ಆಪರೇಷನ್ ಕಮಲಕ್ಕೆ ಎಂಸಿ ಆಶ್ವಥ್ ಬಲಿ

ಅಶ್ವತ್ಥ್ ಅವರ ಈ ಕ್ರಮ ಜೆಡಿಎಸ್ ವರಿಷ್ಠರ ತೀವ್ರ ಟೀಕೆಗೆ ಕಾರಣವಾಗಿದ್ದು, ಚನ್ನಪಟ್ಟಣದ ಜನತೆ ಈ ಬಗ್ಗೆ ತಕ್ಕಪಾಠ ಕಲಿಸುತ್ತಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದರೊಂದಿಗೆ ವಿಧಾನಸಭೆಯಲ್ಲಿ ಜೆಡಿಎಸ್ನ ಸಂಖ್ಯಾ ಬಲ 27ಕ್ಕೆ ಕುಸಿದಿದೆ. ಅಶ್ವತ್ಥ್ ರಾಜೀನಾಮೆ ಸಲ್ಲಿಸುವಾಗ ಕೆಲ ಬಿಜೆಪಿ ಮುಖಂಡರು ಜತೆಯಾಗಿದ್ದುದು, ತೀವ್ರ ಚರ್ಚೆಗೆ ಕಾರಣವಾಗಿದೆ. ಸಂಖ್ಯಾಬಲ ಅಲ್ಪಮತಕ್ಕೆ ಇಳಿದಿರುವ ಹಿನ್ನೆಲೆಯಲ್ಲಿ ಬಿಜೆಪಿ ಈ ಮೂಲಕ ಮತ್ತೆ 'ಆಪರೇಷನ್ ಕಮಲ"ಕ್ಕೆ ಚಾಲನೆ ನೀಡಿದೆ.
ಬಿಜೆಪಿಯ 11 ಅತೃಪ್ತರು ಹಾಗೂ ಐವರು ಪಕ್ಷೇತರ ಶಾಸಕರು ಯಡಿಯೂರಪ್ಪನವರ ನಾಯಕತ್ವದ ವಿರುದ್ಧ ಬಂಡೆದ್ದು, ಗೋವಾ ರೆಸಾರ್ಟ್ ಸೇರಿದ ಎರಡು ದಿನಗಳ ನಂತರ ಅಶ್ವತ್ಥ್ ಕ್ಷೇತ್ರದಿಂದ ಮಾಯವಾಗಿದ್ದರು. ಜೆಡಿಎಸ್ ವರಿಷ್ಠರ ಸಂಪರ್ಕಕ್ಕೂ ಸಿಗದ ಅವರು ಬಿಜೆಪಿಯ ಹಿರಿಯ ಮುಖಂಡರ ಜತೆ ಇದ್ದರು. ಸೋಮವಾರ ನಡೆದ ವಿಶ್ವಾಸಮತ ಯಾಚನೆಗೆ ಮುನ್ನ ಜೆಡಿಎಸ್ ಸಚೇತಕರು ಅಶ್ವತ್ಥ್ಗೆ ವಿಪ್ ಜಾರಿಗೊಳಿಸಿದ್ದರು. ಖುದ್ದಾಗಿ ಹಾಜರಿದ್ದು, ಮುಖ್ಯಮಂತ್ರಿ ಯಡಿಯೂರಪ್ಪ ವಿರುದ್ಧ ಮತ ಚಲಾಯಿಸಬೇಕು, ಇಲ್ಲವಾದರೆ ಪಕ್ಷಾಂತರ ನಿಷೇಧ ಕಾಯಿದೆ ಅಡಿ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಸಲಾಗಿತ್ತು. ಆದರೆ, ಅಶ್ವತ್ಥ್ ಗೈರು ಹಾಜರಾಗಿದ್ದರು.
-
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger












Click it and Unblock the Notifications