ಸಿದ್ದರಾಮಯ್ಯ ಅಯ್ಯೋ ಪಾಪ ಎಂದು ಶೋಭಾ

ಬಿಜೆಪಿ ನಾಚಿಕೆ ಮಾನ ಮರ್ಯಾದೆ ಇಲ್ಲದ ಸರಕಾರ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಲೇವಡಿ ಮಾಡುತ್ತಿದ್ದಾರೆ, ಇನ್ನೊಂದಡೆ ಇಂಧನ ಸಚಿವೆ ಶೋಭಾ ಕರಂದ್ಲಾಜೆ ಅವರು ಸಿದ್ದರಾಮಯ್ಯ ವಿರುದ್ಧ ಗಹಗಹಿಸಿ ನಗುತ್ತಲೇ ವಾಗ್ದಾಳಿ ನಡೆಸಿದ್ದಾರೆ.
ಬಿಜೆಪಿ ಆಪರೇಷನ್ ಕಮಲ ಆರಂಭಿಸಿದೆ. ಕಾಂಗ್ರೆಸ್ ಶಾಸಕರಿಗೆ ಗಾಳಿ ಹಾಕಿದೆ. 53 ಶಾಸಕರನ್ನು ಸಂಪರ್ಕಿಸಿದ್ದಾರೆ. ಬಿಜೆಪಿ ಬಂದರೆ 50 ಕೋಟಿ ರುಪಾಯಿ ಮತ್ತು ಮಂತ್ರಿಗಿರಿ ಆಮಿಷವನ್ನು ಒಡ್ಡಿದ್ದಾರೆ. ಶೋಭಾ ಕರಂದ್ಲಾಜೆ ಸೇರಿದಂತೆ ಸಿಎಂ ವಲಯದ ಕೆಲ ಸಚಿವರುಗಳು ಕಾರ್ಯಾಚರಣೆ ಆರಂಭಿಸಿದ್ದಾರೆ ಎಂದು ಸಿದ್ದರಾಮಯ್ಯ ಹೇಳ್ತಾನೇ ಇದಾರೆ.
ಸಿದ್ದರಾಮಯ್ಯ ಅವರು ಬರೀ ಆರೋಪ ಮಾಡುವುದಲ್ಲ. 50 ಕೋಟಿ ರುಪಾಯಿ ಮತ್ತು ಮಂತ್ರಿಗಿರಿಯನ್ನು ಯಾವ ಕಾಂಗ್ರೆಸ್ ಶಾಸಕರಿಗೆ ನಾವು ಅಮಿಷವೊಡ್ಡಿದ್ದೇವೆ ಎಂಬುದನ್ನು ಅವರು ಮೊದಲು ಬಹಿರಂಗಗೊಳಿಸಲಿ ಎನ್ನುವುದು ಶೋಭಾ ಒತ್ತಾಯ. ಮುಖ್ಯಮಂತ್ರಿ ಯಡಿಯೂರಪ್ಪ ನೇತೃತ್ವದ ಜನಾದೇಶದ ಸರಕಾರವನ್ನು ಬೀಳಿಸುವ ಮೂಲಕ ಮುಖ್ಯಮಂತ್ರಿಯಾಗುವ ಕನಸು ಕಂಡಿದ್ದ ಸಿದ್ದರಾಮಯ್ಯ, ಅದರಲ್ಲಿ ವಿಫಲರಾಗಿದ್ದಾರೆ. ಕೈಲಾಗದವನು ಮೈಯೆಲ್ಲ ಪರಚಿಕೊಂಡ ಅನ್ನುವ ಹಾಗೆ, ಸರಕಾರದ ವಿರುದ್ಧ ಆರೋಪಕ್ಕೆ ಇಳಿದಿದ್ದಾರೆ ಎಂದು ಶೋಭಾ ಲೇವಡಿ ಮಾಡಿದ್ದಾರೆ.
ಶಾಸಕ ಸುರೇಶಗೌಡರಿಗೆ ಅಮಿಷವೊಡ್ಡಲು ಸಚಿವೆ ಶೋಭಾ ಅವರು ಸಾರಥ್ಯ ವಹಿಸಿದ್ದಾರೆ. ಅದಕ್ಕೆ ಬೇಕಿರುವ ಎಲ್ಲ ದಾಖಲೆಗಳು ನಮ್ಮ ಬಳಿ ಎಂದು ಸಿದ್ದರಾಮಯ್ಯ ಸೋಮವಾರ ಆರೋಪಿಸಿದ್ದರು. ಇನ್ನೊಂದು ಮೂಲಗಳು ಪ್ರಕಾರ ಬಿಜೆಪಿ ಮತ್ತೆ ಆಪರೇಷನ್ ಕಮಲ ಆರಂಭಿಸಿದ್ದು, ಕಾಂಗ್ರೆಸ್ ಮತ್ತು ಜೆಡಿಎಸ್ ನ 12 ಶಾಸಕರನ್ನು ಸೆಳೆಯಲು ಕಾರ್ಯಾತಂತ್ರ ರೂಪಿಸಿದೆ ಎನ್ನುವ ಆರೋಪಗಳು ಕೇಳಿಬಂದಿದ್ದವು. ಈ ಯಾವ ಸುದ್ದಿಯನ್ನೂ ಒಪ್ಪಲೊಲ್ಲದ ಶೋಭಾ ಮಾತ್ರ ಅವಕಾಶ ವಂಚಿತ ಸಿದ್ದು ಅವರ ಹತಾಶ ಸ್ಥಿತಿ ಕಂಡು ಮಮ್ಮಲ ಮರುಗಿದರು. ಅಯ್ಯೋ ಪಾಪ, ಸಿದ್ದಪ್ಪ ಎಂದು ಉದ್ಗಾರ ತೆಗೆದಿದ್ದಾರೆ.
ಆಪರೇಷನ್ ಕಮಲಕ್ಕೆ ಬಲಿಯಾಗುವ ಶಾಸಕರು?
ಎಂ ಶ್ರೀನಿವಾಸ್(ಮಂಡ್ಯ), ಕೆ ಪಿ ಬಚ್ಚೇಗೌಡ(ಚಿಕ್ಕಬಳ್ಳಾಪುರ), ರಮೇಶ್ ಬಂಡಿಸಿದ್ದೇಗೌಡ(ಶ್ರೀರಂಗಪಟ್ಟಣ), ಕೆ ಬಿ ಚಂದ್ರಶೇಖರ್(ಕೆಆರ್ ಪೇಟೆ), ಮಂಜುನಾಥ(ಹುಣಸೂರು), ಬಿಬಿ ರಾಮಸ್ವಾಮಿಗೌಡ(ಕುಣಿಗಲ್), ಸುರೇಶಗೌಡ(ನಾಗಮಂಗಲ) ಅವರನ್ನು ಬಿಜೆಪಿ ಸಚಿವರು ಮತ್ತು ಶಾಸಕರು ಸಂಪರ್ಕಿಸಿದ್ದಾರೆ. ಮುಖ್ಯಮಂತ್ರಿಗಳ ಅಪ್ತ ವಲಯದ ಮೂವರು ಸಚಿವರು ಈ ಕಾರ್ಯಾಚರಣೆಯ ನೇತೃತ್ವ ವಹಿಸಿದ್ದಾರೆ ಎನ್ನಲಾಗಿದೆ.
-
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ












Click it and Unblock the Notifications