ಅಬಕಾರಿ ಸಚಿವ ರೇಣುಕಾಜೀ ಫುಲ್ ಟೈಟ್ ಮಾತು

ಅಬಕಾರಿ ಇಲಾಖೆ ಬರಬೇಕಿರುವ ಬಾಕಿ ಮೊತ್ತ ವಸೂಲಿ ಹಾಗೂ ಮಾರಾಟ ಗುರಿಯನ್ನು ತಲುಪುವ ಉದ್ದೇಶದಿಂದ ಮದ್ಯಪಾನಕ್ಕೆ ಸಚಿವರು ಪ್ರೋತ್ಸಾಹ ನೀಡುತ್ತಿದ್ದಾರೆ ಅನ್ನೋದು ಬಲ್ಲ ಮೂಲಗಳ ವ್ಯಾಖ್ಯಾನ.
ಸ್ವಾಮೀಜಿಗಳು, ಮಠಾಧೀಶರ ಪಾನಗೋಷ್ಠಿ ಬಗ್ಗೆ ಸುದ್ದಿಗಾರರಿಗೆ ವಿವರ ನೀಡಿದ 'ಎಣ್ಣೆ' ಖಾತೆ ಸಚಿವರು, ನಂತರ ಜನ ಸಾಮಾನ್ಯರ ಆಚಾರ ವಿಚಾರಗಳನ್ನು ವಾಚಾಮ ಗೋಚಾರ ತೆಗಳಿದರು. "ಈಗ ಶಬರಿ ಮಲೆ ಮಾಲೆ ಹಾಕಿದವರು 15 ದಿನ ಎಲ್ಲವನ್ನು ಬಿಡುತ್ತೇವೆ ಎಂದು ಹೇಳುತ್ತಾರೆ. ಆದ್ರೆ, ಫುಲ್ ಟೈಟ್ ಆಗಿ, ಮಾಂಸ ಎಲ್ಲಾ ಸೇವಿಸ್ತಾರೆ. ಇನ್ನು ಕಾರ್ತೀಕ, ಶ್ರಾವಣ ಮಾಸದಲ್ಲಿ ಎಲ್ಲರು ಕದ್ದು ಮುಚ್ಚಿ ತಿಂದು ಕುಡಿಯುವುದನ್ನು ನೋಡಿದ್ದೇವೆ." ಪರಿಸ್ಥಿತಿ ಹೀಗಿದೆ ಎನ್ಮಾಡೋದು ಎಂದು ಸಚಿವರು ಹಲ್ಲುಕಿರಿದರು.
ಅಬಕಾರಿ ಇಲಾಖೆ ಟಾರ್ಗೆಟ್ : 'ಪಾನ ಮುಕ್ತಸಮಾಜ ಕಲ್ಪನೆ ಚೆನ್ನಾಗಿರುತ್ತದೆ. ಆದರೆ, ವಾಸ್ತವದಲ್ಲಿ ಇದು ಅಸಾಧ್ಯ ಎಂದರು. ರೇಣುಕಾಚಾರ್ಯರ ಈ ಮಾತಿನ ವೈಖರಿಗೂ ಒಂದು ಹಿನ್ನೆಲೆಯಿದೆ. ಅಬಕಾರಿ ಇಲಾಖೆಗೆ 7,500 ಕೋಟಿ ರು. ಆದಾಯ ಗುರಿ ನೀಡಲಾಗಿದೆ. ಪ್ರಸಕ್ತ ಆರ್ಥಿಕ ವರ್ಷದ ಮೊದಲ ಆರು ತಿಂಗಳಲ್ಲಿ 4,078 ಕೋಟಿ ರು ಗಳಿಸಿರುವ ಇಲಾಖೆ, ಮಾರ್ಚ್ 2011 ರೊಳಗೆ 8,500ಕೋಟಿ ರು ಗಳಿಸುವ ನಿರೀಕ್ಷೆ ಹೊಂದಿದೆ.
ಶಾಸಕರ ತಿಥಿ ಕಾರ್ಯ: ಈ ನಡುವೆ ಪಕ್ಕದ ಜಿಲ್ಲೆ ಚಿಕ್ಕಮಗಳೂರಿನಲ್ಲಿ ಪಕ್ಷದಿಂದ ಪಕ್ಷಕ್ಕೆ ಮಂಗಗಳಂತೆ ಹಾರುವ ಶಾಸಕರು, ಬಂಡಾಯ ಎದ್ದು ರೆಸಾರ್ಟ್ ನಲ್ಲೇ ಕಾಲದೂಡುತ್ತಿರುವ ರಾಜಕೀಯ ನಾಯಕರ ಅಣುಕು ಶವಯಾತ್ರೆ ನಡೆಸಿ, ತಿಥಿ ಮಾಡುವ ಮೂಲಕ ಪ್ರತಿಭಟನೆ ನಡೆಸಲಾಯಿತು. ಕಾಂಗ್ರೆಸ್ ನ ಬಂಗಾರಪೇಟೆಯ ನಾರಾಯಣ ಸ್ವಾಮಿ ಹಾಗೂ ಜಗಳೂರು ಕ್ಷೇತ್ರದ ರಾಮಚಂದ್ರ ಭಾವಚಿತ್ರಕ್ಕೆ ಹೂವಿನ ಹಾರ ಹಾಕಿ ಶ್ರದ್ಧಾಂಜಲಿ ಅರ್ಪಿಸಲಾಯಿತು. ನಂತರ ಚಿತ್ರದ ಮುಂದಿಟ್ಟ ಎಡೆಯನ್ನು ಬೀದಿ ನಾಯಿಗಳಿಗೆ ಕಾಂಗ್ರೆಸ್ ಕಾರ್ಯಕರ್ತರು ಹಂಚಿದರು.
ವಿಡಿಯೋಗಳು:.ದೇವೇಗೌಡ ಆಧುನಿಕ ಭಸ್ಮಾಸುರ: ಬಚ್ಚೇಗೌಡ | ಖೆಡ್ಡಾಕ್ಕೆ ಬಿದ್ದ ಬಿಜೆಪಿ ಶಾಸಕ ಸುರೇಶ್ ಗೌಡ |ಶಾಸಕನಿಗೆ ಡಿಮ್ಯಾಂಡು |
ರಿಂಗ ರಿಂಗಾ ಪಾಲಿಟಿಕ್ಸ್ ರಿಮಿಕ್ಸ್ | ಟ್ವಿಟ್ಟರಲ್ಲಿ ಹಿಂಬಾಲಿಸಿ | ಫ್ಯಾನ್ ಕ್ಲಬ್ ಸೇರಿರಿ | ಮೊಬೈಲಲ್ಲಿ ಸುದ್ದಿ | ಹೂವಿನಂಗಡಿ 24/7 | ಕನ್ನಡ ಸುದ್ದಿಗಳ SMS
-
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
ಮಂಡ್ಯದಲ್ಲಿ 500 ಎಕರೆ ಆಟೋ ಕೈಗಾರಿಕಾ ಹಬ್: ಎಂಬಿ ಪಾಟೀಲ, ಎಚ್ಡಿ ಕುಮಾರಸ್ವಾಮಿ ಮಹತ್ವದ ಚರ್ಚೆ -
April 13 Horoscope: 12 ರಾಶಿಗಳಿಗೆ ಇಂದು ಪ್ರೇಮ, ಹಣಕಾಸು, ಉದ್ಯೋಗದಲ್ಲಿ ಏನು ಹೇಳುತ್ತದೆ ನಿಮ್ಮ ರಾಶಿ? -
Bengaluru power cut: ಬೆಂಗಳೂರಿನ ಹಲವೆಡೆ ಹೆಚ್ಚಾಯ್ತು ದಿಢೀರ್ ಪವರ್ ಕಟ್, ಹೈರಾಣಾದ ಜನ: ಬೆಸ್ಕಾಂ ಕೊಟ್ಟ ಉತ್ತರ ಇಲ್ಲಿದೆ -
School Holiday: ರಾಜ್ಯದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ: ದಸರಾ, ಬೇಸಿಗೆ ರಜೆ, ಕೆಲಸದ ದಿನಗಳ ವಿವರ -
PUC ವಿದ್ಯಾರ್ಥಿಗಳಿಗೆ ಗುಡ್ನ್ಯೂಸ್: ಇದೇ ವರ್ಷದಿಂದಲೇ ಸಿಗಲಿವೆ ಉಚಿತ ಪಠ್ಯ ಪುಸ್ತಕ -
Hardik vs Krunal: ತಮ್ಮ ಹಾರ್ದಿಕ್ ವಿಕೆಟ್ ಕಿತ್ತ ಬೌಲರ್ಗಿಂತ ಹೆಚ್ಚಾಗಿ ಸಂಭ್ರಮಿಸಿದ ಕೃನಾಲ್ ಪಾಂಡ್ಯ, ಭಾರಿ ವೈರಲ್ -
Namma Metro: ಪ್ರಯಾಣಿಕರಿಗೆ ಸಿಹಿ ಸುದ್ದಿ, ಹಳದಿ ಮಾರ್ಗಕ್ಕಾಗಿ ಬಂತು ಹೊಸ ಡ್ರೈವರ್ ಲೆಸ್ ರೈಲು












Click it and Unblock the Notifications