ಶೀಘ್ರದಲ್ಲಿ ರಾಜ್ಯಪಾಲ ಭಾರದ್ವಾಜ್ 'ರಾಜ್' ಅಂತ್ಯ?

ಕಾಂಗ್ರೆಸ್ ಪಕ್ಷದ ಮೂಲಗಳು ಈ ವಿಷಯ ಬಹಿರಂಗಗೊಂಡಿದ್ದು, ತಮ್ಮ ನಿಲುವು ಏನೆಂಬುದನ್ನು ಕೇಂದ್ರಕ್ಕೆ ತಿಳಿಸಲಾಗಿದೆ ಎಂದು ಹೇಳಿದೆ. ಭಾರದ್ವಾಜ್ ಅವರು ನಡೆದುಕೊಳ್ಳುತ್ತಿರುವ ರೀತಿ ಅವರು ರಾಜ್ಯಪಾಲರಾಗಲಿಕ್ಕೆ ಅರ್ಹರಲ್ಲ ಎನ್ನುವ ಮಾತಿದೆ. ಅಷ್ಟೇ ಅಲ್ಲ ಅವರಿಂದಾಗಿ ರಾಜ್ಯಪಾಲರ ಹುದ್ದೆಗೆ ಕುಂದುಂಟಾಗಿದೆ ಎಂದು ಕಾಂಗ್ರೆಸ್ ಕೇಂದ್ರಕ್ಕೆ ಮನವರಿಕೆ ಮಾಡಿಕೊಟ್ಟಿದೆ.
ಸ್ಪೀಕರ್ ಅವರಿಗೆ ನಿರ್ದೇಶನ ನೀಡಿದ್ದು, ಪುನಃ ವಿಶ್ವಾಸಮತ ಯಾಚನೆಗೆ ಅವಕಾಶ ನೀಡಿರುವುದು ವ್ಯತಿರಿಕ್ತ ಬೆಳವಣಿಗೆಯಾಗಿದೆ. ಇದು ರಾಜ್ಯಪಾಲರ ಹುದ್ದೆಗೆ ಅಗೌರವ ತರುವಂತಾದ್ದಾಗಿದೆ ಎಂದು ಕಾಂಗ್ರೆಸ್ ವಲಯದ ಅಸಮಾಧಾನವಾಗಿದೆ. ಭಾರದ್ವಾಜ್ ಸಂವಿಧಾನ ಕಾವಲುಗಾರನಾಗಿ ಉಳಿದಿಲ್ಲ. ಭಾರದ್ವಾಜ್ ಮಿತಿಮೀರುತ್ತಿದ್ದಾರೆ. ಈ ಎಲ್ಲ ಅಂಶಗಳನ್ನು ಹೈಕಮಾಂಡ್ ಗಮನಕ್ಕೆ ತರಲಾಗಿದೆ ಎಂದು ಕಾಂಗ್ರೆಸ್ ಹೇಳಿದೆ. ಈ ಮಧ್ಯೆ ರಾಜ್ಯ ಮತ್ತು ಕೇಂದ್ರದ ಬಿಜೆಪಿ ನಾಯಕರು ಭಾರದ್ವಾಜ್ ವಿರುದ್ಧ ದಾಳಿ ಮುಂದುವರಿಸಿದ್ದು, ಕಾಂಗ್ರೆಸ್ ಏಜೆಂಟ್ ಎಂದು ಆಕ್ರೋಶ ವ್ಯಕ್ತಪಡಿಸುತ್ತಿವೆ.












Click it and Unblock the Notifications