ಕಾಂಗ್ರೆಸ್ ಶಾಸಕ ನಾರಾಯಣಸ್ವಾಮಿ ರಾಜೀನಾಮೆ

ಕರ್ನಾಟಕ ಹೈಕೋರ್ಟಿನಲ್ಲಿ ಶಾಸಕರ ಅನರ್ಹತೆ ಕುರಿತ ವಿಚಾರಣೆ ನಡೆಯುತ್ತಿರುವಾಗಲೇ 'ಆಪರೇಷನ್ ಕಮಲ'ವನ್ನು ಬಿಜೆಪಿ ತೀವ್ರಗೊಳಿಸಿದೆ. ಸಭಾಧ್ಯಕ್ಷ ಕೆಜಿ ಬೋಪಯ್ಯ ಅವರು ಕೋಲಾರ ಜಿಲ್ಲೆಯ ನಾರಾಯಣಸ್ವಾಮಿ ಅವರ ರಾಜೀನಾಮೆಯನ್ನು ಸ್ವೀಕರಿಸಿದ್ದಾರೆ.
ಆಪರೇಷನ್ ಕಮಲಕ್ಕೆ ಇಲ್ಲಿಯವರೆಗೆ ಒಟ್ಟು ಮೂವರು ಬಲಿಯಾಗಿದ್ದಾರೆ. ಮೊದಲು ಚನ್ನಪಟ್ಟಣದ ಶಾಸಕ ಎಂಸಿ ಅಶ್ವತ್ಥ್, ಜಗಳೂರಿನ ಶಾಸಕ ಎಸ್ ವಿ ರಾಮಚಂದ್ರ ಮತ್ತು ಈಗ ಬಂಗಾರಪೇಟೆ ಶಾಸಕ ನಾರಾಯಣಸ್ವಾಮಿ. ಇವರ ಜೊತೆಗೆ ಇನ್ನೂ ಮೂರು ನಾಲ್ಕು ಕಾಂಗ್ರೆಸ್ಸಿಗರು ಬಿಜೆಪಿ ಸೇರಿರುವ ಸಾಧ್ಯತೆಯಿದೆ ಎಂದು ಹೇಳಲಾಗಿದೆ.
ಕಾಂಗ್ರೆಸ್ ಆಕ್ರೋಶ : ಆಪರೇಷನ್ ಕಮಲಕ್ಕೆ ಕೆಪಿಸಿಸಿ ಅಧ್ಯಕ್ಷ ಆರ್ ವಿ ದೇಶಪಾಂಡೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಬಿಜೆಪಿ ಸಂವಿಧಾನಕ್ಕೆ ಅಪಚಾರ ಬಗೆಯುತ್ತಿದೆ. ಇದರ ವಿರುದ್ಧ ರಾಜ್ಯಪಾಲರಿಗೆ, ಪ್ರಧಾನಿಗೆ ಮತ್ತು ರಾಷ್ಟ್ರಪತಿಗೆ ದೂರು ನೀಡುವುದಾಗಿ ಹೇಳಿದ್ದಾರೆ.
ರಾಜ್ಯಪಾಲ ಹಂಸರಾಜ್ ಭಾರದ್ವಾಜ್ ಅವರು ಮಧ್ಯಪ್ರವೇಶಿಸಿ ಸರಕಾರ ವಜಾ ಗೊಳಿಸಲು ಶಿಫಾರಸು ಮಾಡಬೇಕು. ಬಿಜೆಪಿಯವರೇ ಆದ ಸ್ಪೀಕರ್ ಬೋಪಯ್ಯ ಈ ಆಪರೇಷನ್ ಕಮಲದಲ್ಲಿ ಶಾಮೀಲಾಗಿದ್ದಾರೆ. ಇದರ ವಿರುದ್ಧ ನಮ್ಮ ಹೋರಾಟ ತೀವ್ರವಾಗಲಿದೆ. ಅವಶ್ಯಕತೆ ಬಿದ್ದರೆ ಎಲ್ಲ ಕಾಂಗ್ರೆಸ್ ಶಾಸಕರು ರಾಜೀನಾಮೆ ಸಲ್ಲಿಸುವುದಾಗಿ ದೇಶಪಾಂಡೆ ಹೇಳಿದರು.
ಈಗಾಗಲೆ, ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ಡಿ ಕುಮಾರಸ್ವಾಮಿ ಅವರು ಕೂಡ ಇದೇ ಮಾತನ್ನು ಹೇಳಿದ್ದಾರೆ. ಬಿಜೆಪಿ ಇದೇ ರೀತಿ ಆಪರೇಷನ್ ಕಮಲ ಮುಂದುವರಿಸಿದರೆ ಎಲ್ಲ 27 ಶಾಸಕರು ರಾಜೀನಾಮೆ ಸಲ್ಲಿಸುವುದಾಗಿ ಬೆದರಿಕೆ ಒಡ್ಡಿದ್ದಾರೆ. ಸಭಾಧ್ಯಕ್ಷ ಸ್ಥಾನದಲ್ಲಿ ಕುಳಿತಿರುವ ಕೆಜಿ ಬೋಪಯ್ಯ ಒಬ್ಬ ಅಯೋಗ್ಯ ಮನುಷ್ಯ ಎಂದು ಕೆಂಡ ಕಾರಿದ್ದಾರೆ. ಕೇಂದ್ರ ಸರಕಾರದ ವಿರುದ್ಧ ಕೂಡ ಹರಿಹಾಯ್ದ ಅವರು, ಕೇಂದ್ರ ಜವಾಬ್ದಾರಿಯುತವಾಗಿ ವರ್ತಿಸಿದ್ದರೆ ಕರ್ನಾಟಕದಲ್ಲಿ ಈ ಪರಿಸ್ಥಿತಿ ಉದ್ಭವಿಸುತ್ತಿರಲಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
-
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Bengaluru Property Tax: ಆಸ್ತಿ ತೆರಿಗೆ ಸ್ವೀಕಾರಕ್ಕಾಗಿ ರಾತ್ರಿ 10ಗಂಟೆವರೆಗೆ ಪಾಲಿಕೆ ಕಚೇರಿ ಓಪನ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಮಾರ್ಚ್ 30ರ ದರಪಟ್ಟಿ -
Hardik Pandya: ಕೇವಲ 35 ದಿನಗಳಲ್ಲಿ ಕೋಟಿ.. ಕೋಟಿ ಖರ್ಚು ಮಾಡಿದ ಹಾರ್ದಿಕ್ ಪಾಂಡ್ಯ; ಇಲ್ಲಿದೆ ಪಟ್ಟಿ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ












Click it and Unblock the Notifications