ಬಿಜೆಪಿಗೆ ವರ್ತೂರು ಪ್ರಕಾಶ್ ಬೆಂಬಲ ಘೋಷಣೆ

ಒಂದಾನೊಂದು ಕಾಲದಲ್ಲಿ ಸಿದ್ದರಾಮಯ್ಯನವರ ಆತ್ಮೀಯ ಶಿಷ್ಯನಾಗಿದ್ದ ವರ್ತೂರು ಪ್ರಕಾಶ್ ಇಂದು ಬಿಜೆಪಿಯ ನಾಯಕ ಜನಾರ್ದನ ರೆಡ್ಡಿಯ ಆತ್ಮೀಯರಾಗಿದ್ದಾರೆ. ಸಿದ್ದರಾಮಯ್ಯನವರೇ ಮುಂದಿನ ಮುಖ್ಯಮಂತ್ರಿ ಎಂದು ಘೋಷಣೆ ಕೂಗುತ್ತಿದ್ದ ಪ್ರಕಾಶ್ ಈಗ ಸಿದ್ದು ಅವಕಾಶವಾದಿ ಎಂದು ಜರಿಯುತಿದ್ದಾರೆ. ಲೈಫು ಇಷ್ಟೇನೆ ಎಂದು ನಿರಾಶಾವಾದಿಯಾಗಿ ಹಾಡುವವನಿಗೆ ಇಲ್ಲಿ ಅವಕಾಶವಿಲ್ಲ.
ಇಂದು, ಹಠಾತ್ತನೆ ಬಿಜೆಪಿ ಪಾಳಯದಲ್ಲಿ ಕಾಣಿಸಿಕೊಂಡಿರುವ ವರ್ತೂರು ಪ್ರಕಾಶ್ ಅ.14ರ ವಿಶ್ವಾಸಮತ ಕೋರಿಕೆಯಲ್ಲಿ ಬಿಜೆಪಿಗೆ ಬೆಂಬಲ ನೀಡುವುದಾಗಿ ಹೇಳಿ ವಿರೋಧಪಕ್ಷದಲ್ಲಿ ಚಳಿ ಹುಟ್ಟಿಸಿದ್ದಾರೆ. ಗೋಲ್ಡನ್ ಪಾಮ್ ರೆಸಾರ್ಟಿಗೆ ಜನಾರ್ದನ ರೆಡ್ಡಿ ಜೊತೆ ತಲುಪಿರುವ ವರ್ತೂರು ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ ತಾವು ನೀಡಿರುವ ಬೆಂಬಲವನ್ನು ಪ್ರಕಟಿಸಲಿದ್ದಾರೆ.
ಒಂದು ಕಡೆ ನಾಳೆ ನಡೆಯಲಿರುವ ಅಧಿವೇಶನದಲ್ಲಿ ಅನರ್ಹರಾಗಿದ್ದ ಪಕ್ಷೇತರರಿಗೆ ಮತದಾನ ಮಾಡುವ ಹಕ್ಕು ಇಲ್ಲ ಎಂದು ಹೈಕೋರ್ಟ್ ಹೇಳಿದ್ದರೆ, ಇನ್ನೊಂದೆಡೆ ಉಳಿದಿದ್ದ ಏಕೈಕ ಪಕ್ಷೇತರ ಶಾಸಕ ಬಿಜೆಪಿ ಬಣ ಸೇರಿಕೊಂಡಿದ್ದಾರೆ. ಜನಾರ್ದನ ರೆಡ್ಡಿ ನಡೆಸಿರುವ 'ಕುದುರೆ ವ್ಯಾಪಾರ' ಇಲ್ಲಿ ಫಲ ನೀಡಿದೆ. ಜೊತೆಗೆ ಕಾಂಗ್ರೆಸ್ ಹೈಕಮಾಂಡ್ ವಿರುದ್ಧ ಸಿಡಿದೆದ್ದಿರುವ ಕಾಂಗ್ರೆಸ್ ಶಾಸಕರು ಸಾಮೂಹಿಕ ರಾಜೀನಾಮೆ ನೀಡುವುದಾಗಿ ಬೆದರಿಸುತ್ತಿರುವುದು ರಾಜ್ಯದ ನಾಯಕರಿಗೆ ತಲೆನೋವಾಗಿ ಪರಿಣಮಿಸಿದೆ.
ಇಂದು ನಡೆದಿರುವ ಎಲ್ಲಾ ಬೆಳವಣಿಗೆಗಳಿಂದ ಜೆಡಿಎಸ್ ನಾಯಕ ಎಚ್ ಡಿ ಕುಮಾರಸ್ವಾಮಿ ಕಂಗೆಟ್ಟಿರುವಂತೆ ಕಾಣಿಸುತ್ತಿದೆ. ಪಕ್ಷೇತರರಿಗೆ ಮತದಾನದ ಹಕ್ಕು ನೀಡಬೇಕೆಂದು ಕೇಳಿದ್ದ ಕುಮಾರ್ ಗೆ ಹೈಕೋರ್ಟ್ ಆದೇಶ ಸಹಜವಾಗಿ ನಿರಾಶೆ ತಂದಿದೆ. ಸಂಜೆ ಅವರು ರಾಜ್ಯಪಾಲರನ್ನು ಭೇಟಿ ಮಾಡಲು ರಾಜಭವನಕ್ಕೆ ಧಾವಿಸಿದ್ದಾರೆ ಎಂದು ತಿಳಿದುಬಂದಿದೆ. ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಕೂಡ ರಾಜ್ಯಪಾಲರ ಭೇಟಿಗೆ ಹೋಗಿದ್ದಾರೆ. ರಾಜ್ಯಪಾಲ ಹಂಸರಾಜ್ ಭಾರದ್ವಾಜ್ ಜೊತೆ ಅವರಿಬ್ಬರು ಏನು ಚರ್ಚಿಸಲಿದ್ದಾರೆ ಎಂಬುದು ತಿಳಿದುಬಂದಿಲ್ಲ.
ದಟ್ಸ್ ಕನ್ನಡ ಫ್ಯಾನ್ ಕ್ಲಬ್ ಸೇರಿರಿ | ಮೊಬೈಲಲ್ಲಿ ಕನ್ನಡ ಸುದ್ದಿ ಓದಿರಿ | ಹೂವಿನಂಗಡಿ 24/7 | ಇಂಗ್ಲಿಷ್ ಲಿಪಿಯಲ್ಲಿ ಕನ್ನಡ ಎಸ್ಎಮ್ಎಸ್
-
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ












Click it and Unblock the Notifications