ಐವರಿಗೆ ಇನ್ಫೋಸಿಸ್ ವಿಜ್ಞಾನ ಪ್ರಶಸ್ತಿ

ಪ್ರಶಸ್ತಿಯು ತಲಾ 50 ಲಕ್ಷ ರೂ. ನಗದು, ಸ್ವರ್ಣ ಪದಕ, ಪ್ರಶಸ್ತಿ ಪತ್ರವನ್ನು ಒಳಗೊಂಡಿದೆ. ಮುಂಬೈನಲ್ಲಿ ಜನವರಿ 6ರಂದು ನಡೆಯಲಿರುವ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪ್ರಧಾನಿ ಮನಮೋಹನ್ ಸಿಂಗ್ ಅವರು ವಿಜ್ಞಾನಿಗಳಿಗೆ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ ಎಂದು ನಾರಾಯಣಮೂರ್ತಿ ತಿಳಿಸಿದರು.
ಪ್ರಶಸ್ತಿ ವಿಜೇತರ ವಿವರ ಇಂತಿದೆ
ಸಂದೀಪ್ ತ್ರಿವೇದಿ : ಭೌತ ವಿಜ್ಞಾನ ಕ್ಷೇತ್ರದಲ್ಲಿ ಸಲ್ಲಿಸಿದ ಸೇವೆಯನ್ನು ಪರಿಗಣಿಸಿ ಸಂದೀಪ್ ತ್ರಿವೇದಿಯವರಿಗೆ ಇನ್ಫೋಸಿಸ್ ಪ್ರಶಸ್ತಿ ನೀಡಲಾಗಿದೆ. 1985ರಲ್ಲಿ ಕಾನ್ಪುರದ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ ಭೌತಶಾಸ್ತ್ರದಲ್ಲಿ ಪಿಎಚ್ಡಿ ಪದವಿ ಪಡೆದ ಪ್ರೊ. ಸಂದೀಪ್ ತ್ರಿವೇದಿ ಅವರಿಗೆ ಶಾಂತಿ ಸ್ವರೂಪ್ ಭಟ್ನಾಗರ್ ಪ್ರಶಸ್ತಿ ಸೇರಿದಂತೆ ಹಲವಾರು ಪುರಸ್ಕಾರಗಳು ಸಂದಿವೆ.
ಆಶುತೋಷ್ ಶರ್ಮಾ : ಎಂಜಿನಿಯರಿಂಗ್ ಮತ್ತು ಕಂಪ್ಯೂಟರ್ ವಿಜ್ಞಾನ ವಲಯದಲ್ಲಿ ನಡೆಸಿದ ಸಂಶೋಧನೆಯನ್ನು ಗೌರವಿಸಿ ಆಶುತೋಷ್ ಶರ್ಮಾ ಅವರಿಗೆ ಇನ್ಫೋಸಿಸ್ ಪ್ರಶಸ್ತಿ ನೀಡಿದೆ. ಇಂಧನ ದಾಸ್ತಾನು, ಮೈಕ್ರೋ ಎಲೆಕ್ಟ್ರೊ ಮೆಕಾನಿಕಲ್ ಸಿಸ್ಟಮ್ಸ್ ಮುಂತಾದ ನಾನಾ ವಲಯಗಳಲ್ಲಿ ಅವರು ಶ್ರಮಿಸಿದ್ದಾರೆ. ಇಂಡಿಯನ್ ಅಕಾಡೆಮಿ ಆಫ್ ಸೈನ್ಸ್ನ ಫೆಲೋ ಆಗಿರುವ ಆಶುತೋಷ್ ಶರ್ಮಾ ಅವರಿಗೆ ನೈಸರ್ಗಿಕ ವಿಜ್ಞಾನ ಅಕಾಡೆಮಿಯ ಪ್ರಶಸ್ತಿ ಲಭಿಸಿದೆ.
ಚಂದ್ರಶೇಖರ್ ಖಾರೆ : ಗಣಿತ ಶಾಸ್ತ್ರದಲ್ಲಿ ಸಲ್ಲಿಸಿದ ಸೇವೆಯನ್ನು ಗುರುತಿಸಿ ಚಂದ್ರಶೇಖರ್ ಖಾರೆ ಅವರಿಗೆ ಪ್ರಶಸ್ತಿ ನೀಡಲಾಗಿದೆ. ಸಂಖ್ಯಾ ಶಾಸ್ತ್ರದಲ್ಲಿ ಚಂದ್ರಶೇಖರ್ ವಿಪುಲ ಅಧ್ಯಯನ ಮತ್ತು ಸಂಶೋಧನೆ ನಡೆಸಿದ್ದಾರೆ. ಲಾಸ್ ಏಂಜಲ್ಸ್ನ ಕ್ಯಾಲಿಫೋರ್ನಿಯಾ ವಿ.ವಿಯಲ್ಲಿ ಅವರು ಪ್ರೊಫೆಸರ್ ಆಗಿದ್ದಾರೆ.
ಅಮಿತಾ ಬಾವಿಸ್ಕರ್ : ಸಮಾಜ ವಿಜ್ಞಾನ ವಲಯದಲ್ಲಿ ಅನುಪಮ ಸೇವೆ ಸಲ್ಲಿಸಿದ್ದಕ್ಕಾಗಿ ಅಮಿತಾ ಬಾವಿಸ್ಕರ್ ಅವರಿಗೆ ಪ್ರಶಸ್ತಿ ನೀಡಲಾಗಿದೆ. ಪರಿಸರ, ಮಾಹಿತಿ ಮತ್ತು ಅಭಿವೃದ್ಧಿಪರ ಸಮಾಜ ವಿಜ್ಞಾನ ವಲಯದಲ್ಲಿ ಅಮಿತಾ ಬಾವಿಸ್ಕರ್ ಜನಪ್ರಿಯರಾಗಿದ್ದಾರೆ.
ನಂದಿನಿ ಸುಂದರ್ : ಸಾಮಾಜಿಕ ಮಾನವ ವಿಜ್ಞಾನ ವಲಯದಲ್ಲಿ ಸಂಶೋಧನೆಗಾಗಿ ನಂದಿನಿ ಸುಂದರ್ ಅವರಿಗೆ ಇನ್ಫೋಸಿಸ್ ಪ್ರಶಸ್ತಿ ಸಂದಿದೆ. ಬುಡಕಟ್ಟು ಜನರ ಸಾಮಾಜಿಕ ಜನಜೀವನ, ಆಧುನಿಕ ಭಾರತದ ಬಗೆಗಿನ ಜ್ಞಾನ ಹಾಗೂ ಇತರ ವಿಚಾರಗಳ ಬಗ್ಗೆ ಅವರು ಸಂಶೋಧನೆ ನಡೆಸಿದ್ದಾರೆ.
-
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ವಂದೇ ಭಾರತ್ ರೈಲಿನ ಊಟ ಸೇವಿಸಿದ ಮಹಿಳೆಗೆ ತೀವ್ರ ಅಲರ್ಜಿ, 2 ವರ್ಷದ ಮಗನಿಗೆ ಅತಿಸಾರ: IRCTC ಹೇಳಿದ್ದೇನು? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ? -
Oracle: ಒರಾಕಲ್ ಸಂಸ್ಥೆಯಲ್ಲಿ ವೆಚ್ಚ ಕಡಿತದ ಭಾಗವಾಗಿ ಕೆಲಸ ಕಳೆದುಕೊಂಡ 12,000 ಜನ, 30,000 ಜನರಿಗೆ ಸಂಕಷ್ಟ -
KSRTC: ಏಪ್ರಿಲ್ 10ರವರೆಗೆ ವಿದ್ಯಾರ್ಥಿಗಳ ಬಸ್ಪಾಸ್ ಅವಧಿ ವಿಸ್ತರಣೆ -
ಏಪ್ರಿಲ್ ಮೊದಲ ವಾರ ಬ್ಯಾಂಕ್ ಬಂದ್: ಗ್ರಾಹಕರು ಮುಂಚಿತವಾಗಿ ಯೋಜನೆ ಮಾಡಬೇಕು -
ನಮ್ಮ ಮೆಟ್ರೋ ಪ್ರಯಾಣಿಕರಿಗೆ ನಿರಾಸೆ: ಮೇ ತಿಂಗಳಿನಲ್ಲಿ ಆರಂಭವಾಗಬೇಕಿದ್ದ ಪಿಂಕ್ ಲೈನ್ ಸಂಚಾರ ವಿಳಂಬ ಸಾಧ್ಯತೆ -
ವಾಸ್ತು ಪ್ರಕಾರ ಬಾತ್ರೂಮ್ನಲ್ಲಿ ಉಪ್ಪು ಇಡುವುದರಿಂದ ಏನು ಲಾಭ? -
ಚಲಿಸುವ ರೈಲಿನ ಬೋಗಿಯಲ್ಲಿ ಬಟ್ಟೆ ಒಣಗಿಸಿದ ಪ್ರಯಾಣಿಕರು: Viral Video ನೋಡಿ ನೆಟ್ಟಿಗರು ಗರಂ -
ಹೋಟೆಲ್, ರೆಸ್ಟೋರೆಂಟ್ ಮಾಲೀಕರಿಗೆ ಶಾಕ್: ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಬರೋಬ್ಬರಿ 195 ರೂ. ಭಾರಿ ಏರಿಕೆ












Click it and Unblock the Notifications