ಪಾಕಿ ಕ್ರಿಕೆಟಿಗರ ಸ್ಪಾಟ್ ಫಿಕ್ಸಿಂಗ್ ಐಸಿಸಿ ಶಂಕೆ : ಜಿಯಾ

ಈ ಮೂಲಕ ಸ್ಪಾಟ್ ಫಿಕ್ಸಿಂಗ್ ಗೆ ವಿವಾದದ ಬೆಂಕಿಗೆ ತುಪ್ಪ ಸುರಿದಂತಾಗಿದೆ. ವರ್ಷದ ಆರಂಭದಲ್ಲಿ ನಡೆದ ಸಿಡ್ನಿ ಟೆಸ್ ನಲ್ಲಿ ಆರು ಆಟಗಾರರು ಕಳ್ಳಾಟದಲ್ಲಿ ಪಾಲ್ಗೊಂಡಿದ್ದಾರೆ ಎಂದು ಶಂಕೆ ಹೊಂದಿರುವ ಐಸಿಸಿ ಅವರ ಚಲನವಲನವನ್ನು ಸೂಕ್ಷ್ಮವಾಗಿ ಗಮನಿಸುತ್ತಿದೆ. ಈ ಬಗ್ಗೆ ಪಿಸಿಬಿಗೆ ಐಸಿಸಿ ಸೂಚನೆ ನೀಡಿದೆ ಎಂದು ನಿವೃತ್ತ ಲೆಫ್ಟಿನೆಂಟ್ ಜನರಲ್ ಜಿಯಾ ತಿಳಿಸಿದ್ದಾರೆ.
ಭಾನುವಾರ ರಾತ್ರಿ ಸ್ಥಳೀಯ ಟಿವಿ ಚಾನೆಲ್ ಗೆ ನೀಡಿದ ಸಂದರ್ಶನದಲ್ಲಿ ಈ ವಿಷಯ ತಿಳಿಸಿರುವ ಜಿಯಾ, ಈ 6 ಆಟಗಾರರು ಶಂಕಿತ ಬುಕ್ಕಿಗಳೊಂದಿಗೆ ಎಸ್ಎಂಎಸ್ ಸಂದೇಶ ವಿನಿಮಯ ಮಾಡಿಕೊಂಡಿರುವುದು ಐಸಿಸಿಗೆ ತಿಳಿದಿದೆ. ಈ ಬಗ್ಗೆ ಗಮನ ಹರಿಸಲು ಪಿಸಿಬಿಗೆ ಸೂಚನೆ ನೀಡಿರುವುದು ನನ್ನ ಗಮನಕ್ಕೆ ಬಂದಿದೆ ಎಂದಿದ್ದಾರೆ.
ಆಸ್ಟ್ರೇಲಿಯಾ ಪ್ರವಾಸದ ನಂತರ ಆಟಗಾರರು ವಿಶ್ವಕಪ್ ಟಿ-20 ಮತ್ತು ಏಷ್ಯಾಕಪ್ ಗಾಗಿ ಪ್ರಯಾಣ ಬೆಳೆಸಿದಾಗ ಐಸಿಸಿ ಈ ಸೂಚನೆ ನೀಡಿತ್ತು. ಆದರೆ ಈ ಬಗ್ಗೆ ಪಿಸಿಬಿ ಯಾವ ಕ್ರಮ ಕೈಗೊಂಡಿತು ಎಂಬ ಮಾಹಿತಿ ತಿಳಿದಿಲ್ಲ ಎಂದು ಜಿಯಾ ವಿವರಿಸಿದರು. ಏತನ್ಮಧ್ಯೆ 2002ರಲ್ಲಿ ಶಂಕಿತ ಬುಕ್ಕಿಯೊಬ್ಬ ತಮ್ಮನ್ನು ಸಂಪರ್ಕಿಸಿ, ರಾಷ್ಟ್ರೀಯ ತಂಡದಲ್ಲಿ ಸ್ಥಾನ ನೀಡಬೇಕು ಎಂದು ಆಟಗಾರನೊಬ್ಬನ ಪರ ವಕಾಲತ್ತು ವಹಿಸಿದ್ದ ಎಂಬ ಮತ್ತೊಂದು ಸತ್ಯವನ್ನು ಜಿಯಾ ಹೊರಹಾಕಿದ್ದಾರೆ.
ಶಂಕಿತ ಬುಕ್ಕಿಗಳು ನನಗೆ ದೂರವಾಣಿ ಕರೆ ಮಾಡಿ ನಿರ್ದಿಷ್ಟ ಆಟಗಾರನಿಗೆ ತಂಡದಲ್ಲಿ ಸ್ಥಾನ ನೀಡುವಂತೆ ಒತ್ತಡ ಹೇರಿದರು. ಆದರೆ ನಾನು ಅದಕ್ಕೆ ಕಿವಿಗೊಡಲಿಲ್ಲ ಎಂದು ಜಿಯಾ ವಿವರಿಸಿದರು. ಜಿಯಾ ಆ ಆಟಗಾರನ ಹೆಸರು ಬಹಿರಂಗ ಪಡಿಸಲು ನಿರಾಕರಿಸಿದರೂ ಪಾಕಿಸ್ತಾನ ತಂಡದ ಮಾಜಿ ನಾಯಕ ಸಲಿಂ ಮಲಿಕ್ ಅವರತ್ತ ಬೆರಳು ಹೋಗುತ್ತದೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications