ಬಾಗೇಪಲ್ಲಿ ಸುಂಕಲಮ್ಮನಿಗೆ ಯಾರು ದಿಕ್ಕು?

ಕಳೆದ ಎರಡು ವರ್ಷಗಳಿಂದ ರಾಷ್ಟ್ರೀಯ ಹೆದ್ದಾರಿ 7 ರ ಅಗಲೀಕರಣಕ್ಕೆ ತೊಡಕಾಗಿದ್ದ ಈ ದೇವಸ್ಥಾನವನ್ನು ಸೋಮವಾರ ಅಧಿಕಾರಿಗಳು ಕೆಡವಲು ಮುಂದಾಗಿದ್ದರು. ಆದರೆ ಸ್ಥಳೀಯರ ಪ್ರತಿಭಟನೆ ಹೆದರದೆ ಅಧಿಕಾರಿಗಳು ಜೆಸಿಬಿ ಯಂತ್ರಗಳೊಡನೆ ಮುನ್ನುಗಿದಾಗ ವೀರಾವೇಶದಿಂದ ಹಾರಾಟ ಮಾಡಿದ ಭಕ್ತಾದಿಗಳು ಸ್ಥಳದಲ್ಲೇ ನಿಲ್ಲಿಸಿದ್ದ ಖಾಸಗಿ ಜೀಪೊಂದಕ್ಕೆ ಬೆಂಕಿ ಹಾಕಿ ಆಕ್ರೋಶ ವ್ಯಕ್ತಪಡಿಸಿದರು. ದೇವಸ್ಥಾನವನ್ನು ಕೆಡವುತ್ತಿದ್ದ ಜೆಸಿಬಿ ಯಂತ್ರಕ್ಕೆ ಕಲ್ಲುಗಳನ್ನೆಸೆದರು. ಪರಿಸ್ಥಿತಿಯನ್ನು ಹತೋಟಿಗೆ ತರಲು ಪೊಲೀಸರು ಲಘು ಲಾಠಿ ಪ್ರಹಾರ ಮಾಡಿದರು.
ಪರಿಸ್ಥಿತಿ ಕೈಮೀರತೊಡಗಿದಾಗ ದೇಗುಲ ತೆರವು ಕಾರ್ಯಕ್ಕೆ ಮುಂದಾಗಿದ್ದ ಹೆಚ್ಚುವರಿ ಜಿಲ್ಲಾಧಿಕಾರಿ ಜಿ.ಎನ್.ನಾಯಕ್ ಮತ್ತು ತಹಶೀಲ್ದಾರ್ ಹನುಮಂತರಾಯಪ್ಪ ಅವರು ಸ್ಥಳದಿಂದ ಪೊಲೀಸರಿಗೆ ನಿರ್ದೇಶನ ನೀಡಿ ಜಾಗ ಖಾಲಿ ಮಾಡಿದರು.
ಎಸ್ಪಿ ಡಿಟಿ ಪವಾರ್ ಹಾಗು ಡಿವೈಎಸ್ಪಿ ದುರ್ಗಪ್ಪ ಅವರ ನೇತೃತ್ವದಲ್ಲಿ ಕೋರ್ಟ್ ಆಜ್ಞೆಯ ಮೇರೆಗೆ ದೇವಸ್ಥಾನವನ್ನು ಕೆಡವುವ ಯೋಜನೆಯನ್ನು ರೂಪಿಸಲಾಗಿದೆ. ಮೂಲ ವಿಗ್ರಹಕ್ಕೆ ಯಾವುದೇ ಧಕ್ಕೆ ಬಾರದಂತೆ ಸ್ಥಳಾಂತರಿಸಲಾಗಿದೆ ಎಂದು ಅಧಿಕಾರಿಗಳು ಸಮಾಜಾಯಿಸಿ ನೀಡಿದ್ದಾರೆ. ಆದರೆ, ಗಲಭೆ, ಗೊಂದಲಗಳ ನಡುವೆ ದೇಗುಲಗಳ ಗೊಡೆಗಳನ್ನು ಜೆಸಿಬಿ ಯಂತ್ರ ಉರುಳಿಸಿದ ಘಟನೆ ನಡೆದಿದ್ದು, ಜಿಲ್ಲೆಯಲ್ಲಿ ಇನ್ನೂ ಬೂದಿ ಮುಚ್ಚಿದ ಕೆಂಡದಂತಿದೆ.
ಟ್ವಿಟ್ಟರಲ್ಲಿ ನಮ್ಮನ್ನು ಹಿಂಬಾಲಿಸಿ | ದಟ್ಸ್ ಕನ್ನಡ ಫ್ಯಾನ್ ಕ್ಲಬ್ ಸೇರಿರಿ | ಮೊಬೈಲಲ್ಲಿ ಕನ್ನಡ ಸುದ್ದಿ ಓದಿರಿ | ಹೂವಿನಂಗಡಿ 24/7 | ಕನ್ನಡ ಸುದ್ದಿಗಳ SMS
-
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
Rashmika Mandanna: ಆ ಆಡಿಯೋ, ವಿಷಯವನ್ನ 24 ಗಂಟೆಯೊಳಗೆ ಡಿಲೀಟ್ ಮಾಡದಿದ್ದರೆ ಕಾನೂನು ಕ್ರಮ ಎಂದ ರಶ್ಮಿಕಾ ಮಂದಣ್ಣ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
ವಿಶ್ವಗುರು ಬಸವಣ್ಣ ಮತ್ತು ಅಕ್ಕಮಹಾದೇವಿ ಬಗ್ಗೆ ಅವಹೇಳನಕಾರಿ ಪೋಸ್ಟ್: ಆರೋಪಿ ಬಂಧನಕ್ಕೆ ಆಗ್ರಹ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ












Click it and Unblock the Notifications