ಬ್ರಹ್ಮಕುಂಡಿಕೆಯಲ್ಲಿ ಕಾವೇರಿ ತೀರ್ಥೋದ್ಭವ

ಈ ಅಪೂರ್ವ ಘಳಿಗೆ ಘಟಿಸುತ್ತಿದ್ದಂತೆಯೇ ಸುತ್ತಲೂ ನೆರೆದ ಭಕ್ತವೃಂದ ಸ್ನಾನಕೊಳಕ್ಕೆ ಧುಮುಕಿ ತೀರ್ಥ ಪ್ರೋಕ್ಷಣೆಗೆ ಶಿರವೊಡ್ಡಿ ಪುನೀತರಾದರು. ಆಗಮಪಂಡಿತರ ಭವಿಷ್ಯದ ಹಿನ್ನಲೆಯಲ್ಲಿ ತಲಕಾವೇರಿಯತ್ತ ಭಕ್ತರ ದಂಡು ಸಹಸ್ರ ಸಂಖ್ಯೆಯಲ್ಲಿ ನೆರೆದಿತ್ತು. ಭಾನುವಾರ ಸಂಜೆಯೇ ದೂರದ ತಮಿಳುನಾಡು, ಮಂಡ್ಯ, ಬೆಂಗಳೂರು ಮುಂತಾದ ಕಡೆಗಳಿಂದ ಆಗಮಿಸಿದ ಭಕ್ತರು ಭಾಗಮಂಡಲದಲ್ಲಿ ಸ್ನಾನ ಮಾಡಿ ಭಗಂಡೇಶ್ವರನ ದರ್ಶನ ಪಡೆದು ತಲಕಾವೇರಿಗೆ ಆಗಮಿಸಿದರೆ, ಇನ್ನು ಕೆಲವರು ಮೈಸೂರು ದಸರಾ ಮುಗಿಸಿ ಬಂದಿದ್ದರು.
ಮಡಿಕೇರಿಯಲ್ಲಿ ರಾತ್ರಿ ದಸರಾವಿದ್ದ ಕಾರಣ ದಸರಾಕ್ಕೆ ಬಂದಿದ್ದ ಹೆಚ್ಚಿನ ಪ್ರವಾಸಿಗರು ತಲಕಾವೇರಿಗೆ ಆಗಮಿಸಿ ತೀರ್ಥೋದ್ಭವದ ಆ ಕ್ಷಣಕ್ಕಾಗಿ ಕಾತರದಿಂದ ಕಾಯುತ್ತಿದ್ದರು. ಸ್ವಸ್ತಿ ಶ್ರೀ ವಿಕೃತಿ ನಾಮ ಸಂವತ್ಸರದ ದಕ್ಷಿಣಾಯನ ಶರದೃತುವಿನ ಶುಭಘಳಿಗೆ ಸೋಮವಾರ ಪ್ರಾತಃಕಾಲ 3.11ಕ್ಕೆ ಬ್ರಹ್ಮಕುಂಡಿಕೆಯಲ್ಲಿ ತೀರ್ಥೋದ್ಭವ ಘಟಿಸಿತು.
ಈ ಸಂದರ್ಭ ಬ್ರಹ್ಮಕುಂಡಿಕೆಯ ಮುಂಭಾಗದ ಸ್ನಾನಕೊಳಕ್ಕೆ ಧುಮುಕಿದ ಭಕ್ತರು ತಾವು ತಂದಿದ್ದ ಬಿಂದಿಗೆ, ಕ್ಯಾನ್ ಮುಂತಾದ ಪಾತ್ರೆಗಳಲ್ಲಿ ತೀರ್ಥವನ್ನು ತುಂಬಿಸಿಕೊಂಡರು.
ತಲಕಾವೇರಿಯಲ್ಲಿ ಈ ಸಂದರ್ಭ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ತಮಿಳುನಾಡು, ಮಂಡ್ಯ ಅನ್ನಸಂತರ್ಪಣ ಸಮಿತಿ ಹಾಗೂ ಕೊಡಗು ಏಕೀಕರಣ ಸಮಿತಿ ವತಿಯಿಂದ ಭಕ್ತಾಧಿಗಳಿಗೆ ಅನ್ನಸಂತರ್ಪಣೆ ಏರ್ಪಡಿಸಲಾಗಿತ್ತು. ತೀರ್ಥೋದ್ಭವದ ಬಳಿಕ ವಿಶೇಷ ಪೂಜೆಗಳು ನಡೆಯುತ್ತಿದ್ದು, ಭಕ್ತರು ಅಧಿಕ ಸಂಖ್ಯೆಯಲ್ಲಿ ಆಗಮಿಸಿ ತೀರ್ಥವನ್ನು ಕೊಂಡೊಯ್ಯುತ್ತಿದ್ದಾರೆ. ಭಾಗಮಂಡಲದ ತ್ರಿವೇಣಿ ಸಂಗಮದಲ್ಲಿ ಪೂಜೆ ಪುನಸ್ಕಾರಗಳು ನಡೆಯುತ್ತಿದ್ದು, ಕಾವೇರಿ ನದಿ ತೀರದಲ್ಲಿ ಹಿರಿಯರಿಗೆ ಪಿಂಡ ಸಮರ್ಪಣೆಯಲ್ಲಿ ನಿರತರಾದ ದೃಶ್ಯ ಕಂಡು ಬರುತ್ತಿದೆ.
ಟ್ವಿಟ್ಟರಲ್ಲಿ ನಮ್ಮನ್ನು ಹಿಂಬಾಲಿಸಿ | ದಟ್ಸ್ ಕನ್ನಡ ಫ್ಯಾನ್ ಕ್ಲಬ್ ಸೇರಿರಿ | ಮೊಬೈಲಲ್ಲಿ ಕನ್ನಡ ಸುದ್ದಿ ಓದಿರಿ | ಹೂವಿನಂಗಡಿ 24/7 | ಕನ್ನಡ ಸುದ್ದಿಗಳ SMS
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ












Click it and Unblock the Notifications