ನಾನಾ ಸಂಘಟನೆಗಳಿಂದ ರಾಜ್ಯದ ಎಲ್ಲೆಡೆ ಪ್ರತಿಭಟನೆ

ಆಪರೇಷನ್ ಕಮಲದ ವಿರುದ್ಧ ಕಾಂಗ್ರೆಸ್ ಬೆಂಗಳೂರಿನಲ್ಲಿ ಮಾತ್ರವಲ್ಲ ರಾಜ್ಯಾದ್ಯಂತ ಪ್ರತಿಭಟನೆ ನಡೆಸುತ್ತಿದ್ದಿದ್ದರೆ, ಬೆಳಗಾವಿಯಲ್ಲಿ ಕನ್ನಡ ಧ್ವಜವನ್ನು ಸುಟ್ಟಿದ್ದಕ್ಕೆ ಪ್ರತಿಯಾಗಿ ಬೆಂಗಳೂರಿನಲ್ಲಿ ಕರವೇಯಿಂದ ಪ್ರತಿಭಟನೆ ವ್ಯಕ್ತವಾಯಿತು. ಅನರ್ಹ ಶಾಸಕರ ಪ್ರಕರಣದಲ್ಲಿ ಸರಕಾರದ ಪರ ತೀರ್ಪು ನೀಡಿದ್ದಕ್ಕಾಗಿ ಪ್ರಗತಿಪರ ಸಂಘಟನೆಗಳು ಕರ್ನಾಟಕ ಹೈಕೋರ್ಟಿನ ಮುಖ್ಯ ನ್ಯಾಯಮೂರ್ತಿ ವಿರುದ್ಧ ಪ್ರತಿಭಟನೆ ನಡೆಸಿ ತಮ್ಮ ಆಕ್ರೋಶ ವ್ಯಕ್ತಪಡಿಸಿದವು.
ಕರವೇಯಿಂದ ಡಿಜಿಪಿ ಕಚೇರಿ ಮುತ್ತಿಗೆ : ನಾರಾಯಣ ಗೌಡ ನೇತೃತ್ವದ ಕರ್ನಾಟಕ ರಕ್ಷಣಾ ವೇದಿಕೆ ಬೆಳಗಾವಿಯಲ್ಲಿ ಕನ್ನಡ ಧ್ವಜ ಸುಟ್ಟ ಮಹಾರಾಷ್ಟ್ರ ಏಕೀಕರಣ ಸಮಿತಿ ಪುಂಡರನ್ನು ಕೂಡಲೆ ಬಂಧಿಸಬೇಕೆಂದು ಒತ್ತಾಯಿಸಿ ಡಿಜಿಪಿ ಕಚೇರಿಗೆ ಮುತ್ತಿಗೆ ಹಾಕಿದರು. ಯಡಿಯೂರಪ್ಪ ಸರಕಾರಕ್ಕೆ ಕರ್ನಾಟಕದ ಬಗ್ಗೆ ಕಳಕಳಿಯೇನಾದರೂ ಇದ್ದರೆ ರಾಜಕೀಯ ದೊಂಬರಾಟವನ್ನು ನಿಲ್ಲಿಸಿ ಎಲ್ಲ ಎಂಇಎಸ್ ಮುಖಂಡರನ್ನು ಬಂಧಿಸಬೇಕು ಎಂದು ಆಗ್ರಹಿಸಿದರು.
ಕನ್ನಡ ಧ್ವಜಕ್ಕೆ ಎಂಇಎಸ್ ಬೆಂಕಿ ಹಚ್ಚಿ ಕನ್ನಡಿಗರ ಸ್ವಾಭಿಮಾನಕ್ಕೆ ಬೆಂಕಿ ಹಚ್ಚಿದೆ. ಇಂಥವರನ್ನು ಬಗ್ಗುಬಡಿಯಲೇಬೇಕು. ಸರಕಾರ ಇವರ ವಿರುದ್ಧ ಕೂಡಲೆ ಕ್ರಮ ತೆಗೆದುಕೊಳ್ಳದಿದ್ದರೆ ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಸಿದರು. ನೆಲ, ಜಲ, ಭಾಷೆಯ ಉಳಿವಿಗಾಗಿ ಪುಂಡ ವಿರುದ್ಧ ಕ್ರಮ ಕೈಗೊಳ್ಳಲೇಬೇಕು ಎಂದು ಆಗ್ರಹಿಸಿದರು.
ಬೆಳಗಾವಿಯಲ್ಲಾದ ಘಟನೆಯ ವಿರುದ್ಧ ಚಾಮರಾಜನಗರ, ಮಂಡ್ಯದಲ್ಲಿಯೂ ಕರವೇ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಎಂಇಎಸ್ ಧ್ವಜವನ್ನು ಸುಟ್ಟಹಾಕಿ, ಪುಂಡರ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನ್ಯಾ.ಖೇಹರ್ ವಿರುದ್ಧ ಕೂಗು : ಬೆಂಗಳೂರಿನ ಪ್ರಗತಿಪರ ಸಂಘಟನೆಗಳು ಕರ್ನಾಟಕ ಹೈಕೋರ್ಟ್ ನ ಮುಖ್ಯ ನ್ಯಾಯಮೂರ್ತಿ ಜಗದೀಶ್ ಖೇಹರ್ ವಿರುದ್ಧ ಮತ್ತೆ ಸಿಡಿದೆದ್ದಿವೆ. ಅಗ್ನಿ ಶ್ರೀಧರ್, ಕೋಡಿಹಳ್ಳಿ ಚಂದ್ರಶೇಖರ್, ಇಂದೂಧರ ಹೊನ್ನಾವರ ಮುಂತಾದವರ ನೇತೃತ್ವದಲ್ಲಿ ಕಣ್ಣಿಗೆ ಪಟ್ಟಿ ಕಟ್ಟಿಕೊಂಡ ನೂರಾರು ಚಳವಳಿಗಾರರು, ಖೇಹರ್ ಅವರು ಶಾಸಕರ ಅನರ್ಹತೆ ಕುರಿತ ಪ್ರಕರಣದಲ್ಲಿ ಸರಕಾರದ ಪಕ್ಷಪಾತಿಯಾಗಿ ತೀರ್ಪು ನೀಡಿದ್ದಾರೆ ಎಂದು ಆರೋಪಿಸಿದರು. ಖೇಹರ್ ಅವರು ಸಾರ್ವಜನಿಕವಾಗಿ ಯಡಿಯೂರಪ್ಪನವರಿಗೆ ಹಸ್ತಲಾಘವ ಮಾಡಿದ್ದು ನಾಚಿಕೆಗೇಡಿನ ಸಂಗತಿ ಎಂದು ಅಗ್ನಿ ಶ್ರೀಧರ್ ಹೇಳಿದರು.
ಸುರೇಶ್ ಗೌಡ ಬಂಧನಕ್ಕೆ ಕಾಂಗ್ರೆಸ್ ಆಗ್ರಹ : ಗುಬ್ಬಿ ಶಾಸಕ ಶ್ರೀನಿವಾಸ್ ಗೆ ಹಣದ ಆಮಿಷ ಒಡ್ಡಿ ಬಿಜೆಪಿಗೆ ಸೆಳೆಯಲು ಯತ್ನಿಸಿದ ಸುರೇಶ್ ಗೌಡ ಅವರನ್ನು ಬಂಧಿಸಬೇಕೆಂದು ಆಗ್ರಹಿಸಿ ಕಾಂಗ್ರೆಸ್ ಕಾರ್ಯಕರ್ತರು ಮಹಾತ್ಮ ಗಾಂಧಿ ರಸ್ತೆಯಲ್ಲಿರುವ ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆ ನಡೆಸಿದರು. ಸುರೇಶ್ ಗೌಡ ಅವರ ಮುಖವಾಡ ಮತ್ತು ಹಣದ ಗಂಟನ್ನು ಇಟ್ಟುಕೊಂಡು ಅಣಕು ಪ್ರದರ್ಶನ ಮಾಡಿ ಬಿಜೆಪಿ ವಿರುದ್ಧ ಘೋಷಣೆಗಳನ್ನು ಕೂಗಿದರು.
ಇಂಗ್ಲಿಷ್ ಲಿಪಿಯಲ್ಲಿ ಕನ್ನಡ ಎಸ್ಎಮ್ಎಸ್ | ದಟ್ಸ್ ಕನ್ನಡ ಫ್ಯಾನ್ ಕ್ಲಬ್ ಸೇರಿರಿ | ಮೊಬೈಲಲ್ಲಿ ಕನ್ನಡ ಸುದ್ದಿ ಓದಿರಿ | ಹೂವಿನಂಗಡಿ 24/7
-
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ












Click it and Unblock the Notifications