ಐವರಿಗೆ ಇನ್ಫೋಸಿಸ್ ವಿಜ್ಞಾನ ಪ್ರಶಸ್ತಿ

ಪ್ರಶಸ್ತಿಯು ತಲಾ 50 ಲಕ್ಷ ರೂ. ನಗದು, ಸ್ವರ್ಣ ಪದಕ, ಪ್ರಶಸ್ತಿ ಪತ್ರವನ್ನು ಒಳಗೊಂಡಿದೆ. ಮುಂಬೈನಲ್ಲಿ ಜನವರಿ 6ರಂದು ನಡೆಯಲಿರುವ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪ್ರಧಾನಿ ಮನಮೋಹನ್ ಸಿಂಗ್ ಅವರು ವಿಜ್ಞಾನಿಗಳಿಗೆ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ ಎಂದು ನಾರಾಯಣಮೂರ್ತಿ ತಿಳಿಸಿದರು.
ಪ್ರಶಸ್ತಿ ವಿಜೇತರ ವಿವರ ಇಂತಿದೆ
ಸಂದೀಪ್ ತ್ರಿವೇದಿ : ಭೌತ ವಿಜ್ಞಾನ ಕ್ಷೇತ್ರದಲ್ಲಿ ಸಲ್ಲಿಸಿದ ಸೇವೆಯನ್ನು ಪರಿಗಣಿಸಿ ಸಂದೀಪ್ ತ್ರಿವೇದಿಯವರಿಗೆ ಇನ್ಫೋಸಿಸ್ ಪ್ರಶಸ್ತಿ ನೀಡಲಾಗಿದೆ. 1985ರಲ್ಲಿ ಕಾನ್ಪುರದ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ ಭೌತಶಾಸ್ತ್ರದಲ್ಲಿ ಪಿಎಚ್ಡಿ ಪದವಿ ಪಡೆದ ಪ್ರೊ. ಸಂದೀಪ್ ತ್ರಿವೇದಿ ಅವರಿಗೆ ಶಾಂತಿ ಸ್ವರೂಪ್ ಭಟ್ನಾಗರ್ ಪ್ರಶಸ್ತಿ ಸೇರಿದಂತೆ ಹಲವಾರು ಪುರಸ್ಕಾರಗಳು ಸಂದಿವೆ.
ಆಶುತೋಷ್ ಶರ್ಮಾ : ಎಂಜಿನಿಯರಿಂಗ್ ಮತ್ತು ಕಂಪ್ಯೂಟರ್ ವಿಜ್ಞಾನ ವಲಯದಲ್ಲಿ ನಡೆಸಿದ ಸಂಶೋಧನೆಯನ್ನು ಗೌರವಿಸಿ ಆಶುತೋಷ್ ಶರ್ಮಾ ಅವರಿಗೆ ಇನ್ಫೋಸಿಸ್ ಪ್ರಶಸ್ತಿ ನೀಡಿದೆ. ಇಂಧನ ದಾಸ್ತಾನು, ಮೈಕ್ರೋ ಎಲೆಕ್ಟ್ರೊ ಮೆಕಾನಿಕಲ್ ಸಿಸ್ಟಮ್ಸ್ ಮುಂತಾದ ನಾನಾ ವಲಯಗಳಲ್ಲಿ ಅವರು ಶ್ರಮಿಸಿದ್ದಾರೆ. ಇಂಡಿಯನ್ ಅಕಾಡೆಮಿ ಆಫ್ ಸೈನ್ಸ್ನ ಫೆಲೋ ಆಗಿರುವ ಆಶುತೋಷ್ ಶರ್ಮಾ ಅವರಿಗೆ ನೈಸರ್ಗಿಕ ವಿಜ್ಞಾನ ಅಕಾಡೆಮಿಯ ಪ್ರಶಸ್ತಿ ಲಭಿಸಿದೆ.
ಚಂದ್ರಶೇಖರ್ ಖಾರೆ : ಗಣಿತ ಶಾಸ್ತ್ರದಲ್ಲಿ ಸಲ್ಲಿಸಿದ ಸೇವೆಯನ್ನು ಗುರುತಿಸಿ ಚಂದ್ರಶೇಖರ್ ಖಾರೆ ಅವರಿಗೆ ಪ್ರಶಸ್ತಿ ನೀಡಲಾಗಿದೆ. ಸಂಖ್ಯಾ ಶಾಸ್ತ್ರದಲ್ಲಿ ಚಂದ್ರಶೇಖರ್ ವಿಪುಲ ಅಧ್ಯಯನ ಮತ್ತು ಸಂಶೋಧನೆ ನಡೆಸಿದ್ದಾರೆ. ಲಾಸ್ ಏಂಜಲ್ಸ್ನ ಕ್ಯಾಲಿಫೋರ್ನಿಯಾ ವಿ.ವಿಯಲ್ಲಿ ಅವರು ಪ್ರೊಫೆಸರ್ ಆಗಿದ್ದಾರೆ.
ಅಮಿತಾ ಬಾವಿಸ್ಕರ್ : ಸಮಾಜ ವಿಜ್ಞಾನ ವಲಯದಲ್ಲಿ ಅನುಪಮ ಸೇವೆ ಸಲ್ಲಿಸಿದ್ದಕ್ಕಾಗಿ ಅಮಿತಾ ಬಾವಿಸ್ಕರ್ ಅವರಿಗೆ ಪ್ರಶಸ್ತಿ ನೀಡಲಾಗಿದೆ. ಪರಿಸರ, ಮಾಹಿತಿ ಮತ್ತು ಅಭಿವೃದ್ಧಿಪರ ಸಮಾಜ ವಿಜ್ಞಾನ ವಲಯದಲ್ಲಿ ಅಮಿತಾ ಬಾವಿಸ್ಕರ್ ಜನಪ್ರಿಯರಾಗಿದ್ದಾರೆ.
ನಂದಿನಿ ಸುಂದರ್ : ಸಾಮಾಜಿಕ ಮಾನವ ವಿಜ್ಞಾನ ವಲಯದಲ್ಲಿ ಸಂಶೋಧನೆಗಾಗಿ ನಂದಿನಿ ಸುಂದರ್ ಅವರಿಗೆ ಇನ್ಫೋಸಿಸ್ ಪ್ರಶಸ್ತಿ ಸಂದಿದೆ. ಬುಡಕಟ್ಟು ಜನರ ಸಾಮಾಜಿಕ ಜನಜೀವನ, ಆಧುನಿಕ ಭಾರತದ ಬಗೆಗಿನ ಜ್ಞಾನ ಹಾಗೂ ಇತರ ವಿಚಾರಗಳ ಬಗ್ಗೆ ಅವರು ಸಂಶೋಧನೆ ನಡೆಸಿದ್ದಾರೆ.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ












Click it and Unblock the Notifications