ಅನರ್ಹ ಶಾಸಕರ ವಿಚಾರಣೆ ಆರಂಭ
ಪಕ್ಷ ವಿರೋಧಿ ಚಟುವಟಿಕೆ ಆರೋಪದ ಮೇಲೆ 11 ಮಂದಿ ಬಿಜೆಪಿ ಶಾಸಕರನ್ನು ಅನರ್ಹಗೊಳಿಸಿ ಸ್ಪೀಕರ್ ಹೊರಡಿಸಿರುವ ಆದೇಶ ಕುರಿತು ಮುಖ್ಯನ್ಯಾಯಮೂರ್ತಿ ಜೆ ಎಸ್ ಖೇಹರ್ ಮತ್ತು ನ್ಯಾ. ಕುಮಾರ್ ಅವರಿದ್ದ ವಿಭಾಗೀಯ ಪೀಠ ವಿಭಿನ್ನ ನಿಲುವು ವ್ಯಕ್ತಪಡಿಸಿದ್ದರಿಂದ ಏಕಸದಸ್ಯ ಪೀಠಕ್ಕೆ ಪ್ರಕರಣವನ್ನು ಶಿಫಾರಸ್ಸು ಮಾಡಲಾಗಿತ್ತು.
ಬಿಜೆಪಿ ಪರ ಮಾಜಿ ಅಟಾರ್ನಿ ಜನರಲ್ ಸೋಲಿ ಸೂರಾಬ್ಜಿ ಮತ್ತು ಸತ್ಯಪಾಲ್ ಜೈನ್ ವಾದಿಸುತ್ತಿದ್ದರೆ, ಅನರ್ಹಗೊಂಡಿರುವ ಶಾಸಕರ ಪರ ರಾಘವನ್ ಮತ್ತು ಆಚಾರ್ಯ ವಕಾಲತ್ತು ನಡೆಸಿದ್ದಾರೆ. ಬೆಳಗ್ಗೆ 10.30ಕ್ಕೆ ವಿಚಾರಣೆ ಆರಂಭವಾಗಿದೆ.
ಅನರ್ಹಗೊಂಡ ಶಾಸಕರ ಪಟ್ಟಿ
ಅರಭಾವಿ-ಬಾಲಚಂದ್ರ ಜಾರಕಿಹೊಳಿ, ಕಾಗವಾಡ-ಭರಮ ಗೌಡ ಕಾಗೆ, ಬಸವನ ಬಾಗೇವಾಡಿ- ಎಸ್.ಕೆ.ಬೆಳ್ಳುಬ್ಬಿ, ಇಂಡಿ-ಡಾ.ಸಾರ್ವಭೌಮ ಬಗಲಿ, ಕಾರವಾರ-ಆನಂದ್ ವಸಂತ ಅಸ್ನೋಟಿಕರ್, ದೇವದುರ್ಗ- ಕೆ.ಶಿವನ ಗೌಡ ನಾಯಕ್, ಸಾಗರ- ಗೋಪಾಲಕೃಷ್ಣ ಬೇಳೂರು, ಕೆಜಿಎಫ್-ವೈ.ಸಂಪಂಗಿ, ನೆಲಮಂಗಲ-ಎಂ.ವಿ.ನಾಗರಾಜು, ಚಾಮರಾಜನಗರ -ಎಚ್.ಎಸ್. ಶಂಕರಲಿಂಗೇಗೌಡ, ಕೊಳ್ಳೇಗಾಲ-ಜಿ. ಎನ್.ನಂಜುಂಡಸ್ವಾಮಿ,
ಇಂಗ್ಲಿಷ್ ಲಿಪಿಯಲ್ಲಿ ಕನ್ನಡ ಎಸ್ಎಮ್ಎಸ್ | ದಟ್ಸ್ ಕನ್ನಡ ಫ್ಯಾನ್ ಕ್ಲಬ್ ಸೇರಿರಿ | ಮೊಬೈಲಲ್ಲಿ ಕನ್ನಡ ಸುದ್ದಿ ಓದಿರಿ | ಹೂವಿನಂಗಡಿ 24/7