ಬೆಂಗಳೂರು ಸ್ಫೋಟದ ಆರೋಪಿಗಳು ಬಂಧನ

ರಾಜಸ್ತಾನ ಪೊಲೀಸರ ಸಹಕಾರದೊಂದಿಗೆ ಅಲ್ಲಿನ ಅಜ್ಮೇರ್ ಬಳಿಯಲ್ಲಿ ಫಾರೂಕ್ ಉಮರ್ ಎಂಬಾತನನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದರೆ, ಕೇರಳದ ಕಾಸರಗೋಡಿನಲ್ಲಿ ಇಬ್ರಾಹಿಂ ಎಂಬ ಉಗ್ರನನ್ನು ಕೂಡಾ ಬಂಧಿಸಲಾಗಿದೆ. ಈ ಇಬ್ಬರು ಪಾಕಿಸ್ತಾನಿ ಮೂಲದ ಲಷ್ಕರ್ ಇ ತೊಯ್ಬಾ ಸಂಘಟನೆಯೊಂದಿಗೆ ಸಂಪರ್ಕ ಹೊಂದಿದ್ದಾರೆ. ಬೆಂಗಳೂರು ಸರಣಿ ಸ್ಫೋಟ ಸೇರಿದಂತೆ ಭಾರತದ ವಿವಿಧ ಪ್ರದೇಶದಲ್ಲಿ ವಿಧ್ವಂಸಕ ಕೃತ್ಯಗಳನ್ನು ನಡೆಸಲು ಈ ಇಬ್ಬರು ಸಂಚು ರೂಪಿಸಿದ್ದರು ಎಂದು ಪೊಲೀಸ್ ಮೂಲಗಳ ತಿಳಿಸಿವೆ.
2008ರ ಜುಲೈ 25 ರಂದು ಬೆಂಗಳೂರಿನ 9 ಕಡೆಗೆ ಬಾಂಬ್ ಸ್ಫೋಟ ನಡೆಸಲಾಗಿತ್ತು. ಈ ಘಟನೆಯಲ್ಲಿ ಒಬ್ಬ ಮಹಿಳೆ ಮೃತಪಟ್ಟಿದ್ದು, ಅನೇಕ ಮಂದಿ ಗಾಯಗೊಡಿದ್ದರು. ಬೆಂಗಳೂರು ಸರಣಿ ನಂತರ ಗುಜರಾತ್ ನ ಅಹಮದಾಬಾದ್ ಹಾಗೂ ಸೂರತ್ ನಲ್ಲಿ ಬಾಂಬ್ ಸ್ಫೋಟ ನಡೆಸಲಾಗಿತ್ತು. ಬ್ಯಾಡ್ ಎಂದು ಹೆಸರಿಟ್ಟುಕೊಂಡಿದ್ದ ಉಗ್ರರು, ಬೆಂಗಳೂರು, ಅಹಮದಾಬಾದ್ ಮತ್ತು ದೆಹಲಿ ಟಾರ್ಗೆಟ್ ಮಾಡಿಕೊಂಡಿದ್ದರು.












Click it and Unblock the Notifications