ಅಬಕಾರಿ ಸಚಿವ ರೇಣುಕಾಜೀ ಫುಲ್ ಟೈಟ್ ಮಾತು

ಅಬಕಾರಿ ಇಲಾಖೆ ಬರಬೇಕಿರುವ ಬಾಕಿ ಮೊತ್ತ ವಸೂಲಿ ಹಾಗೂ ಮಾರಾಟ ಗುರಿಯನ್ನು ತಲುಪುವ ಉದ್ದೇಶದಿಂದ ಮದ್ಯಪಾನಕ್ಕೆ ಸಚಿವರು ಪ್ರೋತ್ಸಾಹ ನೀಡುತ್ತಿದ್ದಾರೆ ಅನ್ನೋದು ಬಲ್ಲ ಮೂಲಗಳ ವ್ಯಾಖ್ಯಾನ.
ಸ್ವಾಮೀಜಿಗಳು, ಮಠಾಧೀಶರ ಪಾನಗೋಷ್ಠಿ ಬಗ್ಗೆ ಸುದ್ದಿಗಾರರಿಗೆ ವಿವರ ನೀಡಿದ 'ಎಣ್ಣೆ' ಖಾತೆ ಸಚಿವರು, ನಂತರ ಜನ ಸಾಮಾನ್ಯರ ಆಚಾರ ವಿಚಾರಗಳನ್ನು ವಾಚಾಮ ಗೋಚಾರ ತೆಗಳಿದರು. "ಈಗ ಶಬರಿ ಮಲೆ ಮಾಲೆ ಹಾಕಿದವರು 15 ದಿನ ಎಲ್ಲವನ್ನು ಬಿಡುತ್ತೇವೆ ಎಂದು ಹೇಳುತ್ತಾರೆ. ಆದ್ರೆ, ಫುಲ್ ಟೈಟ್ ಆಗಿ, ಮಾಂಸ ಎಲ್ಲಾ ಸೇವಿಸ್ತಾರೆ. ಇನ್ನು ಕಾರ್ತೀಕ, ಶ್ರಾವಣ ಮಾಸದಲ್ಲಿ ಎಲ್ಲರು ಕದ್ದು ಮುಚ್ಚಿ ತಿಂದು ಕುಡಿಯುವುದನ್ನು ನೋಡಿದ್ದೇವೆ." ಪರಿಸ್ಥಿತಿ ಹೀಗಿದೆ ಎನ್ಮಾಡೋದು ಎಂದು ಸಚಿವರು ಹಲ್ಲುಕಿರಿದರು.
ಅಬಕಾರಿ ಇಲಾಖೆ ಟಾರ್ಗೆಟ್ : 'ಪಾನ ಮುಕ್ತಸಮಾಜ ಕಲ್ಪನೆ ಚೆನ್ನಾಗಿರುತ್ತದೆ. ಆದರೆ, ವಾಸ್ತವದಲ್ಲಿ ಇದು ಅಸಾಧ್ಯ ಎಂದರು. ರೇಣುಕಾಚಾರ್ಯರ ಈ ಮಾತಿನ ವೈಖರಿಗೂ ಒಂದು ಹಿನ್ನೆಲೆಯಿದೆ. ಅಬಕಾರಿ ಇಲಾಖೆಗೆ 7,500 ಕೋಟಿ ರು. ಆದಾಯ ಗುರಿ ನೀಡಲಾಗಿದೆ. ಪ್ರಸಕ್ತ ಆರ್ಥಿಕ ವರ್ಷದ ಮೊದಲ ಆರು ತಿಂಗಳಲ್ಲಿ 4,078 ಕೋಟಿ ರು ಗಳಿಸಿರುವ ಇಲಾಖೆ, ಮಾರ್ಚ್ 2011 ರೊಳಗೆ 8,500ಕೋಟಿ ರು ಗಳಿಸುವ ನಿರೀಕ್ಷೆ ಹೊಂದಿದೆ.
ಶಾಸಕರ ತಿಥಿ ಕಾರ್ಯ: ಈ ನಡುವೆ ಪಕ್ಕದ ಜಿಲ್ಲೆ ಚಿಕ್ಕಮಗಳೂರಿನಲ್ಲಿ ಪಕ್ಷದಿಂದ ಪಕ್ಷಕ್ಕೆ ಮಂಗಗಳಂತೆ ಹಾರುವ ಶಾಸಕರು, ಬಂಡಾಯ ಎದ್ದು ರೆಸಾರ್ಟ್ ನಲ್ಲೇ ಕಾಲದೂಡುತ್ತಿರುವ ರಾಜಕೀಯ ನಾಯಕರ ಅಣುಕು ಶವಯಾತ್ರೆ ನಡೆಸಿ, ತಿಥಿ ಮಾಡುವ ಮೂಲಕ ಪ್ರತಿಭಟನೆ ನಡೆಸಲಾಯಿತು. ಕಾಂಗ್ರೆಸ್ ನ ಬಂಗಾರಪೇಟೆಯ ನಾರಾಯಣ ಸ್ವಾಮಿ ಹಾಗೂ ಜಗಳೂರು ಕ್ಷೇತ್ರದ ರಾಮಚಂದ್ರ ಭಾವಚಿತ್ರಕ್ಕೆ ಹೂವಿನ ಹಾರ ಹಾಕಿ ಶ್ರದ್ಧಾಂಜಲಿ ಅರ್ಪಿಸಲಾಯಿತು. ನಂತರ ಚಿತ್ರದ ಮುಂದಿಟ್ಟ ಎಡೆಯನ್ನು ಬೀದಿ ನಾಯಿಗಳಿಗೆ ಕಾಂಗ್ರೆಸ್ ಕಾರ್ಯಕರ್ತರು ಹಂಚಿದರು.
ವಿಡಿಯೋಗಳು:.ದೇವೇಗೌಡ ಆಧುನಿಕ ಭಸ್ಮಾಸುರ: ಬಚ್ಚೇಗೌಡ | ಖೆಡ್ಡಾಕ್ಕೆ ಬಿದ್ದ ಬಿಜೆಪಿ ಶಾಸಕ ಸುರೇಶ್ ಗೌಡ |ಶಾಸಕನಿಗೆ ಡಿಮ್ಯಾಂಡು |
ರಿಂಗ ರಿಂಗಾ ಪಾಲಿಟಿಕ್ಸ್ ರಿಮಿಕ್ಸ್ | ಟ್ವಿಟ್ಟರಲ್ಲಿ ಹಿಂಬಾಲಿಸಿ | ಫ್ಯಾನ್ ಕ್ಲಬ್ ಸೇರಿರಿ | ಮೊಬೈಲಲ್ಲಿ ಸುದ್ದಿ | ಹೂವಿನಂಗಡಿ 24/7 | ಕನ್ನಡ ಸುದ್ದಿಗಳ SMS
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ












Click it and Unblock the Notifications