ದೇಶದ್ರೋಹ ಭಾಷಣ ವಿವಾದ ಆರುಂಧತಿ ಪ್ರತಿಕ್ರಿಯೆ

ನಕ್ಸಲ್ ಬೆಂಬಲಿತ ಸಾಹಿತಿ ಅರುಂಧತಿ ರಾಯ್ ಕಾಶ್ಮೀರದಲ್ಲಿ ಪ್ರತ್ಯೇಕತಾವಾದವನ್ನು ಬೆಂಬಲಿಸುವ ಮಾತುಗಳನ್ನು ಆಡಿದ್ದಲ್ಲದೆ, ಇದಕ್ಕೆ ಕೇಂದ್ರ ಸರ್ಕಾರದ ಬೆಂಬಲವಿದೆ ಎಂದಿದ್ದರು. ಕೊಯಿಲೀಶನ್ ಆಫ್ ಸಿವಿಲ್ ಸೊಸೈಟೀಸ್ (ಸಿಸಿಎಸ್) ಶ್ರೀನಗರದಲ್ಲಿ ಆಯೋಜಿಸಿದ 'Whither Kashmir? Freedom or Enslavement' ವಿಚಾರಸಂಕಿರಣದಲ್ಲಿ, 'ಕಾಶ್ಮೀರ ಎಂದೂ ಭಾರತದ ಭಾಗವಾಗಿ ಇರಲೇ ಇಲ್ಲ' ಎಂದು ಅರುಂಧತಿ ವಾದಿಸಿದ್ದರು.
ಅನೇಕ ನಕ್ಸಲ್-ವಾಮಪಂಥೀಯ ಬುದ್ಧಿಜೀವಿಗಳು ಜೆಹಾದಿ ಭಯೋತ್ಪಾದನೆಗೆ ಬೆಂಬಲ ವ್ಯಕ್ತಪಡಿಸಿರುವ ಬಗ್ಗೆ ಮಾಹಿತಿ ಸಿಕ್ಕಿರುವ ಸಮಯದಲ್ಲಿ ವಿವಾದಿತ ಲೇಖಕಿಯ ಈ ಮಾತುಗಳಿಗೆ ರಾಜಕೀಯ ವಲಯದಲ್ಲಿ ತೀವ್ರ ಆಕ್ಷೇಪ ವ್ಯಕ್ತವಾಗಿದೆ. ಅರುಂಧತಿ ಹೇಳಿಕೆಗಳು ದುರದೃಷ್ಟಕರ, ವಾಕ್ ಸ್ವಾತಂತ್ರ್ಯದ ಹರಣ ಎಂದು ಕೇಂದ್ರ ಕಾನೂನು ಸಚಿವ ಎಂ ವೀರಪ್ಪ ಮೋಯ್ಲಿ ಪ್ರತಿಕ್ರಿಯಿಸಿದ್ದಾರೆ. ಬೂಕರ್ ಪ್ರಶಸ್ತಿ ವಿಜೇತ ಲೇಖಕಿಯ ಭಾಷಣದ ಪ್ರತಿಯನ್ನು ಹಿಡಿದು ಪೊಲೀಸರು ತನಿಖೆ ನಡೆಸಿದ್ದಾರೆ. ಆದರೆ ಕಾನೂನು ತಜ್ಞರೊಡನೆ ಸಮಾಲೋಚನೆ ನಡೆಸಿರುವ ಪೊಲೀಸರು ಇನ್ನೂ ಕೇಸ್ ದಾಖಲಿಸಿಲ್ಲ.
ದೇಶಾದ್ಯಂತ ಪ್ರತ್ಯೇಕತಾವಾದಿ ಹೋರಾಟಗಳಲ್ಲಿ ತಾನು ಪಾಲ್ಗೊಂಡಿರುವುದಕ್ಕೆ ಸ್ವಯಂ ಹೆಮ್ಮೆಪಟ್ಟುಕೊಂಡ ರಾಯ್, ಕಾಶ್ಮೀರದಲ್ಲಿ ಪಂಡಿತರು, ಮಹಿಳೆಯರು, ಅಮಾಯಕರ ಮೇಲೆ ಪೊಲೀಸರು ನಡೆಸಿರುವ ದೌರ್ಜನ್ಯವನ್ನು ಮೊದಲು ಹತ್ತಿಕ್ಕುವಂತೆ ಸರ್ಕಾರಕ್ಕೆ ಆಗ್ರಹಿಸಿದರು. ಮಾವೋವಾದಿ ನಾಯಕ ವರವರರಾವ್, ಹುರಿಯತ್ ಸಂಘಟನೆ ಮುಖಂಡ ಸೈಯದ್ ಗಿಲಾನಿ ಸೇರಿದಂತೆ ಅನೇಕ ಮುಖಂಡರು ಕಾಶ್ಮೀರ ಸ್ವಾತಂತ್ರ್ಯ ವಿಚಾರ ಸಂಕಿರಣದಲ್ಲಿ ಪಾಲ್ಗೊಂಡಿದ್ದರು.
-
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ -
Kannada: ಕರ್ನಾಟಕದಲ್ಲಿರುವ ಬ್ಯಾಂಕ್ಗಳಲ್ಲಿ ಸ್ಪಷ್ಟ ಕನ್ನಡ; ತುಳು, ಕೊಂಕಣಿ ಭಾಷೆಯ ಕಲರವ ಈಗ ಉಳಿದಿಲ್ಲ: ಕವಿರಾಜ್












Click it and Unblock the Notifications