರಿಣಮಿಸಿದೆ.
ಇಂದು ನಡೆದಿರುವ ಎಲ್ಲಾ ಬೆಳವಣಿಗೆಗಳಿಂದ ಜೆಡಿಎಸ್ ನಾಯಕ ಎಚ್ ಡಿ ಕುಮಾರಸ್ವಾಮಿ ಕಂಗೆಟ್ಟಿರುವಂತೆ ಕಾಣಿಸುತ್ತಿದೆ. ಪಕ್ಷೇತರರಿಗೆ ಮತದಾನದ ಹಕ್ಕು ನೀಡಬೇಕೆಂದು ಕೇಳಿದ್ದ ಕುಮಾರ್ ಗೆ ಹೈಕೋರ್ಟ್ ಆದೇಶ ಸಹಜವಾಗಿ ನಿರಾಶೆ ತಂದಿದೆ. ಸಂಜೆ ಅವರು ರಾಜ್ಯಪಾಲರನ್ನು ಭೇಟಿ ಮಾಡಲು ರಾಜಭವನಕ್ಕೆ ಧಾವಿಸಿದ್ದಾರೆ ಎಂದು ತಿಳಿದುಬಂದಿದೆ. ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಕೂಡ ರಾಜ್ಯಪಾಲರ ಭೇಟಿಗೆ ಹೋಗಿದ್ದಾರೆ. ರಾಜ್ಯಪಾಲ ಹಂಸರಾಜ್ ಭಾರದ್ವಾಜ್ ಜೊತೆ ಅವರಿಬ್ಬರು ಏನು ಚರ್ಚಿಸಲಿದ್ದಾರೆ ಎಂಬುದು ತಿಳಿದುಬಂದಿಲ್ಲ.
ದಟ್ಸ್ ಕನ್ನಡ ಫ್ಯಾನ್ ಕ್ಲಬ್ ಸೇರಿರಿ | ಮೊಬೈಲಲ್ಲಿ ಕನ್ನಡ ಸುದ್ದಿ ಓದಿರಿ | ಹೂವಿನಂಗಡಿ 24/7 | ಇಂಗ್ಲಿಷ್ ಲಿಪಿಯಲ್ಲಿ ಕನ್ನಡ ಎಸ್ಎಮ್ಎಸ್
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications