ದೇಶದ್ರೋಹ ಭಾಷಣ ವಿವಾದ ಆರುಂಧತಿ ಪ್ರತಿಕ್ರಿಯೆ

ನಕ್ಸಲ್ ಬೆಂಬಲಿತ ಸಾಹಿತಿ ಅರುಂಧತಿ ರಾಯ್ ಕಾಶ್ಮೀರದಲ್ಲಿ ಪ್ರತ್ಯೇಕತಾವಾದವನ್ನು ಬೆಂಬಲಿಸುವ ಮಾತುಗಳನ್ನು ಆಡಿದ್ದಲ್ಲದೆ, ಇದಕ್ಕೆ ಕೇಂದ್ರ ಸರ್ಕಾರದ ಬೆಂಬಲವಿದೆ ಎಂದಿದ್ದರು. ಕೊಯಿಲೀಶನ್ ಆಫ್ ಸಿವಿಲ್ ಸೊಸೈಟೀಸ್ (ಸಿಸಿಎಸ್) ಶ್ರೀನಗರದಲ್ಲಿ ಆಯೋಜಿಸಿದ 'Whither Kashmir? Freedom or Enslavement' ವಿಚಾರಸಂಕಿರಣದಲ್ಲಿ, 'ಕಾಶ್ಮೀರ ಎಂದೂ ಭಾರತದ ಭಾಗವಾಗಿ ಇರಲೇ ಇಲ್ಲ' ಎಂದು ಅರುಂಧತಿ ವಾದಿಸಿದ್ದರು.
ಅನೇಕ ನಕ್ಸಲ್-ವಾಮಪಂಥೀಯ ಬುದ್ಧಿಜೀವಿಗಳು ಜೆಹಾದಿ ಭಯೋತ್ಪಾದನೆಗೆ ಬೆಂಬಲ ವ್ಯಕ್ತಪಡಿಸಿರುವ ಬಗ್ಗೆ ಮಾಹಿತಿ ಸಿಕ್ಕಿರುವ ಸಮಯದಲ್ಲಿ ವಿವಾದಿತ ಲೇಖಕಿಯ ಈ ಮಾತುಗಳಿಗೆ ರಾಜಕೀಯ ವಲಯದಲ್ಲಿ ತೀವ್ರ ಆಕ್ಷೇಪ ವ್ಯಕ್ತವಾಗಿದೆ. ಅರುಂಧತಿ ಹೇಳಿಕೆಗಳು ದುರದೃಷ್ಟಕರ, ವಾಕ್ ಸ್ವಾತಂತ್ರ್ಯದ ಹರಣ ಎಂದು ಕೇಂದ್ರ ಕಾನೂನು ಸಚಿವ ಎಂ ವೀರಪ್ಪ ಮೋಯ್ಲಿ ಪ್ರತಿಕ್ರಿಯಿಸಿದ್ದಾರೆ. ಬೂಕರ್ ಪ್ರಶಸ್ತಿ ವಿಜೇತ ಲೇಖಕಿಯ ಭಾಷಣದ ಪ್ರತಿಯನ್ನು ಹಿಡಿದು ಪೊಲೀಸರು ತನಿಖೆ ನಡೆಸಿದ್ದಾರೆ. ಆದರೆ ಕಾನೂನು ತಜ್ಞರೊಡನೆ ಸಮಾಲೋಚನೆ ನಡೆಸಿರುವ ಪೊಲೀಸರು ಇನ್ನೂ ಕೇಸ್ ದಾಖಲಿಸಿಲ್ಲ.
ದೇಶಾದ್ಯಂತ ಪ್ರತ್ಯೇಕತಾವಾದಿ ಹೋರಾಟಗಳಲ್ಲಿ ತಾನು ಪಾಲ್ಗೊಂಡಿರುವುದಕ್ಕೆ ಸ್ವಯಂ ಹೆಮ್ಮೆಪಟ್ಟುಕೊಂಡ ರಾಯ್, ಕಾಶ್ಮೀರದಲ್ಲಿ ಪಂಡಿತರು, ಮಹಿಳೆಯರು, ಅಮಾಯಕರ ಮೇಲೆ ಪೊಲೀಸರು ನಡೆಸಿರುವ ದೌರ್ಜನ್ಯವನ್ನು ಮೊದಲು ಹತ್ತಿಕ್ಕುವಂತೆ ಸರ್ಕಾರಕ್ಕೆ ಆಗ್ರಹಿಸಿದರು. ಮಾವೋವಾದಿ ನಾಯಕ ವರವರರಾವ್, ಹುರಿಯತ್ ಸಂಘಟನೆ ಮುಖಂಡ ಸೈಯದ್ ಗಿಲಾನಿ ಸೇರಿದಂತೆ ಅನೇಕ ಮುಖಂಡರು ಕಾಶ್ಮೀರ ಸ್ವಾತಂತ್ರ್ಯ ವಿಚಾರ ಸಂಕಿರಣದಲ್ಲಿ ಪಾಲ್ಗೊಂಡಿದ್ದರು.
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications