ಪಕ್ಷೇತರ ಶಾಸಕರಿಗೆ ಮತದಾನಕ್ಕೆ ಅವಕಾಶವಿಲ್ಲ

ಮುಖ್ಯ ನ್ಯಾಯಮೂರ್ತಿ ಜಗದೀಶ್ ಎಸ್ ಖೇಹರ್ ಮತ್ತು ನ್ಯಾ. ಕುಮಾರ್ ಅವರನ್ನೊಳಗೊಂಡ ವಿಭಾಗೀಯ ಪೀಠ ಪಕ್ಷೇತರರು ಸಲ್ಲಿಸಿದ್ದ ಮೂರು ಮಧ್ಯಂತರ ಅರ್ಜಿಗಳನ್ನು ಆಲಿಸಿ ಈ ಆದೇಶ ಹೊರಡಿಸಿದೆ. ಅನರ್ಹಗೊಳಿಸಿ ಸಭಾಧ್ಯಕ್ಷ ಕೆಜಿ ಬೋಪಯ್ಯ ಹೊರಡಿಸಿದ ಆದೇಶಕ್ಕೆ ತಡೆ ನೀಡಲೂ ಹೈಕೋರ್ಟ್ ನಿರಾಕರಿಸಿದೆ. ತಾತ್ಪರ್ಯ: ಪಕ್ಷೇತರರು ಮತ್ತು ಅವರ ಪರವಾಗಿ ಅರ್ಜಿ ಗುಜರಾಯಿಸಿದ್ದ ಜೆಡಿಎಸ್ ವಕ್ತಾರ ವೈ ಎಸ್ ವಿ ದತ್ತ ಅವರಿಗೆ ಸೋಲು.
ನಾಳೆ ನಡೆಯಲಿರುವ ವಿಶ್ವಾಸಮತದಲ್ಲಿ ಐವರು ಪಕ್ಷೇತರರು ಮತ್ತು ಅನರ್ಹಗೊಂಡಿರುವ 11 ಬಿಜೆಪಿ ಶಾಸಕರು ಭಾಗವಹಿಸುವಂತಿಲ್ಲ ಮತ್ತು ಸದನವನ್ನು ಪ್ರವೇಶಿಸುವಂತಿಲ್ಲ. ಅ.18ರಂದು ನಡೆಯಲಿರುವ ಮುಂದುವರಿದ ವಿಚಾರಣೆಯ ನಂತರ ತೀರ್ಪು ಹೊರಬಿದ್ದ ಮೇಲೆ ಮತ ನೀಡುವ ಹಕ್ಕು ತೀರ್ಮಾನವಾಗಲಿದೆ. ಒಂದು ವೇಳೆ ಪಕ್ಷೇತರರ ಪರ ತೀರ್ಪು ಬಂದರೆ ಮತ್ತೊಂದು ಅಧಿವೇಶನ ಕರೆದು ವಿಶ್ವಾಸಮತ ಕೋರುವ ಸಂದರ್ಭ ಬಂದರೂ ಬರಬಹುದು.
ಆದರೆ, ಈ ಆದೇಶಕ್ಕೆ ಜೆಡಿಎಸ್ ನ ವೈಎಸ್ ವಿ ದತ್ತಾ ವ್ಯತಿರಿಕ್ತ ಹೇಳಿಕೆ ನೀಡಿ, ಪಕ್ಷೇತರರಿಗೆ ಸದನ ಪ್ರವೇಶಿಸಲು ಅವಕಾಶವಿದೆ ಮತ್ತು ಮುಚ್ಚಿದ ಲಕೋಟೆಯಲ್ಲಿ ಮತದಾನ ಮಾಡಲು ಅವಕಾಶ ನೀಡಲಾಗಿದೆ ಎಂದು ಹೇಳಿದರು. ಬಿಜೆಪಿ ಸಚೇತರರಾಗಿರುವ ಜೀವರಾಜ್ ಅವರು ಇದಕ್ಕೆ ಪ್ರತಿಕ್ರಿಯಿಸಿದ್ದು, ಅನರ್ಹಗೊಂಡ ಪಕ್ಷೇತರರಿಗೆ ಮತ್ತು ಬಿಜೆಪಿ ಶಾಸಕರಿಗೆ ಮತದಾನ ಮಾಡಲು ಯಾವುದೇ ಅವಕಾಶ ನೀಡಲಾಗಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಆನಂತರ ಇಡೀ ಪ್ರಕರಣ ಕುರಿತು ಮಾತನಾಡಿದ ಭಾಜಪದ ಸಿಟಿ ರವಿ, ದತ್ತ ಅವರು ಮಾಧ್ಯಮಗಳ ಮೂಲಕ ಸುಳ್ಳು ಸುದ್ದಿ ಹಬ್ಬಿಸಿದರು ಎಂದು ಹೇಳಿದರು.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications