ಹೈಕೋರ್ಟಲ್ಲಿ ವಿಚಾರಣೆ ; ಭಿನ್ನ ಶಾಸಕರಲ್ಲಿ ತಳಮಳ

ಶಾಸಕರನ್ನು ಅನರ್ಹಗೊಳಿಸಿ ಸಭಾಧ್ಯಕ್ಷ ಕೆಜಿ ಬೋಪಯ್ಯ ಅವರ ನಿರ್ಣಯ ನಿಯಮ ಮೀರಿಲ್ಲ, ದುರುದ್ದೇಶದಿಂದ ಕೂಡಿಲ್ಲ ಮತ್ತು ಸ್ವಾಭಾವಿಕ ನ್ಯಾಯ ಉಲ್ಲಂಘನೆ ಮಾಡಿಲ್ಲ ಎಂಬ ನಿರ್ಣಯಕ್ಕೆ ಮುಖ್ಯ ನ್ಯಾ.ಖೇಹರ್ ಮತ್ತು ನ್ಯಾ. ಕುಮಾರ್ ಅವರಿದ್ದ ಪೀಠ ತೀರ್ಪು ನೀಡಿತ್ತು.
ಸರಕಾರದ ಪರ ಅಟಾರ್ನಿ ಜನರಲ್ ಸೋಲಿ ಸೋರಾಬ್ಜಿ ಮತ್ತು ಅನರ್ಹಗೊಂಡ ಶಾಸಕರ ಪರ ಕೆಜಿ ರಾಘವನ್ ಮತ್ತು ಆಚಾರ್ಯ ವಾದ ಮಂಡಿಸಲಿದ್ದಾರೆ. ಇಂದು ಮಧ್ಯಾಹ್ನದ ಮೇಲೆ ವಿಚಾರಣೆ ಆರಂಭವಾಗುತ್ತಿರುವುದರಿಂದ ಇಂದೇ ತೀರ್ಪು ಬರುವುದು ಅನುಮಾನ.
ಭಿನ್ನಮತೀಯರಲ್ಲಿ ತಳಮಳ : ಕರ್ನಾಟಕ ಹೈಕೋರ್ಟಿನಲ್ಲಿ ಬಿಜೆಪಿ ಶಾಸಕರ ಅನರ್ಹತೆ ಕುರಿತ ವಿಚಾರಣೆ ಆರಂಭವಾಗುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರು ಬಳಿಯ ಗೋಲ್ಡನ್ ಪಾಮ್ ರೆಸಾರ್ಟಲ್ಲಿ ಕಾಲಹರಣ ಮಾಡುತ್ತಿರುವ ಭಿನ್ನಮತೀಯರ ಪಾಳಯದಲ್ಲಿ ತಣ್ಣನೆ ನಡುಕ ಶುರುವಾಗಿದೆ.
ಹೈಕೋರ್ಟಿನ ತೀರ್ಪು ಏನೇ ಆಗಲಿ, ಮುಂದೆ ಏನು ಮಾಡಬೇಕು, ಯಾವ ಪಕ್ಷದ ಜೊತೆ ಗುರುತಿಸಿಕೊಳ್ಳಬೇಕು, ಯಾವ ಪಕ್ಷ ಸೇರಬೇಕು ಎಂಬ ಕುರಿತು ತೀವ್ರ ಗೊಂದಲ ಕಾಣುತ್ತಿದೆ. ರಾಜಕೀಯ ಭವಿಷ್ಯ ಆತಂಕದಲ್ಲಿದೆ ಎಂಬ ಕುರುಹು ಅವರಲ್ಲಿ ಎದ್ದು ಕಾಣುತ್ತಿದೆ.
ಜೊತೆಗೆ ಬಿಜೆಪಿ ಪಕ್ಷ ಆಪರೇಷನ್ ಕಮಲಕ್ಕೆ ಕೈಹಾಕಿರುವುದು ಅವರನ್ನು ಮತ್ತಷ್ಟು ಆತಂಕದ ಮಡುವಿಗೆ ತಳ್ಳಿದೆ. ಆಪರೇಷನ್ ಕಮಲ ಶುರುಮಾಡಿದ್ದಕ್ಕೆ ಬಿಜೆಪಿಯನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿರುವ ಅವರು ಯಡಿಯೂರಪ್ಪ ಸರಕಾರ ಬೀಳಿಸುವವರೆಗೆ ವಿಶ್ರಾಂತಿ ಪಡೆಯುವುದಿಲ್ಲ ಎಂದು ಹೇಳಿದ್ದಾರೆ. ಯಡಿಯೂರಪ್ಪನವರು ಅಧಿಕಾರದಿಂದ ಕೆಳಗಿಳಿಯಲೇಬೇಕು ಎಂಬುದು ಅವರ ನಿಲುವಾಗಿದೆ.
ಅನರ್ಹಗೊಂಡ ಶಾಸಕರು : ಅರಭಾವಿ-ಬಾಲಚಂದ್ರ ಜಾರಕಿಹೊಳಿ, ಕಾಗವಾಡ-ಭರಮ ಗೌಡ ಕಾಗೆ, ಬಸವನ ಬಾಗೇವಾಡಿ- ಎಸ್.ಕೆ.ಬೆಳ್ಳುಬ್ಬಿ, ಇಂಡಿ-ಡಾ.ಸಾರ್ವಭೌಮ ಬಗಲಿ, ಕಾರವಾರ-ಆನಂದ್ ವಸಂತ ಅಸ್ನೋಟಿಕರ್, ದೇವದುರ್ಗ- ಕೆ.ಶಿವನ ಗೌಡ ನಾಯಕ್, ಸಾಗರ- ಗೋಪಾಲಕೃಷ್ಣ ಬೇಳೂರು, ಕೆಜಿಎಫ್-ವೈ.ಸಂಪಂಗಿ, ನೆಲಮಂಗಲ-ಎಂ.ವಿ.ನಾಗರಾಜು, ಚಾಮರಾಜನಗರ -ಎಚ್.ಎಸ್. ಶಂಕರಲಿಂಗೇಗೌಡ, ಕೊಳ್ಳೇಗಾಲ-ಜಿ. ಎನ್.ನಂಜುಂಡಸ್ವಾಮಿ.
ಇಂಗ್ಲಿಷ್ ಲಿಪಿಯಲ್ಲಿ ಕನ್ನಡ ಎಸ್ಎಮ್ಎಸ್ | ದಟ್ಸ್ ಕನ್ನಡ ಫ್ಯಾನ್ ಕ್ಲಬ್ ಸೇರಿರಿ | ಮೊಬೈಲಲ್ಲಿ ಕನ್ನಡ ಸುದ್ದಿ ಓದಿರಿ | ಹೂವಿನಂಗಡಿ 24/7
-
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
ಭಾರತದ ಹಡಗುಗಳಿಗೆ ಭರ್ಜರಿ ಸುದ್ದಿ ನೀಡಿದ ಇರಾನ್, ಗ್ಯಾಸ್ ಸಮಸ್ಯೆ ಇತ್ಯರ್ಥ ಸಾಧ್ಯತೆ | Operation Roaring Lion -
Swamijis: ಬಹುತೇಕ ಕಾವಿಧಾರಿ ಸ್ವಾಮೀಜಿಗಳು ಅವಿವಾಹಿತರು, ಆದರೆ ಅವರೆಲ್ಲರೂ ಬ್ರಹ್ಮಚಾರಿಗಳಲ್ಲ: ರವಿಕೃಷ್ಣ ರೆಡ್ಡಿ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion -
LPG Gas: ಗೃಹ-ವಾಣಿಜ್ಯ ಸಿಲಿಂಡರ್ ಬುಕಿಂಗ್ ಮಿತಿ, ದಾಸ್ತಾನು ನಿಯಮಗಳೇನು? ಗ್ಯಾಸ್ ದರಪಟ್ಟಿ












Click it and Unblock the Notifications