ಕೊಳೆಗೇರಿಯಲ್ಲಿ ಅಚ್ಚ ಬಿಳಿ ಸಫಾರಿಯಲ್ಲಿ ಸಿಎಂ

ಮುಖ್ಯಮಂತ್ರಿ ಯಡಿಯೂರಪ್ಪನವರು ದತ್ತು ಪುತ್ರನನ್ನಾಗಿ ಸ್ವೀಕರಿಸಿರುವ ವಿಶ್ವನಾಥ್ ಎಂಬ ಬಾಲಕನ ಭೇಟಿಗೆಂದು ಬಂದಾಗ ಮನೆಮನೆಯೆದಿರು ತಳಿರು ತೋರಣಗಳು ನಲಿದಾಡುತ್ತಿದ್ದವು. ಥಳಿ ರಂಗೋಲಿಯಿಂದಾಗಿ ಕೊಳೆಗೇರಿಯ ರಸ್ತೆಗಳು ಕಳೆಯೇರಿದ್ದವು. ಬಾಪೂಜಿನಗರದ ಸರಕಾರಿ ಶಾಲೆಯಲ್ಲಿ 5ನೇ ತರಗತಿ ಓದುತ್ತಿರುವ ವಿಶ್ವನಾಥ್ ಮನೆಗೆ ತೆರಳಿ ಯಡಿಯೂರಪ್ಪನವರು ಇಂದು ಬೆಳಿಗ್ಗೆ ಆಯುಧ ಪೂಜೆ ಸಲ್ಲಿಸಿದರು.
ಕೊಳೆಗೇರಿಯ ಬೀದಿಯುದ್ದಕ್ಕೂ ಬರಿಗಾಲಲ್ಲಿ ನಡೆಯುತ್ತಿದ್ದ ವಿಶ್ವನಾಥನ ಕೈಯನ್ನು ಹಿಡಿದೇ ಸಾಗಿದ ಯಡಿಯೂರಪ್ಪ ಆತನ ತಂದೆ ತಾಯಿಯನ್ನು ಭೇಟಿ ಮಾಡಿ ಉಭಯ ಕುಶಲೋಪರಿ ವಿಚಾರಿಸಿದರು. ತಲೆಯೆತ್ತಿದರೆ ತಾಗುವ ಮನೆಗಳ ತಾರಸಿ, ಜೋಲಿ ತಪ್ಪಿದರೆ ಮೈಗಂಟುವ ಗೋಡೆಗಳ ನಡುವೆ ಶುಭ್ರ ಬಿಳುಪಿನ ವಸ್ತ್ರಧಾರಿ ಸಿಎಂ ಹಸನ್ಮುಖಿಯಾಗಿಯೇ ಸಾಗಿದರು. [ಚಿತ್ರಪಟ ನೋಡಿರಿ]
ಎರಡನೇ ಬಾರಿಗೆ ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿದ ನಂತರ ಗಾಳಿ ಆಂಜನೇಯ ಸ್ವಾಮಿಗೆ ಮತ್ತೆ ಪೂಜೆ ಸಲ್ಲಿಸಿದ ನಂತರ ಹತ್ತಿರದಲ್ಲೇ ಇದ್ದ ವಿಶ್ವನಾಥನ ಮನೆಗೆ ಯಡಿಯೂರಪ್ಪ ತೆರಳಿ ಮನೆಮಂದಿಯನ್ನು ಭೇಟಿ ಮಾಡಿದರು. ಬಹುಮತ ಸಾಬೀತು ಪಡಿಸುವ ಮುನ್ನ ಅ.14ರಂದು ಅವರನ್ನು ಭೇಟಿಯಾಗಬೇಕೆಂದು ಅಳುತ್ತಿದ್ದ ಬಾಲಕನನ್ನು ಸಿಎಂ ಭೇಟಿಯಾಗಿದ್ದರು. ಆತನನ್ನು ದತ್ತು ತೆಗೆದುಕೊಂಡು ವಿದ್ಯಾಭ್ಯಾಸದ ಹೊಣೆಯನ್ನೂ ಹೊತ್ತಿದ್ದರು. ಈಗ ಆತನ ಹೆಸರಿನಲ್ಲಿ ವಿದ್ಯಾಬ್ಯಾಸಕ್ಕಾಗಿ 1 ಲಕ್ಷ ರು. ಠೇವಣಿ ಇಡಲಾಗಿದೆ.
ಗಾಳಿ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಸಂದರ್ಭದಲ್ಲಿ ಭಜನೆಗಳನ್ನು ಏರ್ಪಡಿಸಲಾಗಿತ್ತು. ಭಜನೆಯಲ್ಲಿ ಪಾಲ್ಗೊಂಡ ಯಡಿಯೂರಪ್ಪ ನಂತರ ವಿಶ್ವನಾಥನ ಮನೆಗೆ ತೆರಳಿದರು. ಮಧ್ಯಾಹ್ನದ ಮೇಲೆ ಮೈಸೂರಿನ ದಸರಾ ಸಂಭ್ರಮದಲ್ಲಿ ಭಾಗವಹಿಸಲು ಯಡಿಯೂರಪ್ಪನವರು ಮೈಸೂರಿಗೆ ತೆರಳಿದ್ದಾರೆ.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion












Click it and Unblock the Notifications