ಕಾಮುಕ ಶಿಕ್ಷಕನಿಗೆ ಬಾರಿಸಿದ ಜಯ ಕರ್ನಾಟಕ

ವೈಟ್ ಫೀಲ್ಡ್ ನಲ್ಲಿರುವ ಹೋಲಿ ಕ್ರಾಸ್ ಕ್ರಿಶ್ಚಿಯನ್ ಶಾಲೆಯಲ್ಲಿ ಇಂಗ್ಲಿಷ್ ಪಾಠ ಮಾಡುತ್ತಿದ್ದ ಫಿಲಿಪ್ಸ್ ಎಂಬಾತನಿಗೆ ಜಯ ಕರ್ನಾಟಕ ಕಾರ್ಯಕರ್ತರು ಶಾಲೆಗೇ ನುಗ್ಗಿ ಮನಬಂದಂತೆ ಥಳಿಸಿದ್ದಾರೆ. ಈ ಫಿಲಿಪ್ಸ್ ಎಂಬ ಕಾಮುಕ ಶಿಕ್ಷಕ ಶಾಲೆಯ ವೈಸ್ ಪ್ರಿನ್ಸಿಪಾಲ್ ಕೂಡ.
ಹತ್ತನೇ ಕ್ಲಾಸಿನಲ್ಲಿ ಓದುತ್ತಿದ್ದ ವಿದ್ಯಾರ್ಥಿನಿಯರು ಮುಜುಗರವಾಗುವಂತೆ ಬೇಕಂತಲೇ ಲೈಂಗಿಕ ವಿಷಯದ ಬಗ್ಗೆ ಪ್ರಸ್ತಾಪಿಸುವುದು, ಕುಡಿತ ಜೂಜಿನ ಬಗ್ಗೆ ಮಾತನಾಡುವುದು, ಅಶ್ಲೀಲವಾದ ಪದಗಳನ್ನು ಉಚ್ಛರಿಸುವುದನ್ನು ಮಾಡುತ್ತಿದ್ದ. ಇರುವ ಪೋರ್ಷನ್ ಮುಗಿಸದೇ ಸಲ್ಲದ, ಮುಜುಗರವಾಗುವಂಥ ವಿಷಯದ ಬಗ್ಗೆ ಏಕೆ ಮಾತನಾಡುತ್ತೀರಿ ಎಂದು ಕೆಲ ವಿದ್ಯಾರ್ಥಿನಿಯರು ಕೇಳಿದ್ದಕ್ಕೆ, ಬೇಕಿದ್ದರೆ ಹಿಂದಿನ ಬೆಂಚಿಗೆ ಹೋಗಿ ಕೂಡಿ ಎಂದು ದಬಾಯಿಸಿದ್ದಾನೆ. ಹುಡುಗರು ಲೈಂಗಿಕತೆಗೆ ಸಂಬಂಧಿಸಿದಂತೆ ಚಿತ್ರಗಳನ್ನು ಬರೆದಾಗ ಬೇಕಂತಲೇ ಅವರನ್ನು ಬೆಂಬಲಿಸಿದ್ದಾನೆ ಎಂದು ವಿದ್ಯಾರ್ಥಿನಿಯರು ದೂರಿದ್ದಾರೆ.
ಕೆಲ ದಿನಗಳಿಂದ ಅನುಚಿತ ವರ್ತನೆಯನ್ನು ಮುಂದುವರಿಸಿದಾಗ ವಿದ್ಯಾರ್ಥಿನಿಯರು ಪೋಷಕರಿಗೆ ದೂರು ನೀಡಿದ್ದಾರೆ. ಇದು ಜಯ ಕರ್ನಾಟಕ ಸಂಘಟನೆಯ ಕಾರ್ಯಕರ್ತರಿಗೆ ತಿಳಿದು ಕಣ್ಣು, ಕಿವಿ ಕೆಂಪಾಗುವಂತೆ ಬಾರಿಸಿದ್ದಾರೆ.
ಬೆಂಗಳೂರು ಕಾಲೇಜಿನ ಪ್ರಿನ್ಸಿಪಾಲನೊಬ್ಬ ಉಪನ್ಯಾಸಕಿಗೆ ಲೈಂಗಿಕ ಕಿರುಕುಳ ನೀಡಿದ್ದು ಬೆಳಕಿಗೆ ಬಂದ ಬೆನ್ನಲ್ಲೇ ಈ ವೈಸ್ ಪ್ರಿನ್ಸಿಪಾಲ್ ಈ ಹಗರಣ ಮಾಡಿಕೊಂಡಿದ್ದಾನೆ. ವಿದ್ಯಾರ್ಥಿಗಳಿಗೆ, ಇತರ ಕಿರಿಯ ಶಿಕ್ಷಕರಿಗೆ ಮಾದರಿಯಾಗಬೇಕಾದ ಪ್ರಿನ್ಸಿಪಾಲರುಗಳೇ ಹೀಗಾಡಿದರೆ ಹೇಗೆ?
ಇಂಗ್ಲಿಷ್ ಲಿಪಿಯಲ್ಲಿ ಕನ್ನಡ ಎಸ್ಎಮ್ಎಸ್ | ದಟ್ಸ್ ಕನ್ನಡ ಫ್ಯಾನ್ ಕ್ಲಬ್ ಸೇರಿರಿ | ಮೊಬೈಲಲ್ಲಿ ಕನ್ನಡ ಸುದ್ದಿ ಓದಿರಿ | ಹೂವಿನಂಗಡಿ 24/7
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications