ಬಾಗೇಪಲ್ಲಿ ಸುಂಕಲಮ್ಮನಿಗೆ ಯಾರು ದಿಕ್ಕು?

ಕಳೆದ ಎರಡು ವರ್ಷಗಳಿಂದ ರಾಷ್ಟ್ರೀಯ ಹೆದ್ದಾರಿ 7 ರ ಅಗಲೀಕರಣಕ್ಕೆ ತೊಡಕಾಗಿದ್ದ ಈ ದೇವಸ್ಥಾನವನ್ನು ಸೋಮವಾರ ಅಧಿಕಾರಿಗಳು ಕೆಡವಲು ಮುಂದಾಗಿದ್ದರು. ಆದರೆ ಸ್ಥಳೀಯರ ಪ್ರತಿಭಟನೆ ಹೆದರದೆ ಅಧಿಕಾರಿಗಳು ಜೆಸಿಬಿ ಯಂತ್ರಗಳೊಡನೆ ಮುನ್ನುಗಿದಾಗ ವೀರಾವೇಶದಿಂದ ಹಾರಾಟ ಮಾಡಿದ ಭಕ್ತಾದಿಗಳು ಸ್ಥಳದಲ್ಲೇ ನಿಲ್ಲಿಸಿದ್ದ ಖಾಸಗಿ ಜೀಪೊಂದಕ್ಕೆ ಬೆಂಕಿ ಹಾಕಿ ಆಕ್ರೋಶ ವ್ಯಕ್ತಪಡಿಸಿದರು. ದೇವಸ್ಥಾನವನ್ನು ಕೆಡವುತ್ತಿದ್ದ ಜೆಸಿಬಿ ಯಂತ್ರಕ್ಕೆ ಕಲ್ಲುಗಳನ್ನೆಸೆದರು. ಪರಿಸ್ಥಿತಿಯನ್ನು ಹತೋಟಿಗೆ ತರಲು ಪೊಲೀಸರು ಲಘು ಲಾಠಿ ಪ್ರಹಾರ ಮಾಡಿದರು.
ಪರಿಸ್ಥಿತಿ ಕೈಮೀರತೊಡಗಿದಾಗ ದೇಗುಲ ತೆರವು ಕಾರ್ಯಕ್ಕೆ ಮುಂದಾಗಿದ್ದ ಹೆಚ್ಚುವರಿ ಜಿಲ್ಲಾಧಿಕಾರಿ ಜಿ.ಎನ್.ನಾಯಕ್ ಮತ್ತು ತಹಶೀಲ್ದಾರ್ ಹನುಮಂತರಾಯಪ್ಪ ಅವರು ಸ್ಥಳದಿಂದ ಪೊಲೀಸರಿಗೆ ನಿರ್ದೇಶನ ನೀಡಿ ಜಾಗ ಖಾಲಿ ಮಾಡಿದರು.
ಎಸ್ಪಿ ಡಿಟಿ ಪವಾರ್ ಹಾಗು ಡಿವೈಎಸ್ಪಿ ದುರ್ಗಪ್ಪ ಅವರ ನೇತೃತ್ವದಲ್ಲಿ ಕೋರ್ಟ್ ಆಜ್ಞೆಯ ಮೇರೆಗೆ ದೇವಸ್ಥಾನವನ್ನು ಕೆಡವುವ ಯೋಜನೆಯನ್ನು ರೂಪಿಸಲಾಗಿದೆ. ಮೂಲ ವಿಗ್ರಹಕ್ಕೆ ಯಾವುದೇ ಧಕ್ಕೆ ಬಾರದಂತೆ ಸ್ಥಳಾಂತರಿಸಲಾಗಿದೆ ಎಂದು ಅಧಿಕಾರಿಗಳು ಸಮಾಜಾಯಿಸಿ ನೀಡಿದ್ದಾರೆ. ಆದರೆ, ಗಲಭೆ, ಗೊಂದಲಗಳ ನಡುವೆ ದೇಗುಲಗಳ ಗೊಡೆಗಳನ್ನು ಜೆಸಿಬಿ ಯಂತ್ರ ಉರುಳಿಸಿದ ಘಟನೆ ನಡೆದಿದ್ದು, ಜಿಲ್ಲೆಯಲ್ಲಿ ಇನ್ನೂ ಬೂದಿ ಮುಚ್ಚಿದ ಕೆಂಡದಂತಿದೆ.
ಟ್ವಿಟ್ಟರಲ್ಲಿ ನಮ್ಮನ್ನು ಹಿಂಬಾಲಿಸಿ | ದಟ್ಸ್ ಕನ್ನಡ ಫ್ಯಾನ್ ಕ್ಲಬ್ ಸೇರಿರಿ | ಮೊಬೈಲಲ್ಲಿ ಕನ್ನಡ ಸುದ್ದಿ ಓದಿರಿ | ಹೂವಿನಂಗಡಿ 24/7 | ಕನ್ನಡ ಸುದ್ದಿಗಳ SMS
-
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ವಂದೇ ಭಾರತ್ ರೈಲಿನ ಊಟ ಸೇವಿಸಿದ ಮಹಿಳೆಗೆ ತೀವ್ರ ಅಲರ್ಜಿ, 2 ವರ್ಷದ ಮಗನಿಗೆ ಅತಿಸಾರ: IRCTC ಹೇಳಿದ್ದೇನು? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ? -
Oracle: ಒರಾಕಲ್ ಸಂಸ್ಥೆಯಲ್ಲಿ ವೆಚ್ಚ ಕಡಿತದ ಭಾಗವಾಗಿ ಕೆಲಸ ಕಳೆದುಕೊಂಡ 12,000 ಜನ, 30,000 ಜನರಿಗೆ ಸಂಕಷ್ಟ -
KSRTC: ಏಪ್ರಿಲ್ 10ರವರೆಗೆ ವಿದ್ಯಾರ್ಥಿಗಳ ಬಸ್ಪಾಸ್ ಅವಧಿ ವಿಸ್ತರಣೆ -
ಏಪ್ರಿಲ್ ಮೊದಲ ವಾರ ಬ್ಯಾಂಕ್ ಬಂದ್: ಗ್ರಾಹಕರು ಮುಂಚಿತವಾಗಿ ಯೋಜನೆ ಮಾಡಬೇಕು -
ನಮ್ಮ ಮೆಟ್ರೋ ಪ್ರಯಾಣಿಕರಿಗೆ ನಿರಾಸೆ: ಮೇ ತಿಂಗಳಿನಲ್ಲಿ ಆರಂಭವಾಗಬೇಕಿದ್ದ ಪಿಂಕ್ ಲೈನ್ ಸಂಚಾರ ವಿಳಂಬ ಸಾಧ್ಯತೆ -
ವಾಸ್ತು ಪ್ರಕಾರ ಬಾತ್ರೂಮ್ನಲ್ಲಿ ಉಪ್ಪು ಇಡುವುದರಿಂದ ಏನು ಲಾಭ? -
ಚಲಿಸುವ ರೈಲಿನ ಬೋಗಿಯಲ್ಲಿ ಬಟ್ಟೆ ಒಣಗಿಸಿದ ಪ್ರಯಾಣಿಕರು: Viral Video ನೋಡಿ ನೆಟ್ಟಿಗರು ಗರಂ -
ಹೋಟೆಲ್, ರೆಸ್ಟೋರೆಂಟ್ ಮಾಲೀಕರಿಗೆ ಶಾಕ್: ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಬರೋಬ್ಬರಿ 195 ರೂ. ಭಾರಿ ಏರಿಕೆ












Click it and Unblock the Notifications