1 ಕೆಜಿ ಕಸಕ್ಕೆ 2 ರೂ. ಕರೆ ಮಾಡಿ ಪಡೆಯಿರಿ

ಈ ಕಾರ್ಯಕ್ರಮದ ಮುಖೇನ ನಗರದ ನಿವಾಸಿಗಳಿಗೆ ತ್ಯಾಜ್ಯ ವಿಲೇವಾರಿಯ ಸೂಕ್ತ ಕ್ರಮಗಳು ಮತ್ತು ಎಲ್ಲೆಂದರಲ್ಲಿ ತ್ಯಾಜ್ಯಗಳನ್ನು ಬಿಸಾಡುವುದರಿಂದ ಆಗುವ ಪರಿಸರ ಮಾಲಿನ್ಯದ ಕುರಿತು ಅರಿವು ಮೂಡಿಸಲಾಗುವುದು. ಅಲ್ಲದೆ ತ್ಯಾಜ್ಯವಸ್ತುಗಳ ಮರುಬಳಕೆ ಕ್ರಮಗಳ ಬಗ್ಗೆ ತಿಳಿವಳಿಕೆ ನೀಡಲಾಗುವುದು ಎಂದು ತಿಳಿಸಿದರು.
ತ್ಯಾಜ್ಯ ಕೊಡಿ ಹಣ ಪಡೆಯಿರಿ: ನಗರದ ನಿವಾಸಿಗಳು ತಮ್ಮ ಮನೆಯಲ್ಲಿ ಉತ್ಪಾದನೆಯಾಗುವ ತ್ಯಾಜ್ಯವಸ್ತುಗಳನ್ನು ಒಣ ಮತ್ತು ಹಸಿ ತ್ಯಾಜ್ಯಗಳಾಗಿ ವಿಂಗಡಿಸಿ ತಮ್ಮ ಸಂಸ್ಥೆಗೆ ಮಾರಾಟ ಮಾಡಬಹುದು. ಇದರ ಪ್ರತಿಯಾಗಿ ಪ್ರತಿ ಕೆಜಿ ತ್ಯಾಜ್ಯಕ್ಕೆ 2 ರೂ. ಹಣ ಪಡೆಯಬಹುದೆಂದು ಅವರು ತಿಳಿಸಿದರು.
ನಗರದ ಬಡಾವಣೆಗಳಲ್ಲಿನ ಮನೆ, ಶಾಲೆ ಹಾಗೂ ವಸತಿ ಸಮುಚ್ಚಯಗಳಲ್ಲಿ ತ್ಯಾಜ್ಯವಸ್ತುಗಳನ್ನು ಖರೀದಿ ಮಾಡಲಾಗುತ್ತದೆ. ಸಂಸ್ಥೆಯು ಒಂದು ವರ್ಷ ಪೂರೈಸಿದೆ. ಪ್ರತಿ ತಿಂಗಳು 320ಟನ್ ತ್ಯಾಜ್ಯವನ್ನು ಸಂಗ್ರಹಿಸಿಸುತ್ತಿದ್ದು, ಕಳೆದ ವರ್ಷದಲ್ಲಿ ಒಟ್ಟು 38ಸಾವಿರ ಟನ್ ತ್ಯಾಜ್ಯವಸ್ತುಗಳನ್ನು ಖರೀದಿ ಮಾಡಲಾಗಿದೆ. ಇದರಲ್ಲಿ ಶೇ.10ರಷ್ಟು ಪುನರ್ಬಳಕೆ ಮಾಡಲಾಗಿದೆ. ನಮ್ಮ ಈ ಪ್ರಯತ್ನಕ್ಕೆ ಬಿಬಿಎಂಪಿ ಮತ್ತು ನಾಗರಿಕರಿಂದ ಉತ್ತಮ ಸಹಕಾರ ದೊರೆತಿದೆ ಎಂದು ಅವರು ನುಡಿದರು.
ತ್ಯಾಜ್ಯಪುನರ್ಬಳಕೆ ಅಗತ್ಯ: ನಗರದ ಸುಮಾರು 15ಸಾವಿರ ಮನೆಗಳನ್ನು ಸಮೀಕ್ಷೆಗೆ ಒಳಪಡಿಸಲಾಗಿದ್ದು, ತ್ಯಾಜ್ಯ ವಿಲೇವಾರಿ ಮತ್ತು ಮರುಬಳಕೆ ಬಗ್ಗೆ ನಿವಾಸಿಗಳಿಗೆ ಅರಿವಿನ ಕೊರತೆ ಇದೆ. ತ್ಯಾಜ್ಯ ವಸ್ತುಗಳ ಉತ್ಪಾದನೆ ಮತ್ತು ಮರು ಬಳಕೆ ಕ್ರಮಗಳ ಕುರಿತು ಸೂಕ್ತವಾಗಿ ತಿಳಿವಳಿಕೆ ಪಡೆದುಕೊಂಡರೆ ಶೇ.50ರಷ್ಟು ತ್ಯಾಜ್ಯಗಳ ಉತ್ಪಾದನೆ ಕಡಿಮೆ ಮಾಡಬಹುದು ಹಾಗೂ ಶೇ.40ರಷ್ಟು ತ್ಯಾಜ್ಯಗಳನ್ನು ಪುನರ್ಬಳಕೆ ಮಾಡಬಹುದು.
ತ್ಯಾಜ್ಯಪದಾರ್ಥಗಳ ಮಾರಾಟದ ಕುರಿತು ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ 080-4039 0999ನ್ನು ಸಂಪರ್ಕಿಸಬಹುದು ಅಥವಾ www.cbengaluru.com ತಾಣ ವೀಕ್ಷಿಸಬಹುದು ಎಂದು ಅವರು ಹೇಳಿದರು.
ಟ್ವಿಟ್ಟರಲ್ಲಿ ನಮ್ಮನ್ನು ಹಿಂಬಾಲಿಸಿ | ದಟ್ಸ್ ಕನ್ನಡ ಫ್ಯಾನ್ ಕ್ಲಬ್ ಸೇರಿರಿ | ಮೊಬೈಲಲ್ಲಿ ಕನ್ನಡ ಸುದ್ದಿ ಓದಿರಿ | ಹೂವಿನಂಗಡಿ 24/7 | ಕನ್ನಡ ಸುದ್ದಿಗಳ SMS
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ












Click it and Unblock the Notifications