ವರ್ತೂರು ಪ್ರಕಾಶ್, ರಾಜೂಗೌಡ ಸಂಪುಟಕ್ಕೆ?

ರಾಜ್ಯಪಾಲ ಹಂಸರಾಜ್ ಭಾರದ್ವಾಜ್ ಕೂಡ ಸಂಪುಟ ವಿಸ್ತರಣೆಗೆ ಗ್ರೀನ್ ಸಿಗ್ನಲ್ ನೀಡಿದ್ದಾರೆ. ಯಡಿಯೂರಪ್ಪ ಅವರ ಸಂಪುಟದಲ್ಲಿ ಒಟ್ಟು 6 ಸ್ಥಾನಗಳು ತೆರವಾಗಿದ್ದು, ಈ ಪೈಕಿ 2 ಸ್ಥಾನಗಳನ್ನು ಮಾತ್ರ ಭರ್ತಿ ಮಾಡುವ ಬಗ್ಗೆ ಚರ್ಚೆ ನಡೆದಿದೆ.
ಪಕ್ಷದ ರಾಷ್ಟ್ರೀಯ ಮುಖಂಡ, ಸಂಸದ ಅನಂತ್ ಕುಮಾರ್ ಕೂಡ ಹೈಕೋರ್ಟ್ನ ತೀರ್ಪಿನ ನಂತರ ಸಂಪುಟ ವಿಸ್ತರಣೆ ಕಾರ್ಯಕ್ಕೆ ಮುಂದಾಗಿ ಎಂದು ಸೂಚನೆ ನೀಡಿರುವುದರಿಂದ ಎಲ್ಲವೂ ಹೈಕೋರ್ಟ್ ತೀರ್ಪಿನ ಬಳಿಕ ನಿರ್ಧಾರವಾಗಲಿದೆ. ಇದಲ್ಲದೆ, ನಿಗಮ, ಮಂಡಳಿಗಳಿಗೆ ಅಧ್ಯಕ್ಷರನ್ನು ನೇಮಕ ಮಾಡುವ ಸಾಧ್ಯತೆಯಿದ್ದು, ಜೆಡಿಎಸ್ ನಿಂದ ಬಿಜೆಪಿಗೆ ಹಾರಿದ ಎಂ.ಸಿ.ಅಶ್ವಥ್ ಗೆ ಉತ್ತಮ ಸ್ಥಾನ ಕಲ್ಪಿಸುವ ಸಾಧ್ಯತೆಯಿದೆ.
ಟ್ವಿಟ್ಟರಲ್ಲಿ ನಮ್ಮನ್ನು ಹಿಂಬಾಲಿಸಿ | ದಟ್ಸ್ ಕನ್ನಡ ಫ್ಯಾನ್ ಕ್ಲಬ್ ಸೇರಿರಿ | ಮೊಬೈಲಲ್ಲಿ ಕನ್ನಡ ಸುದ್ದಿ ಓದಿರಿ | ಹೂವಿನಂಗಡಿ 24/7 | ಕನ್ನಡ ಸುದ್ದಿಗಳ SMS












Click it and Unblock the Notifications