ಆರು ತಿಂಗಳ ಒಳಗಾಗಿ ಚುನಾವಣೆ ನಿಶ್ಚಿತ?
ಬಂಡಾಯ ಎದ್ದಿದ್ದ ಶಾಸಕರನ್ನು ಅನರ್ಹಗೊಳಿಸಿದ ದಿನ(Anti Defaction Law ಬಳಸಿ) ವೇ ಕೇಂದ್ರ ಚುನಾವಣಾ ಆಯೋಗಕ್ಕೆ ಮಾಹಿತಿ ನೀಡಿದ್ದೇನೆ ಎಂದು ಸ್ಪೀಕರ್ ಕೆ.ಜಿ.ಬೋಪಯ್ಯ ಹೇಳುತ್ತಾರೆ. ಆದರೆ ಶಾಸಕರನ್ನು ಅನರ್ಹಗೊಳಿಸಿರುವ ಸಂಬಂಧ ತಮಗೆ ಈವರೆಗೆ ಯಾವುದೇ ಪತ್ರ ಬಂದಿಲ್ಲ ಎಂದು ಸಿ.ಎಸ್.ಸುರಂಜನ ಸ್ಪಷ್ಟಪಡಿಸಿದ್ದಾರೆ.
'ಶಾಸಕರನ್ನು ಅನರ್ಹಗೊಳಿಸಿರುವ ಸಂಬಂಧ ಕೇಂದ್ರ ಚುನಾವಣಾ ಆಯೋಗಕ್ಕೆ ನೇರವಾಗಿ ಪತ್ರ ಹೋದರೂ, ನಮ್ಮ ಕಚೇರಿಗೂ ಒಂದು ಪ್ರತಿ ಕಳುಹಿಸಬೇಕು. ಮೂವರು ಶಾಸಕರು (ಎಂ.ಸಿ. ಅಶ್ವತ್ಥ್, ಎಸ್.ವಿ.ರಾಮಚಂದ್ರ ಮತ್ತು ಎಂ.ನಾರಾಯಣಸ್ವಾಮಿ) ರಾಜೀನಾಮೆ ನೀಡಿರುವ ಕುರಿತು ಪತ್ರ ಬಂದಿದೆ. ಆದರೆ 11 ಶಾಸಕರ ಅನರ್ಹತೆ ಬಗ್ಗೆ ಯಾವುದೇ ಮಾಹಿತಿ ಬಂದಿಲ್ಲ" ಎಂದು ಸುರಂಜನ ತಿಳಿಸಿದರು.
ಯಾವುದೇ ಶಾಸಕ ರಾಜೀನಾಮೆ ನೀಡಿದ ಬಳಿಕ ಖಾಲಿ ಉಳಿಯುವ ಕ್ಷೇತ್ರಕ್ಕೆ ಆರು ತಿಂಗಳ ಒಳಗಾಗಿ ಚುನಾವಣೆ ನಡೆಸಲೇಬೇಕು. ಆದರೆ, ಅನರ್ಹಗೊಂಡಿರುವ ಸದಸ್ಯರು ಸುಪ್ರೀಂಕೋರ್ಟ್ಗೆ ಅರ್ಜಿ ಸಲ್ಲಿಸಿ, ಚುನಾವಣೆ ಪ್ರಕ್ರಿಯೆಗೆ ನ್ಯಾಯಾಲಯ ತಡೆಯಾಜ್ಞೆ ನೀಡಿದರೆ ಚುನಾವಣಾ ಆಯೋಗ ಏನನ್ನೂ ಮಾಡುವಂತಿಲ್ಲ. ಇಲ್ಲವಾದರೆ ಆರು ತಿಂಗಳೊಳಗೆ ಚುನಾವಣೆ ನಡೆಸಲೇಬೇಕಾಗುತ್ತದೆ' ಎಂದು ಸುಪ್ರೀಂಕೋರ್ಟ್ ನ ಹಿರಿಯ ವಕೀಲರು ಅಭಿಪ್ರಾಯಪಟ್ಟಿದ್ದಾರೆ.
ಹಾಲಿ ಶಾಸಕ ಸ್ಥಾನದಿಂದ ಮಾತ್ರ ಅನರ್ಹಗೊಂಡಿರುವುದರಿಂದ ಮುಂದೆ ನಡೆಯುವ ಉಪ ಚುನಾವಣೆಯಲ್ಲೂ ಸ್ಪರ್ಧಿಸಬಹುದು. ಅನರ್ಹಗೊಂಡಿರುವ ಸದಸ್ಯರು ಮುಂದೆ ಚುನಾವಣೆಯಲ್ಲಿ ಸ್ಪರ್ಧಿಸದಂತೆ ನಿರ್ಬಂಧ ಇಲ್ಲ ಎಂದು ವಕೀಲ ಭಟ್ ತಿಳಿಸಿದರು.
ವಿಡಿಯೋಗಳು:.ದೇವೇಗೌಡ
ಆಧುನಿಕ
ಭಸ್ಮಾಸುರ:
ಬಚ್ಚೇಗೌಡ
|
ಖೆಡ್ಡಾಕ್ಕೆ
ಬಿದ್ದ
ಬಿಜೆಪಿ
ಶಾಸಕ
ಸುರೇಶ್
ಗೌಡ
|ಶಾಸಕನಿಗೆ
ಡಿಮ್ಯಾಂಡು
|
ರಿಂಗ
ರಿಂಗಾ
ಪಾಲಿಟಿಕ್ಸ್
ರಿಮಿಕ್ಸ್
|
ಟ್ವಿಟ್ಟರಲ್ಲಿ
ಹಿಂಬಾಲಿಸಿ
|
ಫ್ಯಾನ್
ಕ್ಲಬ್
ಸೇರಿರಿ
|
ಮೊಬೈಲಲ್ಲಿ
ಸುದ್ದಿ
|
ಹೂವಿನಂಗಡಿ
24/7
|
ಕನ್ನಡ
ಸುದ್ದಿಗಳ
SMS