ಯಡ್ಡಿ ಸರಕಾರದ ಹಣೆಬರಹಕ್ಕೆ ಕ್ಷಣಗಣನೆ

ಮುಖ್ಯಮಂತ್ರಿ ಯಡಿಯೂರಪ್ಪ ಬಹುಮತ ಸಾಬೀತುಪಡಿಸಿದ ಬಳಿಕ ರಾಜಕೀಯ ಬೇಗೆ ಮುಗಿಯಿತು ಎಂದು ಎಲ್ಲರೂ ನಿಟ್ಟುಸಿರು ಬಿಟ್ಟಿದ್ದರು. ಪ್ರತಿಪಕ್ಷಗಳಾದ ಕಾಂಗ್ರೆಸ್-ಜೆಡಿಎಸ್ ಸೋತು ಸುಣ್ಣವಾಗಿವೆ ಎನ್ನಲಾಗಿತ್ತು. ಆದರೆ, ಈ ಪಕ್ಷಗಳ ನಾಯಕರು ತೆರೆಮರೆಯಲ್ಲಿ ನಡೆಸುತ್ತಿರುವ ಚಟುವಟಿಕೆ ಗಮನಿಸಿದರೆ, ಬರುವ ದಿನಗಳಲ್ಲಿ ರಾಜಕೀಯ ಚಟುವಟಿಕೆ ಇನ್ನಷ್ಟು ಬಿರುಸುಗೊಳ್ಳುವ ಸಾಧ್ಯತೆ ಇದೆ.
ಮೊಯ್ಲಿ ಜತೆ ಮಾತುಕತೆ : ರಾಜ್ಯದ ಜನತೆ ಆಯುಧ ಪೂಜೆ ಮತ್ತು ವಿಜಯದಶಮಿ ಆಚರಣೆಯಲ್ಲಿ ಮಗ್ನರಾಗಿದ್ದರೆ, ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಮತ್ತು ಸಂಸದ ಕುಮಾರಸ್ವಾಮಿ ವಿಶ್ರಮಿಸಲಿಲ್ಲ. ಪರ್ಯಾಯ ಸರಕಾರ ರಚನೆಯಲ್ಲಿ ಸೋತಿದ್ದರೂ, ಪ್ರಯತ್ನ ಕೈಬಿಟ್ಟಿಲ್ಲ ಎನ್ನುವಂತೆ ಕೇಂದ್ರ ಕಾನೂನು ಸಚಿವ ವೀರಪ್ಪ ಮೊಯ್ಲಿ ನಿವಾಸಕ್ಕೆ ಶನಿವಾರ ಭೇಟಿ ನೀಡಿ ಮಾತುಕತೆ ನಡೆಸಿದ್ದಾರೆ.
ಯಡಿಯೂರಪ್ಪ ಸರಕಾರ ಉರುಳದಂತೆ ತಡೆಯುವಲ್ಲಿ ಮೊಯ್ಲಿ ಕೊಡುಗೆ ಅಪಾರ ಎಂಬ ಮಾತು ಕೇಳಿ ಬಂದಿರುವ ಸಂದರ್ಭದಲ್ಲಿ ನಡೆದಿರುವ ಈ ಭೇಟಿ ಹೆಚ್ಚು ಮಹತ್ವಪಡೆದುಕೊಂಡಿದೆ. ಭಾನುವಾರ ಮುಖ್ಯಮಂತ್ರಿ ಯಡಿಯೂರಪ್ಪ ದಸರಾ ಉತ್ಸವದಲ್ಲಿ ಪಾಲ್ಗೊಂಡಿದ್ದರೆ, ಕುಮಾರಸ್ವಾಮಿ ಹಾಗೂ ಸಿದ್ದರಾಮಯ್ಯ, ಕಾಂಗ್ರೆಸ್ ಮುಖಂಡ ಸಿ.ಎಂ.ಇಬ್ರಾಹಿಂ ಮನೆಯಲ್ಲಿ ಭೇಟಿಯಾಗಿ ಮುಂದಿನ ರಾಜಕೀಯ ನಡೆ ಕುರಿತು ಒಂದು ತಾಸಿಗೂ ಹೆಚ್ಚು ಕಾಲ ಮಾತುಕತೆ ನಡೆಸಿದರು.
ಹಾವು-ಮುಂಗುಸಿಯಂತಿದ್ದ ಸಿದ್ದು-ಕುಮಾರಸ್ವಾಮಿ ಪದೇಪದೆ ಭೇಟಿ ಮಾಡುತ್ತಿರುವುದು ರಾಜಕೀಯ ವಲಯದಲ್ಲಿ ಅಚ್ಚರಿಗೆ ಕಾರಣವಾಗಿದೆ.
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications