ಮಾಹಿತಿ ಹಕ್ಕು: ನ.1ರಿಂದ ಪ್ರತ್ಯೇಕ ಕಾಲ್ ಸೆಂಟರ್

ಮಾಹಿತಿ ತಂತ್ರಜ್ಞಾನದಲ್ಲಿ ಇಡೀ ವಿಶ್ವದ ಗಮನ ಸೆಳೆದಿರುವ ರಾಜ್ಯ ಸರ್ಕಾರ, ಇ-ಆಡಳಿತದಲ್ಲಿ ಅನೇಕ ಅವಿಷ್ಕಾರಗಳನ್ನು ರಾಜ್ಯ ಸರ್ಕಾರ ಮಾಡಿದೆ. ಇ-ಆಡಳಿತ ಇಲಾಖೆ ಮಾಹಿತಿ ಹಕ್ಕು ಯೋಜನೆಗಾಗಿಯೇ ಪ್ರತ್ಯೇಕ ಕರೆ ಕೇಂದ್ರವೊಂದನ್ನು ಇಡೀ ರಾಜ್ಯಕ್ಕೆ ಅನ್ವಯವಾಗುವ ರೀತಿಯಲ್ಲಿ ಜಾರಿಗೆ ತರುತ್ತಿದೆ. ಮಾಹಿತಿ ಹಕ್ಕು ಯೋಜನೆಯನ್ನು ಇಡೀ ದೇಶದಲ್ಲಿಯೇ ಮೊಟ್ಟ ಮೊದಲ ಬಾರಿಗೆ ಯಶಸ್ವಿಯಾಗಿ ಅನುಷ್ಠಾನ ಮಾಡಿದ ಕೀರ್ತಿಯೂ ರಾಜ್ಯ ಸರ್ಕಾರಕ್ಕೆ ಸಲುತ್ತಿದೆ.
ಬೆಂಗಳೂರು ಅನೇಕ ವಿದೇಶಿ ಕಂಪೆನಿಗಳ ಕರೆ ಕೇಂದ್ರಗಳನ್ನು ಹೊಂದಿದೆ. ಇದಲ್ಲದೇ ರಾಜ್ಯ ಸರ್ಕಾರದ ಮಾಹಿತಿ ಮತ್ತು ಜೈವಿಕ ತಂತ್ರಜ್ಞಾನ ಇಲಾಖೆ ಗ್ರಾಮೀಣ ಪ್ರದೇಶದ ಜನರ ಅನುಕೂಲಕ್ಕಾಗಿಯೇ ಗ್ರಾಮೀಣ ಬಿಪಿಒ ಗಳನ್ನು ಸಹ ಆರಂಭಿಸಿದೆ. ಆದರೆ ಮಾಹಿತಿ ಹಕ್ಕಿಗಾಗಿಯೇ ಪ್ರತ್ಯೇಕವಾದ ಕಾಲ್ ಸೆಂಟರ್ವೊಂದು ಆರಂಭವಾಗುತ್ತಿರುವುದು ಇಡೀ ದೇಶದಲ್ಲಿಯೇ ಪ್ರಥಮ ಎಂದು ಇ-ಆಡಳಿತ ಇಲಾಖೆಯ ಪ್ರಧಾನ ಕಾರ್ಯದರ್ಶಿ ಎಂ.ಎನ್. ವಿದ್ಯಾಶಂಕರ್ ಹೇಳಿದರು.
ಕಾರ್ಯ ನಿರ್ವಹಣೆ ಹೇಗೆ ?: ಇಡೀ ರಾಜ್ಯಕ್ಕೆ ಅನ್ವಯವಾಗುವಂತೆ ಒಂದೇ ಸಂಖ್ಯೆಯ ದೂರವಾಣಿಯನ್ನು ನೀಡಲಾಗುತ್ತದೆ. ಈಗ ಆರೋಗ್ಯ ಕವಚ, ಪೊಲೀಸ್, ಅಗ್ನಿಶಾಮಕಕ್ಕೆ ಪ್ರತ್ಯೇಕ ದೂರವಾಣಿ ಸಂಖ್ಯೆ ಇರುವಂತೆ ಈ ಕರೆ ಕೇಂದ್ರಕ್ಕೂ ಇರುತ್ತದೆ.
ರಾಜ್ಯದ ಯಾವುದೇ ಭಾಗದಿಂದ ಯಾವುದೇ ವಿಷಯಕ್ಕೆ ಸಂಬಂಸಿದಂತೆ ಯಾವ ಕಚೇರಿಯನ್ನು ಸಂಪರ್ಕಿಸಬೇಕು ಎಂಬ ಮಾಹಿತಿಯನ್ನು ಕೋರಿ ದೂರವಾಣಿ ಮಾಡಿದರೆ ಕ್ಷಣ ಮಾತ್ರದಲ್ಲಿ ಮನೆಗೆ ಕರೆ ಮಾಡಿ ಇಂತಹ ಇಲಾಖೆಯನ್ನು ಸಂಪರ್ಕಿಸಬಹುದು ಎಂಬ ಮಾಹಿತಿ ಬರುತ್ತದೆ. ಇದರಿಂದ ಯಾವುದೇ ಮಾಹಿತಿ ಪಡೆಯಲಿಚ್ಛಿಸುವವರು ಇಲಾಖೆಯಿಂದ ಇಲಾಖೆಗೆ ಅಲೆದಾಡುವುದು ತಪ್ಪುತ್ತದೆ. ಆ ಪ್ರಕಾರ ಇಲಾಖೆಯನ್ನು ಸಂಪರ್ಕಿಸಿ ಅರ್ಜಿ ಸಲ್ಲಿಸಿ ಮಾಹಿತಿ ಪಡೆಯಬಹುದಾಗಿದೆ.
ಮಾಹಿತಿ ಹಕ್ಕಿಗೆ ಸಂಬಂಧಿಸಿದ ಯಾವುದೇ ಸಮಸ್ಯೆಗಳಿದ್ದರೂ ಈ ಕರೆ ಕೇಂದ್ರದ ಮೂಲಕ ಪರಿಹಾರ ಕಂಡುಕೊಳ್ಳಬಹುದಾಗಿದೆ. ದಿನದ 24 ಗಂಟೆಗಳ ಕಾಲ ಈ ಕರೆ ಕೇಂದ್ರ ಕಾರ್ಯ ನಿರ್ವಹಣೆ ಮಾಡುತ್ತದೆ. ನವೆಂಬರ್ ಒಂದರಂದು ಇದರ ಉದ್ಘಾಟನೆಯ ಜತೆಗೆ ದೂರವಾಣಿ ಸಂಖ್ಯೆಯನ್ನು ರಾಜ್ಯದ ಜನತೆಗೆ ನೀಡಲಾಗುತ್ತದೆ. ಅಂದಿನಿಂದಲೇ ಈ ಕೇಂದ್ರ ಕಾರ್ಯ ಆರಂಭಿಸಲಿದೆ ಎಂದು ಎಂ.ಎನ್. ವಿದ್ಯಾಶಂಕರ್ ಹೇಳಿದರು..
ಈಗಾಗಲೇ ಕರೆ ಕೇಂದ್ರ ಸ್ಥಾಪನೆಗೆ ಸಂಬಂಧಿಸಿದಂತೆ ಗುತ್ತಿಗೆ ಕರೆದು ಎಲ್ಲಾ ಸಿದ್ಧ ತೆ ಮಾಡಿಕೊಳ್ಳಲಾಗಿದೆ. ನವೆಂಬರ್ ಒಂದರಂದು ಇದರ ಉದ್ಘಾಟನೆಯ ಜತೆಗೆ ದೂರವಾಣಿ ಸಂಖ್ಯೆಯನ್ನು ರಾಜ್ಯದ ಜನತೆಗೆ ನೀಡಲಾಗುತ್ತದೆ. ಅಂದಿನಿಂದಲೇ ಈ ಕೇಂದ್ರ ಕಾರ್ಯ ಆರಂಭಿಸಲಿದೆ. ಎಲ್ಲಾ ಮಾಹಿತಿಯೂ ಕರೆ ಕೇಂದ್ರದಲ್ಲಿರುತ್ತದೆ ಎಂದು ತಿಳಿಸಿದರು.
ವಿಡಿಯೋಗಳು:.ಖೆಡ್ಡಾಕ್ಕೆ ಬಿದ್ದ ಬಿಜೆಪಿ ಶಾಸಕ ಸುರೇಶ್ ಗೌಡ |ಶಾಸಕನಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡು | ರಿಂಗ ರಿಂಗಾ ಪಾಲಿಟಿಕ್ಸ್ ರಿಮಿಕ್ಸ್ |
ಟ್ವಿಟ್ಟರಲ್ಲಿ ನಮ್ಮನ್ನು ಹಿಂಬಾಲಿಸಿ | ದಟ್ಸ್ ಕನ್ನಡ ಫ್ಯಾನ್ ಕ್ಲಬ್ ಸೇರಿರಿ | ಮೊಬೈಲಲ್ಲಿ ಕನ್ನಡ ಸುದ್ದಿ ಓದಿರಿ | ಹೂವಿನಂಗಡಿ 24/7 | ಕನ್ನಡ ಸುದ್ದಿಗಳ SMS
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ












Click it and Unblock the Notifications