ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ತಮಿಳುನಾಡಿಗೆ ಕಾವೇರಿ ನೀರು ಬಿಡಲ್ಲ : ಸಿಎಂ

By Mrutyunjaya Kalmat
|
Google Oneindia Kannada News

Yeddyurappa
ಬೆಂಗಳೂರು, ಅ. 28 : ತಮಿಳುನಾಡಿಗೆ ಕಾವೇರಿ ನೀರು ಬಿಡದಿರಲು ಮುಖ್ಯಮಂತ್ರಿ ನೇತೃತ್ವದಲ್ಲಿ ನಡೆದ ಸರ್ವಪಕ್ಷಗಳ ಮುಖಂಡರ ಸಭೆ ಒಮ್ಮತದ ನಿರ್ಧಾರ ಕೈಗೊಂಡಿದೆ. ಸರಕಾರದ ಅಸ್ಥಿರತೆ, ಪರಸ್ಪರ ಟೀಕೆ ನಡುವೆಯೂ ಕಾವೇರಿ ವಿಷಯದಲ್ಲಿ ಅಪರೂದ ಒಗ್ಗಟ್ಟು ಪ್ರದರ್ಶಿಸಿದ ಆಡಳಿತ, ಪ್ರತಿಪಕ್ಷ ಮುಖಂಡರು ಯಾವುದೇ ಕಾರಣಕ್ಕೂ ತಮಿಳುನಾಡಿನ ಒತ್ತಡಕ್ಕೆ ಮಣಿಯಬಾರದು ಎಂಬ ತೀರ್ಮಾನ ತೆಗೆದುಕೊಂಡರು.

ತುರ್ತಾಗಿ ಕಾವೇರಿ ನೀರು ಒದಗಿಸುವಂತೆ ತಮಿಳುನಾಡು ಮುಖ್ಯಮಂತ್ರಿ ಕರುಣಾನಿಧಿ ರಾಜ್ಯ ಸರಕಾರಕ್ಕೆ ಪತ್ರ ಬರೆದಿದ್ದರು. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಗೃಹ ಕಚೇರಿ ಕೃಷ್ಣಾದಲ್ಲಿ ಬುಧವಾರ ಸಂಜೆ ಸರ್ವಪಕ್ಷ ಮುಖಂಡರ ಮಹತ್ವದ ಸಭೆ ನಡೆಯಿತು. ಕಾವೇರಿ ಕೊಳ್ಳದ ರೈತರ ಹಿತದೃಷ್ಟಿಯಿಂದ ಈ ನಿರ್ಧಾರ ತೆಗೆದುಕೊಳ್ಳ ಲಾಗಿದೆ.

ಈಗ ತಮಿಳುನಾಡಿಗೆ ನೀರು ಕೊಡಲು ಸಾಧ್ಯವಿಲ್ಲ. ಕೃಷ್ಣರಾಜಸಾಗರ ಆಣೆಕಟ್ಟೆ ತುಂಬಿದ ಬಳಿಕ ಸಹಜವಾಗಿ ಹೆಚ್ಚುವರಿ ನೀರು ಹರಿದು ಹೋಗಲಿದೆ. ಅಲ್ಲಿಯವರೆಗೆ ತಮಿಳುನಾಡು ಕಾಯಬೇಕು ಎಂದು ಸಭೆ ಬಳಿಕ ಮಾತನಾಡಿದ ಜಲಸಂಪನ್ಮೂಲ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದರು. ವಯನಾಡು ಹಾಗೂ ಕೊಡಗಿನಲ್ಲಿ ವ್ಯಾಪಕ ಮಳೆಯಾಗುತ್ತಿದೆ. ಕೃಷ್ಣರಾಜಸಾಗರ ದಲ್ಲಿ 17 ಸಾವಿರ ಕ್ಯೂಸೆಕ್ ಒಳಹರಿವು ಇದೆ. ಆಣೆಕಟ್ಟೆ 124.8 ಅಡಿ ಎತ್ತರವಿದೆ. ಶೀಘ್ರದಲ್ಲಿ ನೀರು ಈ ಮಟ್ಟ ತಲುಪಬಹುದೆಂದು ನಿರೀಕ್ಷಿಸಲಾಗಿದೆ. ಆಗ ತುಂಬಿ ಹರಿಯುವ ನೀರು ತಮಿಳುನಾಡಿಗೆ ಸಿಗಲಿದೆ ಎಂದು ಹೇಳಿದರು.

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X