ಮನೆಗೆ ವಾಪಾಸ್ಸಾದ ರಿಯಲ್ ಎಸ್ಟೇಟ್ ಉದ್ಯಮಿ

ಜೆ.ಪಿ ನಗರದ ಡಾಲರ್ಸ್ ಕಾಲೋನಿ ನಿವಾಸಿ ಸತೀಶ್ಚಂದ್ರ (40) ಅಪಹರಣಕ್ಕಿದ್ದರು. ಸೋಮವಾರ ಮುಂಜಾನೆ 5.30ರ ಸುಮಾರಿಗೆ ನಾಯಿಯನ್ನು ಹೊರಗೆ ಕರೆದುಕೊಂಡು ಮಾರ್ನಿಂಗ್ ವಾಕ್ ಹೋಗಿದ್ದ ಸತೀಶ್ ಅವರು ಆನಂತರ ನಾಪತ್ತೆಯಾಗಿದ್ದರು. ವಾಕಿಂಗ್ ಹೋಗುವ ವೇಳೆ ಮಾರುತಿ ವ್ಯಾನ್ನಲ್ಲಿ ಬಂದಿರುವ ಆರು ಮಂದಿ ಮನೆಯಲ್ಲಿದ್ದ ನಗದು ಚಿನ್ನಾಭರಣವನ್ನು ಎರಡು ಸೂಟ್ಕೇಸ್ನಲ್ಲಿ ದೋಚಿಕೊಂಡು, ಮನೆ ಮಾಲಿಕನನ್ನು ಅಪಹರಿಸಿಕೊಂಡು ಪರಾರಿಯಾಗಿದ್ದರು. ಪೊಲೀಸರಿಗೆ ವಿಷಯ ತಿಳಿಸಿದರೆ ಕೊಲ್ಲುವುದಾಗಿ ಗನ್ ತೋರಿಸಿ ಬೆದರಿಕೆ ಹಾಕಿ ಕರೆದುಕೊಂಡು ಹೋಗಿದ್ದ ದುಷ್ಕರ್ಮಿಗಳು, ತಮಿಳುನಾಡಿನ ಕೃಷ್ಣಗಿರಿ ಸಮೀಪ ಬಿಟ್ಟು ಪರಾರಿಯಾಗಿದ್ದರು.
ಕೂಡಲೇ ಸತೀಶ್ ಚಂದ್ರ ಮನೆಗೆ ಕರೆ ಮಾಡಿ ನಡೆದ ಘಟನೆಯನ್ನು ಪತ್ನಿ ಆಶಾ ಅವರಿಗೆ ತಿಳಿಸಿ, ಹೊಸೂರಿಗೆ ವಾಪಸು ಆಗಿದ್ದಾರೆ. ಹೊಸೂರಿನಿಂದ ಪೊಲೀಸರು ಉದ್ಯಮಿಯನ್ನು ಜೆಪಿನಗರದ ಅವರ ನಿವಾಸಕ್ಕೆ ಕರೆತಂದಿದ್ದಾರೆ.
ಸಚಿವರ ಆಪ್ತ ಉದ್ಯಮಿ: ಈ ಮೊದಲು ಗಾರ್ಮೆಂಟ್ ಉದ್ಯಮ ನಡೆಸುತ್ತಿದ್ದ ಸತೀಶ್ಚಂದ್ರ ಕೇಂದ್ರ ಸಚಿವರೊಬ್ಬರ ಆಪ್ತರಾಗಿದ್ದಾರೆ. ಗಾರ್ಮೆಂಟ್ ಉದ್ಯಮ ಬಿಟ್ಟು ಇತ್ತೀಚೆಗೆ ರಿಯಲ್ ಎಸ್ಟೇಟ್ ವ್ಯವಹಾರ ನಡೆಸುತ್ತಿದ್ದರು.
ಸ್ಥಳಕ್ಕೆ ಭೇಟಿ ನೀಡಿದ ಡಿಸಿಪಿ ಸಿದ್ದರಾಮಪ್ಪ , ಎಸಿಪಿ ರಮೇಶ್ ಚಂದ್ರ ಹಾಗೂ ಇನ್ಸ್ಪೆಕ್ಟರ್ ಉಮೇಶ್, ನಾಲ್ಕು ತಂಡಗಳನ್ನು ರಚಿಸಿ ಆರೋಪಿಗಳ ಬಂಧನಕ್ಕೆ ಬಲೆ ಬೀಸಿದ್ದರು. ಅಪಹರಿಸಿಕೊಂಡ ಹೋದ 10 ತಾಸಿನಲ್ಲಿಯೇ ಆತನನ್ನು ಬಿಡುಗಡೆ ಮಾಡಿದ್ದಾರೆ.
ವಿಡಿಯೋಗಳು:.ದೇವೇಗೌಡ ಆಧುನಿಕ ಭಸ್ಮಾಸುರ: ಬಚ್ಚೇಗೌಡ | ಖೆಡ್ಡಾಕ್ಕೆ ಬಿದ್ದ ಬಿಜೆಪಿ ಶಾಸಕ ಸುರೇಶ್ ಗೌಡ |ಶಾಸಕನಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡು |
ರಿಂಗ ರಿಂಗಾ ಪಾಲಿಟಿಕ್ಸ್ ರಿಮಿಕ್ಸ್ | ಟ್ವಿಟ್ಟರಲ್ಲಿ ಹಿಂಬಾಲಿಸಿ | ಫ್ಯಾನ್ ಕ್ಲಬ್ ಸೇರಿರಿ | ಮೊಬೈಲಲ್ಲಿ ಸುದ್ದಿ | ಹೂವಿನಂಗಡಿ 24/7 | ಕನ್ನಡ ಸುದ್ದಿಗಳ SMS
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications