ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಶ್ರೀರಾಮಸೇನೆ ದತ್ತಮಾಲಾ ಅಭಿಯಾನ ಸಂಪನ್ನ

By Mahesh
|
Google Oneindia Kannada News

Dattamala Abhiyan concludes
ಚಿಕ್ಕಮಗಳೂರು, ಅ.22: ಜಿಟಿ ಜಿಟಿ ಮಳೆ, ಗಾಳಿಗೆ ತೂರಾಡುತ್ತಿದ್ದ ತಾತ್ಕಾಲಿಕ ಶೆಡ್ ನಡುವೆ ಶ್ರೀರಾಮಸೇನೆ ಹಮ್ಮಿಕೊಂಡಿದ್ದ ದತ್ತಮಾಲಾ ಅಭಿಯಾನ ಯಾವುದೇ ವಿಘ್ನಗಳಿಲ್ಲದೆ ಸಂಪನ್ನವಾಯಿತು. ಎರಡು ವರ್ಷ ಕಳೆದರೂ ಬಾಬಾಬುಡನ್ ಗಿರಿ ಗುಹೆಯ ದುರಸ್ತಿ ಕಾರ್ಯ ಕುಂಠಿತ ಸಾಗಿರುವುದಕ್ಕೆ ಖೇದ ವ್ಯಕ್ತಪಡಿಸಿ, ಸರ್ಕಾರಕ್ಕೆ ಇದು ಕೊನೆ ಎಚ್ಚರಿಕೆ ಎಂದ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್, ಶೋಭಾಯಾತ್ರೆಯಲ್ಲಿ ಪಾಲ್ಗೊಂಡು 'ದತ್ತ ದತ್ತ ದತ್ತ ಗುರುದೇವ ದತ್ತ' ಎಂದು ದತ್ತಾತ್ರೇಯನನ್ನು ಭಜಿಸಿದರು.

ನಾಡಿನ ಮೂಲೆ ಮೂಲೆಗಳಿಂದ ಬಂದಿದ್ದ ಭಕ್ತಾದಿಗಳಿಗೆ ಅ.18 ರಂದು ದತ್ತಮಾಲೆ ಧಾರಣೆ ಕಾರ್ಯವಾಗಿತ್ತು. ಇಂದು ನಗರದ ತಾಲೂಕು ಕಚೇರಿ ಆವರಣದಲ್ಲಿರುವ ಬೋಳರಾಮೇಶ್ವರ ದೇವಸ್ಥಾನದಿಂದ ಹೊರಟ ಸುಮಾರು 2 ಸಾವಿರಕ್ಕೂ ಅಧಿಕ ದತ್ತಮಾಲಾಧಾರಿಗಳು ನಗರದ ಪ್ರಮುಖ ಬೀದಿಗಳಲ್ಲಿ ಶೋಭಾಯಾತ್ರೆ ನಡೆಸಿ ಇನಾಂ ದತ್ತಾತ್ರೇಯ ಪೀಠವನ್ನು ತಲುಪಿದರು.

ಬೆಂಗಳೂರು, ಮಂಗಳೂರು, ಹುಬ್ಬಳ್ಳಿ, ಧಾರವಾಡ, ಸುಳ್ಯ, ಪುತ್ತೂರು, ಮೈಸೂರು ಸೇರಿದಂತೆ ರಾಜ್ಯದ ವಿವಿಧೆಡೆಗಳಿಂದ ಬಂದಿದ್ದ ಭಕ್ತರನ್ನು ಬ್ರಹ್ಮಾನಂದ ಸ್ವಾಮೀಜಿ, ಸಿದ್ದಲಿಂಗ ಸ್ವಾಮೀಜಿ ಹಾಗೂ ಪ್ರಮೋದ್ ಮುತಾಲಿಕ್ ಮುನ್ನೆಡೆಸಿದರು.

ಮಳೆ ನಡುವೆ ತಾತ್ಕಾಲಿಕ ಶೆಡ್ ಗಳಲ್ಲಿ ಪೂಜೆ ನಡೆಸುತ್ತಿದ್ದ ಸಂದರ್ಭದಲ್ಲಿ ಶೆಡ್ ನ ಷೀಟ್ ಗಳು ಹಾರುಹೋಗಿ ಗೊಂದಲ ಉಂಟಾಗಿತ್ತು. ಆದಎರ್, ಪೂಜೆ, ಹೋಮ, ಹವನಾದಿಗಳು ಸಾಂಗವಾಗಿ ನಡೆದು, ನೆರೆದಿದ್ದ ಭಕ್ತ ಸಮೂಹಕ್ಕೆ ಸಂತೃಪ್ತಿಯಿಂದ ಊರುಗಳಿಗೆ ತೆರಳಿದರು.

ವಿಡಿಯೋಗಳು:.ಖೆಡ್ಡಾಕ್ಕೆ ಬಿದ್ದ ಬಿಜೆಪಿ ಶಾಸಕ ಸುರೇಶ್ ಗೌಡ |ಶಾಸಕನಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡು | ರಿಂಗ ರಿಂಗಾ ಪಾಲಿಟಿಕ್ಸ್ ರಿಮಿಕ್ಸ್ |

ಟ್ವಿಟ್ಟರಲ್ಲಿ ನಮ್ಮನ್ನು ಹಿಂಬಾಲಿಸಿ | ದಟ್ಸ್ ಕನ್ನಡ ಫ್ಯಾನ್ ಕ್ಲಬ್ ಸೇರಿರಿ | ಮೊಬೈಲಲ್ಲಿ ಕನ್ನಡ ಸುದ್ದಿ ಓದಿರಿ | ಹೂವಿನಂಗಡಿ 24/7 | ಕನ್ನಡ ಸುದ್ದಿಗಳ SMS

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X