ಶೀಘ್ರದಲ್ಲಿ ರಾಜ್ಯಪಾಲ ಭಾರದ್ವಾಜ್ 'ರಾಜ್' ಅಂತ್ಯ?

HR Bhardwaj
ನವದೆಹಲಿ, ಅ. 14 : ಕರ್ನಾಟಕದ ರಾಜ್ಯಪಾಲ ಎಚ್ ಆರ್ ಭಾರದ್ವಾಜ್ ಅವರನ್ನು ಹಿಂದಕ್ಕೆ ಕರೆಸಿಕೊಳ್ಳಬೇಕು ಎಂದು ಬಿಜೆಪಿ ಕೇಂದ್ರಕ್ಕೆ ಮನವಿ ಮಾಡಿಕೊಂಡಿರುವ ಬೆನ್ನಲ್ಲೇ ಕಾಂಗ್ರೆಸ್ ಹೈಕಮಾಂಡ್ ಕೂಡಾ ಈ ಬಗ್ಗೆ ಚಿಂತನೆ ನಡೆಸಿದೆ. ಇದರ ಜೊತೆಗೆ ಕಾಂಗ್ರೆಸ್ ನಲ್ಲಿ ಭಾರದ್ವಾಜ್ ಅವರನ್ನು ಪದಚ್ಯುತಿಗೊಳಿಸಬೇಕೆಂದು ತೆರಮರೆಯಲ್ಲೇ ಕಸರತ್ತು ತೀವ್ರಗೊಂಡಿದೆ.

ಕಾಂಗ್ರೆಸ್ ಪಕ್ಷದ ಮೂಲಗಳು ಈ ವಿಷಯ ಬಹಿರಂಗಗೊಂಡಿದ್ದು, ತಮ್ಮ ನಿಲುವು ಏನೆಂಬುದನ್ನು ಕೇಂದ್ರಕ್ಕೆ ತಿಳಿಸಲಾಗಿದೆ ಎಂದು ಹೇಳಿದೆ. ಭಾರದ್ವಾಜ್ ಅವರು ನಡೆದುಕೊಳ್ಳುತ್ತಿರುವ ರೀತಿ ಅವರು ರಾಜ್ಯಪಾಲರಾಗಲಿಕ್ಕೆ ಅರ್ಹರಲ್ಲ ಎನ್ನುವ ಮಾತಿದೆ. ಅಷ್ಟೇ ಅಲ್ಲ ಅವರಿಂದಾಗಿ ರಾಜ್ಯಪಾಲರ ಹುದ್ದೆಗೆ ಕುಂದುಂಟಾಗಿದೆ ಎಂದು ಕಾಂಗ್ರೆಸ್ ಕೇಂದ್ರಕ್ಕೆ ಮನವರಿಕೆ ಮಾಡಿಕೊಟ್ಟಿದೆ.

ಸ್ಪೀಕರ್ ಅವರಿಗೆ ನಿರ್ದೇಶನ ನೀಡಿದ್ದು, ಪುನಃ ವಿಶ್ವಾಸಮತ ಯಾಚನೆಗೆ ಅವಕಾಶ ನೀಡಿರುವುದು ವ್ಯತಿರಿಕ್ತ ಬೆಳವಣಿಗೆಯಾಗಿದೆ. ಇದು ರಾಜ್ಯಪಾಲರ ಹುದ್ದೆಗೆ ಅಗೌರವ ತರುವಂತಾದ್ದಾಗಿದೆ ಎಂದು ಕಾಂಗ್ರೆಸ್ ವಲಯದ ಅಸಮಾಧಾನವಾಗಿದೆ. ಭಾರದ್ವಾಜ್ ಸಂವಿಧಾನ ಕಾವಲುಗಾರನಾಗಿ ಉಳಿದಿಲ್ಲ. ಭಾರದ್ವಾಜ್ ಮಿತಿಮೀರುತ್ತಿದ್ದಾರೆ. ಈ ಎಲ್ಲ ಅಂಶಗಳನ್ನು ಹೈಕಮಾಂಡ್ ಗಮನಕ್ಕೆ ತರಲಾಗಿದೆ ಎಂದು ಕಾಂಗ್ರೆಸ್ ಹೇಳಿದೆ. ಈ ಮಧ್ಯೆ ರಾಜ್ಯ ಮತ್ತು ಕೇಂದ್ರದ ಬಿಜೆಪಿ ನಾಯಕರು ಭಾರದ್ವಾಜ್ ವಿರುದ್ಧ ದಾಳಿ ಮುಂದುವರಿಸಿದ್ದು, ಕಾಂಗ್ರೆಸ್ ಏಜೆಂಟ್ ಎಂದು ಆಕ್ರೋಶ ವ್ಯಕ್ತಪಡಿಸುತ್ತಿವೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+