Get Updates
Get notified of breaking news, exclusive insights, and must-see stories!

ಶಾಲಾ, ಕಾಲೇಜುಗಳಲ್ಲಿ ವಾಲ್ಮೀಕಿ ರಾಮಾಯಣ

Valmiki Ramayana in Schools & Colleges
ಬೆಂಗಳೂರು, ಅ.23: ಕರ್ನಾಟಕದ ವಿದ್ಯಾರ್ಥಿಗಳಿಗೆ ಇನ್ನು ಮುಂದೆ ವಾಲ್ಮೀಕಿ ರಾಮಾಯಣ ಪ್ರತಿಗಳು ಆಯಾ ಶಾಲಾ, ಕಾಲೇಜುಗಳಲ್ಲೇ ಲಭ್ಯವಾಗಲಿವೆ. ರು.5 ಕೋಟಿ ವೆಚ್ಚದಲ್ಲಿ 25,000 ವಾಲ್ಮೀಕಿ ರಾಮಾಯಣ ಪುಸ್ತಕಗಳನ್ನು ಕನ್ನಡದಲ್ಲಿ ಮುದ್ರಿಸಿ ಶಾಲಾ, ಕಾಲೇಜುಗಳಿಗೆ ವಿತರಿಸಲಾಗುವುದು ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಘೋಷಿಸಿದ್ದಾರೆ.

ಇದೇ ಮೊದಲ ಬಾರಿಗೆ ರಾಜ್ಯದಲ್ಲಿ ವಾಲ್ಮೀಕಿ ಜಯಂತಿ ಆಚರಿಸಲಾಗುತ್ತಿದ್ದು ಮುಖ್ಯಮಂತ್ರಿಗಳು ಈ ವಿಶೇಷ ಕೊಡುಗೆಯನ್ನು ನೀಡಿದ್ದಾರೆ. ಈ ಸಂದರ್ಭದಲ್ಲಿ ಅವರು ಮಾತನಾಡುತ್ತಾ, ವಾಲ್ಮೀಕಿ ರಾಮಾಯಣದ ಪ್ರತಿಗಳು ಪ್ರತಿಯೊಂದು ಶಾಲಾ, ಕಾಲೇಜುಗಳಲ್ಲಿ ಇರುವಂತಾಗಬೇಕು ಎಂದರು.

ಶುಕ್ರವಾರ ಅವರು ವಿಧಾನಸೌಧದ ಬ್ಯಾಂಕ್ವೆಟ್ ಸಭಾಂಗಣದಲ್ಲಿ ಸರಕಾರದ ವತಿಯಿಂದ ಆಯೋಜಿಸಿದ್ದ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡುತ್ತಿದ್ದರು. ಬೆಂಗಳೂರಿನಲ್ಲಿ ಸುಮಾರು ರು.5 ಕೋಟಿ ವೆಚ್ಚದಲ್ಲಿ ವಾಲ್ಮೀಕಿ ಭವನ ನಿರ್ಮಿಸಲಾಗುವುದು ಎಂದು ತಿಳಿಸಿದರು.

ಭವನ ನಿರ್ಮಾಣಕ್ಕೆ ಕೂಡಲೆ ಸ್ಥಳ ಗುರುತಿಸಿ, ಶೀಘ್ರದಲ್ಲೆ ಹಣ ಬಿಡುಗಡೆ ಮಾಡುವ ಭರವಸೆ ನೀಡಿದರು. ಮುಂದಿನ ವರ್ಷದ ಹೊತ್ತಿಗೆ ಭವನ ನಿರ್ಮಾಣವಾಗಲಿದ್ದು ಇನ್ನು ಮುಂದೆ ಅಲ್ಲೇ ವಾಲ್ಮೀಕಿ ಜಯಂತಿ ಆಚರಿಸಲಾಗುತ್ತದೆ ಎಂಬ ಆಶಾಭಾವ ವ್ಯಕ್ತಪಡಿಸಿದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+