ಕಾಂಗ್ರೆಸ್ ಶಾಸಕ ನಾರಾಯಣಸ್ವಾಮಿ ರಾಜೀನಾಮೆ

ಕರ್ನಾಟಕ ಹೈಕೋರ್ಟಿನಲ್ಲಿ ಶಾಸಕರ ಅನರ್ಹತೆ ಕುರಿತ ವಿಚಾರಣೆ ನಡೆಯುತ್ತಿರುವಾಗಲೇ 'ಆಪರೇಷನ್ ಕಮಲ'ವನ್ನು ಬಿಜೆಪಿ ತೀವ್ರಗೊಳಿಸಿದೆ. ಸಭಾಧ್ಯಕ್ಷ ಕೆಜಿ ಬೋಪಯ್ಯ ಅವರು ಕೋಲಾರ ಜಿಲ್ಲೆಯ ನಾರಾಯಣಸ್ವಾಮಿ ಅವರ ರಾಜೀನಾಮೆಯನ್ನು ಸ್ವೀಕರಿಸಿದ್ದಾರೆ.
ಆಪರೇಷನ್ ಕಮಲಕ್ಕೆ ಇಲ್ಲಿಯವರೆಗೆ ಒಟ್ಟು ಮೂವರು ಬಲಿಯಾಗಿದ್ದಾರೆ. ಮೊದಲು ಚನ್ನಪಟ್ಟಣದ ಶಾಸಕ ಎಂಸಿ ಅಶ್ವತ್ಥ್, ಜಗಳೂರಿನ ಶಾಸಕ ಎಸ್ ವಿ ರಾಮಚಂದ್ರ ಮತ್ತು ಈಗ ಬಂಗಾರಪೇಟೆ ಶಾಸಕ ನಾರಾಯಣಸ್ವಾಮಿ. ಇವರ ಜೊತೆಗೆ ಇನ್ನೂ ಮೂರು ನಾಲ್ಕು ಕಾಂಗ್ರೆಸ್ಸಿಗರು ಬಿಜೆಪಿ ಸೇರಿರುವ ಸಾಧ್ಯತೆಯಿದೆ ಎಂದು ಹೇಳಲಾಗಿದೆ.
ಕಾಂಗ್ರೆಸ್ ಆಕ್ರೋಶ : ಆಪರೇಷನ್ ಕಮಲಕ್ಕೆ ಕೆಪಿಸಿಸಿ ಅಧ್ಯಕ್ಷ ಆರ್ ವಿ ದೇಶಪಾಂಡೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಬಿಜೆಪಿ ಸಂವಿಧಾನಕ್ಕೆ ಅಪಚಾರ ಬಗೆಯುತ್ತಿದೆ. ಇದರ ವಿರುದ್ಧ ರಾಜ್ಯಪಾಲರಿಗೆ, ಪ್ರಧಾನಿಗೆ ಮತ್ತು ರಾಷ್ಟ್ರಪತಿಗೆ ದೂರು ನೀಡುವುದಾಗಿ ಹೇಳಿದ್ದಾರೆ.
ರಾಜ್ಯಪಾಲ ಹಂಸರಾಜ್ ಭಾರದ್ವಾಜ್ ಅವರು ಮಧ್ಯಪ್ರವೇಶಿಸಿ ಸರಕಾರ ವಜಾ ಗೊಳಿಸಲು ಶಿಫಾರಸು ಮಾಡಬೇಕು. ಬಿಜೆಪಿಯವರೇ ಆದ ಸ್ಪೀಕರ್ ಬೋಪಯ್ಯ ಈ ಆಪರೇಷನ್ ಕಮಲದಲ್ಲಿ ಶಾಮೀಲಾಗಿದ್ದಾರೆ. ಇದರ ವಿರುದ್ಧ ನಮ್ಮ ಹೋರಾಟ ತೀವ್ರವಾಗಲಿದೆ. ಅವಶ್ಯಕತೆ ಬಿದ್ದರೆ ಎಲ್ಲ ಕಾಂಗ್ರೆಸ್ ಶಾಸಕರು ರಾಜೀನಾಮೆ ಸಲ್ಲಿಸುವುದಾಗಿ ದೇಶಪಾಂಡೆ ಹೇಳಿದರು.
ಈಗಾಗಲೆ, ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ಡಿ ಕುಮಾರಸ್ವಾಮಿ ಅವರು ಕೂಡ ಇದೇ ಮಾತನ್ನು ಹೇಳಿದ್ದಾರೆ. ಬಿಜೆಪಿ ಇದೇ ರೀತಿ ಆಪರೇಷನ್ ಕಮಲ ಮುಂದುವರಿಸಿದರೆ ಎಲ್ಲ 27 ಶಾಸಕರು ರಾಜೀನಾಮೆ ಸಲ್ಲಿಸುವುದಾಗಿ ಬೆದರಿಕೆ ಒಡ್ಡಿದ್ದಾರೆ. ಸಭಾಧ್ಯಕ್ಷ ಸ್ಥಾನದಲ್ಲಿ ಕುಳಿತಿರುವ ಕೆಜಿ ಬೋಪಯ್ಯ ಒಬ್ಬ ಅಯೋಗ್ಯ ಮನುಷ್ಯ ಎಂದು ಕೆಂಡ ಕಾರಿದ್ದಾರೆ. ಕೇಂದ್ರ ಸರಕಾರದ ವಿರುದ್ಧ ಕೂಡ ಹರಿಹಾಯ್ದ ಅವರು, ಕೇಂದ್ರ ಜವಾಬ್ದಾರಿಯುತವಾಗಿ ವರ್ತಿಸಿದ್ದರೆ ಕರ್ನಾಟಕದಲ್ಲಿ ಈ ಪರಿಸ್ಥಿತಿ ಉದ್ಭವಿಸುತ್ತಿರಲಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications