ಅಜ್ಮೇರ್ ಸ್ಪೋಟದಲ್ಲಿ ಆರ್ ಎಸ್ಎಸ್ ಕೈವಾಡ!

2005 ಅಕ್ಟೋಬರ್ 31ರಂದು ಜೈಪುರದ ಗುಜರಾತಿ ಅತಿಥಿ ಗೃಹದಲ್ಲಿ ನಡೆದ ರಹಸ್ಯ ಸಭೆಯಲ್ಲಿ ಆರ್ಎಸ್ ಎಸ್ ನಾಯಕ ಇಂದ್ರೇಶ್ ಕುಮಾರ್ ಉಪಸ್ಥಿತರಿದ್ದರು. ಆ ಸಭೆಯಲ್ಲಿ ಇತರ ಆರು ಕಾರ್ಯಕರ್ತರೂ ಭಾಗವಹಿಸಿದ್ದರು ಎಂಬ ಮಾಹಿತಿ ಸೇರಿದಂತೆ 806 ಪುಟಗಳ ಆರೋಪ ಪಟ್ಟಿಯನ್ನು ಎಟಿಎಸ್, ಅಜ್ಮೀರ್ ನ್ಯಾಯಾಲಯಕ್ಕೆ ಶುಕ್ರವಾರ ಸಲ್ಲಿಸಿದೆ.
2007ರ ಅಜ್ಮೀರ್ ಸ್ಫೋಟ ಪ್ರಕರಣದಲ್ಲಿ ಇಂದ್ರೇಶ್ ಅವರ ಪಾತ್ರ ಇದೆಯೇ ಎಂಬುದನ್ನು ತಿಳಿಯಲು ಇನ್ನೂ ಹೆಚ್ಚಿನ ತನಿಖೆ ನಡೆಯಬೇಕಿರುವುದರಿಂದ ಆರೋಪ ಪಟ್ಟಿಯಲ್ಲಿ ಅವರನ್ನು ಆರೋಪಿ ಎಂದು ಪರಿಗಣಿಸಿಲ್ಲ ಎಂದು ಎಟಿಎಸ್ ಮೂಲಗಳು ತಿಳಿಸಿವೆ. ಸತ್ಯ ಇನ್ನೂ ಹೊರಬಂದಿಲ್ಲ, ನಂತರ ಆರ್ಎಸ್ಎಸ್ ಅದನ್ನು ಒಪ್ಪಿಕೊಳ್ಳಬೇಕು. ಆರೋಪ ಪಟ್ಟಿಯಲ್ಲಿ ಸೂಚಿಸಿರುವ ನಾಯಕನ ಹಿನ್ನೆಲೆ ಸದ್ಯದಲ್ಲೇ ತಿಳಿಯಲಿದೆ. ನ್ಯಾಯಾಂಗದ ಬಗ್ಗೆ ವಿಶ್ವಾಸವಿರಬೇಕು. ಸತ್ಯ ಬಹಿರಂಗವಾಗುವುದು, ಅಪರಾಧಿಗಳಿಗೆ ತಕ್ಕ ಶಿಕ್ಷೆಯಾಗು ವುದು ಎಂದು ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ತಿಳಿಸಿದ್ದಾರೆ.
ಆರೋಪ ಪಟ್ಟಿಯಲ್ಲಿ ಇರುವ ಐವರು ಆರೋಪಿಗಳ ಹೆಸರಿನ ಜತೆ ಅಭಿನವ್ ಭಾರತ್ ಎಂಬ ಹಿಂದೂ ಸಂಘಟನೆಯೊಡನೆ ನಿಕಟ ಸಂಬಂಧ ಹೊಂದಿದ್ದಾರೆ ಎನ್ನಲಾದ ದೇವಂದ್ರ ಗುಪ್ತಾ ಅವರ ಹೆಸರೂ ಇದೆ. ಆರೋಪಿಗಳ ವಿರುದ್ಧ ಕೊಲೆ ಹಾಗೂ ಧಾರ್ಮಿಕ ಸ್ಥಳ ನಾಶ ಪಡಿಸಿರುವ ಆರೋಪ ಮಾಡಲಾಗಿದೆ. ಪ್ರಕರಣದ ಇತರ ಆರೋಪಿಗಳಾದ ಸಂದೀಪ್ ದಂಗೆ ಹಾಗೂ ರಾಮಜೀ ಕಲ್ಸಂಗ್ರೆ ತಲೆ ಮರೆಸಿಕೊಂಡಿದ್ದು, ಮತ್ತೊಬ್ಬ ಆರೋಪಿ ಸುನೀಲ್ ಜೋಶಿ ವಿಚಾರಣೆ ವೇಳೆ ಮೃತಪಟ್ಟಿದ್ದರು.
-
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ












Click it and Unblock the Notifications