ಭಿನ್ನಮತೀಯರ ಅನರ್ಹತೆ : ನ್ಯಾಯಮೂರ್ತಿಗಳಲ್ಲೇ ಭಿನ್ನಮತ

ವಿಧಾನಸಭಾಧ್ಯಕ್ಷ ಕೆಜಿ ಬೋಪಯ್ಯ ಅವರು ಶಾಸಕರನ್ನು ಅನರ್ಹಗೊಳಿಸಿದ್ದನ್ನು ಮುಖ್ಯ ನ್ಯಾಯಮೂರ್ತಿ ಖೇಹರ್ ಎತ್ತಿಹಿಡಿದಿದ್ದರೆ, ಗುಲಬರ್ಗಾದ ಸರ್ಕಿಟ್ ಬೆಂಚಿಗೆ ವರ್ಗಾವಣೆಗೊಂಡಿರುವ ನ್ಯಾ. ಕುಮಾರ್ ಅವರು ಸಭಾಧ್ಯಕ್ಷ ಅವರ ಕ್ರಮ ತಪ್ಪು ಎಂದು ತೀರ್ಪನ್ನು ನೀಡಿದ್ದಾರೆ. ಈ ಕಾರಣದಿಂದಾಗಿ ಪ್ರಕರಣವನ್ನು ಮೂರನೇ ನ್ಯಾಯಮೂರ್ತಿಗೆ ವರ್ಗಾಯಿಸಲಾಗಿದೆ. ಆ ನ್ಯಾಯಮೂರ್ತಿ ಯಾವ ತೀರ್ಪಿಗೆ ಬರುತ್ತಾರೆ ಎಂಬುದರ ಮೇಲೆ ಅನರ್ಹಗೊಂಡ ಶಾಸಕರ ಜಯ ಅಪಜಯ ನಿರ್ಧಾರವಾಗಲಿದೆ.
ಈ ಪ್ರಕರಣದಲ್ಲಿ ನಾಲ್ಕು ವಿಷಯಗಳನ್ನು ಚರ್ಚಿಸಲಾಗಿತ್ತು. ಅವು, ಸ್ವಾಭಾವಿಕ ನ್ಯಾಯ ಉಲ್ಲಂಘಿಸಲಾಗಿದೆಯೇ ಇಲ್ಲವೆ? ನಿಯಮ ಗಾಳಿಗೆ ತೂರಲಾಗಿದೆಯೇ ಇಲ್ಲವೆ? ಸಭಾಧ್ಯಕ್ಷ ನಿರ್ಣಯ ದುರುದ್ದೇಶದಿಂದ ಕೂಡಿದೆಯೆ ಇಲ್ಲವೆ? ಮತ್ತು ಭಿನ್ನಮತೀಯರು ಸ್ವಇಚ್ಛೆಯಿಂದ ಬಿಜೆಪಿ ಪಕ್ಷ ಬಿಟ್ಟು ಹೊರಹೋಗಿದ್ದಾರೆಯೆ ಇಲ್ಲವೆ? ಇವುಗಳಲ್ಲಿ ಮೊದಲ ಮೂರು ವಿಷಯಗಳಲ್ಲಿ ಇಬ್ಬರೂ ನ್ಯಾಯಮೂರ್ತಿಗಳು ಒಮ್ಮತ ಹೊಂದಿದ್ದರೆ, ನಾಲ್ಕನೇ ವಿಷಯದಲ್ಲಿ ಭಿನ್ನಮತ ಹೊಂದಿದ್ದಾರೆ.
ಪ್ರಕರಣವನ್ನು ಮೂರನೇ ನ್ಯಾಯಮೂರ್ತಿಗೆ ವರ್ಗಾಯಿಸಲಾಗಿದ್ದು, ಅಕ್ಟೋಬರ್ 20ರಂದು ವಿಚಾರಣೆ ನಡೆಯಲಿದೆ. ಅಲ್ಲಿ ಚರ್ಚಿಸಲಾಗುವ ವಿಷಯವೇನೆಂದರೆ, ಭಿನ್ನಮತೀಯರು ಸ್ವಇಚ್ಛೆಯಿಂದ ಪಕ್ಷ ಬಿಟ್ಟು ಹೋಗಿದ್ದಾರೆಯೇ ಇಲ್ಲವೆ ಎಂಬುದು.
ಪಕ್ಷೇತರ ಶಾಸಕರು ಸಲ್ಲಿಸಿರುವ ಅರ್ಜಿಯ ವಿಚಾರಣೆ ಇಂದು ಬರಬೇಕಾಗಿತ್ತು. ಆದರೆ, ನ್ಯಾ. ಕುಮಾರ್ ವರ್ಗಾವಣೆಯಾಗಿರುವುದರಿಂದ ಈ ಪ್ರಕರಣ ನವೆಂಬರ್ 2ರಂದು ವಿಚಾರಣೆಗೆ ಬರಲಿದೆ. ಸದ್ಯಕ್ಕೆ ಬಿಜೆಪಿ ಶಾಸಕರ ಅನರ್ಹತೆ ಕುರಿತ ಪ್ರಕರಣದಲ್ಲಿ ನೀಡಲಾಗಿರುವ ತೀರ್ಪು ಅಡ್ಡಗೋಡೆಯ ಮೇಲೆ ದೀಪವಿಟ್ಟಂತಾಗಿದೆ.
ಇಂಗ್ಲಿಷ್ ಲಿಪಿಯಲ್ಲಿ ಕನ್ನಡ ಎಸ್ಎಮ್ಎಸ್ | ದಟ್ಸ್ ಕನ್ನಡ ಫ್ಯಾನ್ ಕ್ಲಬ್ ಸೇರಿರಿ | ಮೊಬೈಲಲ್ಲಿ ಕನ್ನಡ ಸುದ್ದಿ ಓದಿರಿ | ಹೂವಿನಂಗಡಿ 24/7
-
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
Horoscope March 9; ಈ ರಾಶಿಯವರ ಅದೃಷ್ಟವೇ ಬದಲಾಗುತ್ತೆ: 12 ರಾಶಿ ಭವಿಷ್ಯ ತಿಳಿಯಿರಿ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
Sensex crash: ಷೇರು ಮಾರುಕಟ್ಟೆಯಲ್ಲಿ ಭಾರಿ ಸಂಚಲನ; ಸೆನ್ಸೆಕ್ಸ್ 2100 ಅಂಕ ಕುಸಿತ -
E-Bus: ಕರ್ನಾಟಕದ ಹೊಸ ಯೋಜನೆಯಡಿ ಗ್ರಾಮೀಣ ಭಾಗಗಳಲ್ಲೂ ಓಡಾಡಲಿವೆ 1950 ಎಲೆಕ್ಟ್ರಿಕ್ ಬಸ್ಗಳು -
Prediction on Donald Trump: ಟ್ರಂಪ್ ಗೆಲುವು, ಇರಾನ್ ಯುದ್ಧ ಭವಿಷ್ಯ: 3 ಭವಿಷ್ಯವಾಣಿಯಲ್ಲಿ 2 ನಿಜ, ಮತ್ತೊಂದೇನು -
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
Sanju Samson: ಟಿ20 ವಿಶ್ವಕಪ್ ಗೆಲುವಿನ ಬಳಿಕ ಕ್ರಿಕೆಟ್ ದೇವರ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಸಂಜು ಸ್ಯಾಮ್ಸನ್












Click it and Unblock the Notifications