ರಾಜೀನಾಮೆ ನೀಡಿ ಚುನಾವಣೆ ಎದುರಿಸಿ :ಎಚ್ಡಿಕೆ

ವಜ್ರ ಕಳೆದುಹೋಗಲ್ಲ: ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಸಿಎಂ ವಿರುದ್ದ ವಾಗ್ಧಾಳಿ ನಡೆಸಿ, ಬಿಜೆಪಿ ಎರಡನೇ ಹಂತದ ಆಪರೇಷನ್ ಕಮಲ ನಡೆಸಿದರೆ ಬಿಜೆಪಿ ಶಾಸಕರ ಸಂಖ್ಯೆ 80ಕ್ಕೆ ಕುಸಿದು ಸರ್ಕಾರ ತಾನಾಗೇ ಬಿದ್ದು ಹೋಗುತ್ತದೆ. ವಜ್ರದ ಹಾಗೆ ಇರುವ ಜೆಡಿಎಸ್ನ ಶಾಸಕರನ್ನು ಸೆಳೆಯಲು ಸಹ ಬಿಜೆಪಿಗೆ ಸಾಧ್ಯವಿಲ್ಲ ಎಂದರು.
ಸ್ಪೀಕರ್ ಅವರು ಪಕ್ಷಪಾತದಿಂದ ನಡೆದುಕೊಂಡಿದ್ದಾರೆ ಎಂದು ಟೀಕಿಸಿದ ಕುಮಾರಸ್ವಾಮಿ, ಯಡಿಯೂರಪ್ಪ ಅವರು ವಿಶ್ವಾಸಮತ ಯಾಚನೆ ಅಧಿವೇಶನದಲ್ಲಿ ಸದನ ಪ್ರವೇಶಿಸಲು ಮುಂದಾದ ಪ್ರತಿಪಕ್ಷ ನಾಯಕರು ಮತ್ತು ಸದಸ್ಯರನ್ನು ಪೊಲೀಸರು ತಡೆದರು. ಪೊಲೀಸರೇ ಸದನ ಪ್ರವೇಶಿಸಿದ ಘಟನೆಯೂ ನಡೆದು ಹೋಯಿತು ಎಂದರು.
ಅತೃಪ್ತರು ಗೃಹಬಂಧನದಲ್ಲಿಲ್ಲ: ಅನರ್ಹಗೊಂಡಿರುವ 16 ಮಂದಿ ಶಾಸಕರನ್ನು ಜೆಡಿಎಸ್ ಗೃಹಬಂಧನದಲ್ಲಿ ಇಟ್ಟಿಲ್ಲ. ಅವರ ರಕ್ಷಣೆಗೆ ಪಕ್ಷ ಧಾವಿಸಿದೆ. ಹಿರಿಯ ಶಾಸಕ ಶಂಕರಲಿಂಗೇಗೌಡರ ಮೇಲೆ ಶಾಸಕರ ಭವನಕ್ಕೆ ನುಗ್ಗಿ ಗೂಂಡಾಗಳು ಹಲ್ಲೆ ನಡೆಸಿದರು. ಯಾರು ಈ ಹಲ್ಲೆ ನಡೆಸಿದರು ಯಾರು ಗೂಂಡಾಗಳು ಎನ್ನುವ ಬಗ್ಗೆ ಗೃಹ ಸಚಿವರು ಉತ್ತರಿಸಬೇಕು ಎಂದು ಕುಮಾರಸ್ವಾಮಿ ಪ್ರಶ್ನೆ ಎಸೆದರು.
ತನಿಖೆಗೆ ಸಿದ್ಧ : ಸರ್ಕಾರದ ಪತನಕ್ಕೆ ಗಣಿ ಮಾಲಿಕರ ಹಣ ಬಳಕೆಯಾಗಿದೆ ಎನ್ನುವ ಆರೋಪವನ್ನು ತಳ್ಳಿ ಹಾಕಿದ ಅವರು ಈ ಬಗ್ಗೆ ಸರ್ಕಾರ ಯಾವ ರೀತಿಯ ತನಿಖೆ ನಡೆಸಿದರೂ ಅದನ್ನು ಎದುರಿಸಲು ತಾವು ಹಾಗೂ ತಮ್ಮ ಕುಟುಂಬ ಸದಾ ಸಿದ್ಧ ಎಂದರು.
ವಿಪಕ್ಷಗಳು ಅಭಿವೃದ್ಧಿಗೆ ಅಡ್ಡಿಪಡಿಸುತ್ತಿವೆ ಎಂದು ಸಿಎಂ ಹೇಳುತ್ತಿದ್ದಾರೆ. ಎಲ್ಲಾ ವಿಪಕ್ಷ ಶಾಸಕರು ರಾಜೀನಾಮೆ ನೀಡಲಿ ಎಂದು ಅವರು ಬಹಿರಂಗವಾಗಿ ವಿನಂತಿಸಿದರೆ ತಮ್ಮ ಪಕ್ಷದ ಎಲ್ಲಾ ಶಾಸಕರು ರಾಜೀನಾಮೆ ನೀಡಲು ಸಿದ್ಧರಿದ್ದಾರೆ. ವಿರೋಧ ಪಕ್ಷಗಳಿಲ್ಲದೆ ಬಿಜೆಪಿ ಪಕ್ಷ ರಾಜ್ಯಭಾರ ಮಾಡಲಿ ಎಂದು ಕುಮಾರಸ್ವಾಮಿ ಹೇಳಿದ್ದಾರೆ.
ಟ್ವಿಟ್ಟರಲ್ಲಿ ನಮ್ಮನ್ನು ಹಿಂಬಾಲಿಸಿ | ದಟ್ಸ್ ಕನ್ನಡ ಫ್ಯಾನ್ ಕ್ಲಬ್ ಸೇರಿರಿ | ಮೊಬೈಲಲ್ಲಿ ಕನ್ನಡ ಸುದ್ದಿ ಓದಿರಿ | ಹೂವಿನಂಗಡಿ 24/7 | ಕನ್ನಡ ಸುದ್ದಿಗಳ SMS
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications