'ಕೈ' ಎತ್ತಿದ ಮಾಲೀಕಯ್ಯ, ರೇಣುಕಗೆ ಕೊಕ್?

ಅಪರೇಷನ್ ಕಮಲಕ್ಕೆ ಬಲಿಯಾಗುವವರ ಲಿಸ್ಟ್ ನಲ್ಲಿ ಮಾಲೀಕಯ್ಯ ಅವರ ಹೆಸರು ಮುಂಚೂಣಿಯಲ್ಲಿದ್ದು, ತಮಗೆ ಅಬಕಾರಿ ಖಾತೆಯನ್ನೇ ನೀಡಬೇಕು ಎಂದು ಅವರು ಪಟ್ಟು ಹಿಡಿದಿದ್ದಾರೆ. ಮೊದಲಿನಿಂದಲೂ ನಮ್ಮ ಕುಟುಂಬ ಅಬಕಾರಿ ವ್ಯವಹಾರವನ್ನು ಮಾಡಿಕೊಂಡು ಬಂದಿದೆ. ಹೀಗಾಗಿ ಅಬಕಾರಿ ಖಾತೆಯನ್ನೇ ಕೊಟ್ಟರೆ ಸೈ ಎಂದು ಗುತ್ತೇದಾರ್ ಬಿಜೆಪಿ ವರಿಷ್ಠರಿಗೆ ಸಂದೇಶ ರವಾನಿಸಿದ್ದಾರೆ.
ಮೂಲಗಳ ಪ್ರಕಾರ ಫ್ಯಾಕ್ಸ್ ಮೂಲಕ ಮಾಲೀಕಯ್ಯ ಗುತ್ತೇದಾರ್ ಅವರು ತಮ್ಮ ರಾಜೀನಾಮೆ ಪತ್ರವನ್ನು ಸ್ಪೀಕರ್ ಕೆಜಿ ಬೋಪಯ್ಯ ಅವರಿಗೆ ನೀಡಿದ್ದಾರೆ ಎನ್ನಲಾಗಿದೆ. ಶಾಸಕರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವುದಾದರೆ ಖುದ್ದು ಸ್ಪೀಕರ್ ಅವರನ್ನು ಭೇಟಿ ಮಾಡಿ ರಾಜೀನಾಮೆ ಪತ್ರವನ್ನು ನೀಡಬೇಕಾಗಿದ್ದರಿಂದ ಮಾಲೀಕಯ್ಯ ಅವರ ರಾಜೀನಾಮೆ ಪತ್ರವನ್ನು ಸ್ಪೀಕರ್ ಅಂಗೀಕರಿಸಿಲ್ಲ ಎಂದು ಹೇಳಲಾಗಿದೆ. ಮಾಲೀಕಯ್ಯ ಅವರ ಖಾತೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿಗಳು ತೀರ್ಮಾನ ಸ್ಪಷ್ಟಗೊಂಡಿಲ್ಲ.
ರೇಣುಕಗೆ ಕೊಕ್ : ಬಿಜೆಪಿಯ ಬಂಡಾಯದ ಬಿಕ್ಕಟ್ಟಿನ ಸೂತ್ರದಾರ ಅಬಕಾರಿ ಮಂತ್ರಿ ಎಂಪಿ ರೇಣುಕಾಚಾರ್ಯ ಅವರನ್ನು ಸಂಪುಟದಿಂದ ಕೈಬಿಡುವ ಸಾಧ್ಯತೆ ಇದೆ. ಬಿಜೆಪಿಯ ಅನೇಕ ಶಾಸಕರು ಮುಖ್ಯಮಂತ್ರಿ ಯಡಿಯೂರಪ್ಪ, ರಾಜ್ಯಾಧ್ಯಕ್ಷ ಕೆ ಎಸ್ ಈಶ್ವರಪ್ಪ ಅವರ ಮೇಲೆ ಭಾರಿ ಒತ್ತಡ ಹೇರುತ್ತಿದ್ದಾರೆ. ವಿಶೇಷವಾಗಿ ಬೆಂಗಳೂರು ಭಾಗದ ಶಾಸಕರು ರೇಣುಕಾಚಾರ್ಯ ಅವರನ್ನು ಕೈಬಿಡುವಂತೆ ಒತ್ತಾಯಿಸಿದ್ದಾರೆ.
ರೇಣುಕಾಚಾರ್ಯ ಅವರನ್ನು ಸಂಪುಟದಿಂದ ಕೈಬಿಡುವುದಕ್ಕಿಂತ ಕೆಲಸಕ್ಕೆ ಬಾರದ ಖಾತೆ ಕೊಟ್ಟು ಮೂಲೆಗುಂಪು ಮಾಡುವುದು ಮುಖ್ಯಮಂತ್ರಿ ಪ್ಲಾನ್. ಗೂಳಿಹಟ್ಟಿ ಶೇಖರ್ ಹೊಂದಿದ್ದ ಯುವಜನ ಮತ್ತು ಕ್ರೀಡಾ ಖಾತೆಯನ್ನು ನೀಡಬೇಕು ಎನ್ನುವುದು ಯಡಿಯೂರಪ್ಪ ಅವರ ಅಭಿಮತ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications